<p>ರಾಮನಗರ: ವೈದ್ಯ ಪದ್ಧತಿಯನ್ನು ವೃತ್ತಿಯೆಂದು ಪರಿಗಣಿಸದೆ ಇದೊಂದು ಸೇವಾ ಕ್ಷೇತ್ರವೆಂದು ಪರಿಗಣಿಸಬೇಕು. ಯಾವುದೇ ಕಾರಣಕ್ಕು ವೃತ್ತಿಯನ್ನು ವ್ಯಾಪಾರೀಕರಣ ಮಾಡಬಾರದು ಎಂದು ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಎನ್.ರುದ್ರಮುನಿ ತಿಳಿಸಿದರು.<br /> <br /> ನಗರದ ಹೋಲಿ ಕ್ರಸೆಂಟ್ ಆಂಗ್ಲಶಾಲೆಯಲ್ಲಿ ರೋಟರಿ ಸಂಸ್ಥೆ ವತಿಯಿಂದ ಇತ್ತೀಚೆಗೆ ನಡೆದ ವೈದ್ಯರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ವೈದ್ಯ ವೃತ್ತಿಯಲ್ಲಿ ಹಣ ಗಳಿಸುವುದೇ ಮುಖ್ಯ ಗುರಿಯಾಗಬಾರದು. ಸೇವೆ ಮಾಡುವ ಮನಸ್ಸು ಇರಬೇಕು. ವೈದ್ಯರನ್ನು ಜನರು ದೇವರಂತೆ ಭಾವಿಸಿದ್ದಾರೆ. ಆದ್ದರಿಂದ ವೈದ್ಯರು ಇದಕ್ಕೆ ಬದ್ಧರಾಗಿ ಸೇವೆಯನ್ನು ವಿನಿಯೋಗಿಸಬೇಕು ಎಂದು ಕಿವಿಮಾತು ಹೇಳಿದರು.<br /> <br /> ವೈದ್ಯರು ಜೀವಗಳ ಜೊತೆ ಕರ್ತವ್ಯ ನಿರ್ವಹಿಸುವಂತವರು. ಆದ್ದರಿಂದ ಪ್ರಾಮಾಣಿಕತೆ, ದಕ್ಷತೆ, ಕರ್ತವ್ಯದ ಬಗೆಗೆ ಉತ್ಸಾಹ ಇರಬೇಕು. ಈ ನಿಟ್ಟಿನಲ್ಲಿ ಸೇವಾ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕು. ಕೇವಲ ವೈದ್ಯ ವೃತ್ತಿಯ ಪದವಿಗಳಿಸಿದರೆ ಸಾಲದು, ಪದವಿಯ ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ಹೊಂದಬೇಕು. ವೃತ್ತಿಯಲ್ಲಿ ಕಾಳಜಿ, ಪ್ರೀತಿ ಇರಬೇಕು ಎಂದು ಹೇಳಿದರು.<br /> <br /> ರೋಟರಿ ಸಂಸ್ಥೆಯ ಅಧ್ಯಕ್ಷ ಆರ್.ವಿ.ಸುರೇಶ್ ಮಾತನಾಡಿ, ರೋಟರಿ ಸಂಸ್ಥೆಯ ಮೂಲಕ ಸಮಾಜಕ್ಕೆ ಅನುಕೂಲವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ತಿಳಿಸಿದರು. <br /> <br /> ಸನ್ಮಾನವನ್ನು ಸ್ವೀಕರಿಸಿದ ಡಾ. ಜಿ.ವಿ. ಸತ್ಯನಾರಾಯಣ ಮಾತನಾಡಿ, ಸನ್ಮಾನದಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡಲು ಪ್ರೋತ್ಸಾಹ ದೊರೆತಿದೆ ಎಂದರು.<br /> <br /> ಕಾರ್ಯದರ್ಶಿ ಡಿ.ಪುಟ್ಟಸ್ವಾಮಯ್ಯ, ನಿಕಟಪೂರ್ವ ಅಧ್ಯಕ್ಷ ಕೆ.ಗೋಪಾಲ್, ಕಾರ್ಯದರ್ಶಿ ಅಲ್ತಾಫ್ ಅಹಮದ್, ಎಂ.ಚಂದ್ರಶೇಖರ್, ಪಟೇಲ್ ಸಿ.ರಾಜು, ಎ.ಎನ್.ನಾಗರಾಜ್, ಕೆ.ಸಿದ್ದೇಗೌಡ, ಎಚ್.ಚಂದ್ರಶೇಖರ್, ಆರ್.ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ವೈದ್ಯ ಪದ್ಧತಿಯನ್ನು ವೃತ್ತಿಯೆಂದು ಪರಿಗಣಿಸದೆ ಇದೊಂದು ಸೇವಾ ಕ್ಷೇತ್ರವೆಂದು ಪರಿಗಣಿಸಬೇಕು. ಯಾವುದೇ ಕಾರಣಕ್ಕು ವೃತ್ತಿಯನ್ನು ವ್ಯಾಪಾರೀಕರಣ ಮಾಡಬಾರದು ಎಂದು ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಎನ್.ರುದ್ರಮುನಿ ತಿಳಿಸಿದರು.<br /> <br /> ನಗರದ ಹೋಲಿ ಕ್ರಸೆಂಟ್ ಆಂಗ್ಲಶಾಲೆಯಲ್ಲಿ ರೋಟರಿ ಸಂಸ್ಥೆ ವತಿಯಿಂದ ಇತ್ತೀಚೆಗೆ ನಡೆದ ವೈದ್ಯರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ವೈದ್ಯ ವೃತ್ತಿಯಲ್ಲಿ ಹಣ ಗಳಿಸುವುದೇ ಮುಖ್ಯ ಗುರಿಯಾಗಬಾರದು. ಸೇವೆ ಮಾಡುವ ಮನಸ್ಸು ಇರಬೇಕು. ವೈದ್ಯರನ್ನು ಜನರು ದೇವರಂತೆ ಭಾವಿಸಿದ್ದಾರೆ. ಆದ್ದರಿಂದ ವೈದ್ಯರು ಇದಕ್ಕೆ ಬದ್ಧರಾಗಿ ಸೇವೆಯನ್ನು ವಿನಿಯೋಗಿಸಬೇಕು ಎಂದು ಕಿವಿಮಾತು ಹೇಳಿದರು.<br /> <br /> ವೈದ್ಯರು ಜೀವಗಳ ಜೊತೆ ಕರ್ತವ್ಯ ನಿರ್ವಹಿಸುವಂತವರು. ಆದ್ದರಿಂದ ಪ್ರಾಮಾಣಿಕತೆ, ದಕ್ಷತೆ, ಕರ್ತವ್ಯದ ಬಗೆಗೆ ಉತ್ಸಾಹ ಇರಬೇಕು. ಈ ನಿಟ್ಟಿನಲ್ಲಿ ಸೇವಾ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕು. ಕೇವಲ ವೈದ್ಯ ವೃತ್ತಿಯ ಪದವಿಗಳಿಸಿದರೆ ಸಾಲದು, ಪದವಿಯ ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ಹೊಂದಬೇಕು. ವೃತ್ತಿಯಲ್ಲಿ ಕಾಳಜಿ, ಪ್ರೀತಿ ಇರಬೇಕು ಎಂದು ಹೇಳಿದರು.<br /> <br /> ರೋಟರಿ ಸಂಸ್ಥೆಯ ಅಧ್ಯಕ್ಷ ಆರ್.ವಿ.ಸುರೇಶ್ ಮಾತನಾಡಿ, ರೋಟರಿ ಸಂಸ್ಥೆಯ ಮೂಲಕ ಸಮಾಜಕ್ಕೆ ಅನುಕೂಲವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ತಿಳಿಸಿದರು. <br /> <br /> ಸನ್ಮಾನವನ್ನು ಸ್ವೀಕರಿಸಿದ ಡಾ. ಜಿ.ವಿ. ಸತ್ಯನಾರಾಯಣ ಮಾತನಾಡಿ, ಸನ್ಮಾನದಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡಲು ಪ್ರೋತ್ಸಾಹ ದೊರೆತಿದೆ ಎಂದರು.<br /> <br /> ಕಾರ್ಯದರ್ಶಿ ಡಿ.ಪುಟ್ಟಸ್ವಾಮಯ್ಯ, ನಿಕಟಪೂರ್ವ ಅಧ್ಯಕ್ಷ ಕೆ.ಗೋಪಾಲ್, ಕಾರ್ಯದರ್ಶಿ ಅಲ್ತಾಫ್ ಅಹಮದ್, ಎಂ.ಚಂದ್ರಶೇಖರ್, ಪಟೇಲ್ ಸಿ.ರಾಜು, ಎ.ಎನ್.ನಾಗರಾಜ್, ಕೆ.ಸಿದ್ದೇಗೌಡ, ಎಚ್.ಚಂದ್ರಶೇಖರ್, ಆರ್.ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>