<p><strong>ಬಾದಾಮಿ: </strong>ಶಿವಯೋಗಮಂದಿರದಲ್ಲಿ ಲಿಂ. ಹಾನಗಲ್ ಕುಮಾರ ಶಿವಯೋಗಿಗಳ ರಥೋತ್ಸವವು ಶುಕ್ರವಾರ ಸಹಸ್ರಾರು ಭಕ್ತರ ಸಾಕ್ಷಿಯಾಗಿ ಸಂಭ್ರಮದಿಂದ ಜರುಗಿತು.<br /> <br /> ರಥದಲ್ಲಿ ಲಿಂ. ಹಾನಗಲ್ ಕುಮಾರ ಶಿವಯೋಗಿಗಳ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ರಥವನ್ನು ಪುಷ್ಪ ಮಾಲೆಯಿಂದ ಶೃಂಗರಿಸಲಾಗಿತ್ತು.</p>.<p><br /> ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷ ಸಂಗನಬಸವ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು.ಭಕ್ತರು ರಥವನ್ನು ಎಳೆಯುತ್ತಿದ್ದಂತೆ ಕುಮಾರೇಶ್ವರನಿಗೆ ಜಯವಾಗಲಿ ಎಂದು ಭಕ್ತರ ಘೋಷಣೆ ಮೊಳಗಿದವು. ಭಕ್ತರು ರಥಕ್ಕೆ ಪುಷ್ಪವನ್ನು ಎಸೆದು ಕೃತಾರ್ಥರಾದರು.<br /> <br /> ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಶ್ರೀಗಳು, ಹುಬ್ಬಳ್ಳಿಯ ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಮತ್ತು ಶಿವಯೋಗಮಂದಿರದಲ್ಲಿ ಅಧ್ಯಯನಗೈದ ವಿವಿಧ ಮಠಾಧೀಶರು, ಮಂದಿರದ ವಟುಗಳು ರಥಕ್ಕೆ ಪೂಜೆಯನ್ನು ಸಲ್ಲಿಸಿದರು.<br /> <br /> ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಶಿವಾನಂದ ಕೌಜಲಗಿ ಎಂ.ಬಿ. ಹಂಗರಗಿ, ಮುಕ್ಕಣ್ಣ ಜನಾಲಿ, ಮತ್ತಿತರ ಗಣ್ಯರು ಮತ್ತು ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.<br /> <br /> ರಥೋತ್ಸವ ಮುಗಿದ ನಂತರ ಸುತ್ತಲಿನ ಗ್ರಾಮಗಳ ಭಕ್ತರು ಲಿಂ. ಹಾನಗಲ್ ಕುಮಾರ ಶಿವಯೋಗಿಗಳ ಗದ್ದುಗೆಗೆ ಶ್ರದ್ಧೆ ಭಕ್ತಿಯಿಂದ ಪೂಜೆಯನ್ನು ಸಲ್ಲಿಸಿದರು.<br /> <br /> ರಥೋತ್ಸವಕ್ಕೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ಭಾಗವಹಿಸಿ ರಥವನ್ನು ಎಳೆದು ಕೃತರ್ಥರಾದರು. ರಥೋತ್ಸವದ ಉದ್ದಕ್ಕೂ ಭಕ್ತಾದಿಗಳು ಶಿವಯೋಗಿಗಳ ಭಜೆಯಲ್ಲಿ ತೊಡಗಿ ದೇವರನ್ನು ಆರಾಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ: </strong>ಶಿವಯೋಗಮಂದಿರದಲ್ಲಿ ಲಿಂ. ಹಾನಗಲ್ ಕುಮಾರ ಶಿವಯೋಗಿಗಳ ರಥೋತ್ಸವವು ಶುಕ್ರವಾರ ಸಹಸ್ರಾರು ಭಕ್ತರ ಸಾಕ್ಷಿಯಾಗಿ ಸಂಭ್ರಮದಿಂದ ಜರುಗಿತು.<br /> <br /> ರಥದಲ್ಲಿ ಲಿಂ. ಹಾನಗಲ್ ಕುಮಾರ ಶಿವಯೋಗಿಗಳ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ರಥವನ್ನು ಪುಷ್ಪ ಮಾಲೆಯಿಂದ ಶೃಂಗರಿಸಲಾಗಿತ್ತು.</p>.<p><br /> ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷ ಸಂಗನಬಸವ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು.ಭಕ್ತರು ರಥವನ್ನು ಎಳೆಯುತ್ತಿದ್ದಂತೆ ಕುಮಾರೇಶ್ವರನಿಗೆ ಜಯವಾಗಲಿ ಎಂದು ಭಕ್ತರ ಘೋಷಣೆ ಮೊಳಗಿದವು. ಭಕ್ತರು ರಥಕ್ಕೆ ಪುಷ್ಪವನ್ನು ಎಸೆದು ಕೃತಾರ್ಥರಾದರು.<br /> <br /> ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಶ್ರೀಗಳು, ಹುಬ್ಬಳ್ಳಿಯ ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಮತ್ತು ಶಿವಯೋಗಮಂದಿರದಲ್ಲಿ ಅಧ್ಯಯನಗೈದ ವಿವಿಧ ಮಠಾಧೀಶರು, ಮಂದಿರದ ವಟುಗಳು ರಥಕ್ಕೆ ಪೂಜೆಯನ್ನು ಸಲ್ಲಿಸಿದರು.<br /> <br /> ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಶಿವಾನಂದ ಕೌಜಲಗಿ ಎಂ.ಬಿ. ಹಂಗರಗಿ, ಮುಕ್ಕಣ್ಣ ಜನಾಲಿ, ಮತ್ತಿತರ ಗಣ್ಯರು ಮತ್ತು ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.<br /> <br /> ರಥೋತ್ಸವ ಮುಗಿದ ನಂತರ ಸುತ್ತಲಿನ ಗ್ರಾಮಗಳ ಭಕ್ತರು ಲಿಂ. ಹಾನಗಲ್ ಕುಮಾರ ಶಿವಯೋಗಿಗಳ ಗದ್ದುಗೆಗೆ ಶ್ರದ್ಧೆ ಭಕ್ತಿಯಿಂದ ಪೂಜೆಯನ್ನು ಸಲ್ಲಿಸಿದರು.<br /> <br /> ರಥೋತ್ಸವಕ್ಕೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ಭಾಗವಹಿಸಿ ರಥವನ್ನು ಎಳೆದು ಕೃತರ್ಥರಾದರು. ರಥೋತ್ಸವದ ಉದ್ದಕ್ಕೂ ಭಕ್ತಾದಿಗಳು ಶಿವಯೋಗಿಗಳ ಭಜೆಯಲ್ಲಿ ತೊಡಗಿ ದೇವರನ್ನು ಆರಾಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>