<p><strong>ಬಾದಾಮಿ: </strong>ಇಲ್ಲಿನ ಬನಶಂಕರಿ ದೇವಿಯ ರಥೋತ್ಸವ ಬುಧವಾರ ಸಂಜೆ ಸಡಗರ, ಸಂಭ್ರಮದಿಂದ ನಡೆಯಿತು.ರಥೋತ್ಸವಕ್ಕೆ ಮುನ್ನ ಬನಶಂಕರಿ ದೇವಿಯ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಿಂಗರಿಸಿದ ಪಲ್ಲಕ್ಕಿಯಲ್ಲಿ ಮೂರ್ತಿಯನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. <br /> <br /> ವಿವಿಧ ವರ್ಣಗಳ ಧ್ವಜಗಳಿಂದ ಹಾಗೂ ಬಾಳೆಯ ಕಂಬ, ವಿವಿಧ ಪುಷ್ಪ ಮಾಲೆಗಳಿಂದ ರಥವನ್ನು ಸಿಂಗರಿಸಲಾಗಿತ್ತು. ದೇವಿಯ ಸಹಸ್ರಾರು ಭಕ್ತರು ಶ್ರದ್ಧೆ ಹಾಗೂ ಭಕ್ತಿಯಿಂದ ಘೋಷಣೆಗಳನ್ನು ಕೂಗುತ್ತ ದೇವಿಯ ಪಾದಗಟ್ಟೆಯವರೆಗೆ ತೇರನ್ನು ಎಳೆದರು. <br /> <br /> ರಥ ಸಾಗುತ್ತಿದ್ದಾಗ ಭಕ್ತರು ರಥಕ್ಕೆ ಪುಷ್ಪ, ಉತ್ತತ್ತಿ, ಬಾಳೆಹಣ್ಣು ಹಾಗೂ ಲಿಂಬೆಹಣ್ಣುಗಳನ್ನು ಎಸೆದು ದೇವಿಯ ಕೃಪೆಗೆ ಪಾತ್ರರಾದರು. ರಥೋತ್ಸವ ನಂತರ ಭಕ್ತರು ದೇವಿಯ ದರ್ಶನ ಪಡೆದರು. <br /> <br /> ಹಂಪಿ ಹೇಮಕೂಟ ದಯಾನಂದ ಪುರಿ ಸ್ವಾಮೀಜಿ, ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ದೇವಾಲಯ ಟ್ರಸ್ಟ್ ಕಮೀಟಿ ಅಧ್ಯಕ್ಷ ಎಸ್.ಡಿ. ಪೂಜಾರ, ಬಾಗಲಕೋಟೆ ಉಪವಿಭಾಗ ಅಧಿಕಾರಿ ಗೋವಿಂದರೆಡ್ಡಿ, ತಹಸೀಲ್ದಾರ ಮಹೇಶ ಕರ್ಜಗಿ ಸೇರಿದಂತೆ ಇತರ ಗಣ್ಯರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ: </strong>ಇಲ್ಲಿನ ಬನಶಂಕರಿ ದೇವಿಯ ರಥೋತ್ಸವ ಬುಧವಾರ ಸಂಜೆ ಸಡಗರ, ಸಂಭ್ರಮದಿಂದ ನಡೆಯಿತು.ರಥೋತ್ಸವಕ್ಕೆ ಮುನ್ನ ಬನಶಂಕರಿ ದೇವಿಯ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಿಂಗರಿಸಿದ ಪಲ್ಲಕ್ಕಿಯಲ್ಲಿ ಮೂರ್ತಿಯನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. <br /> <br /> ವಿವಿಧ ವರ್ಣಗಳ ಧ್ವಜಗಳಿಂದ ಹಾಗೂ ಬಾಳೆಯ ಕಂಬ, ವಿವಿಧ ಪುಷ್ಪ ಮಾಲೆಗಳಿಂದ ರಥವನ್ನು ಸಿಂಗರಿಸಲಾಗಿತ್ತು. ದೇವಿಯ ಸಹಸ್ರಾರು ಭಕ್ತರು ಶ್ರದ್ಧೆ ಹಾಗೂ ಭಕ್ತಿಯಿಂದ ಘೋಷಣೆಗಳನ್ನು ಕೂಗುತ್ತ ದೇವಿಯ ಪಾದಗಟ್ಟೆಯವರೆಗೆ ತೇರನ್ನು ಎಳೆದರು. <br /> <br /> ರಥ ಸಾಗುತ್ತಿದ್ದಾಗ ಭಕ್ತರು ರಥಕ್ಕೆ ಪುಷ್ಪ, ಉತ್ತತ್ತಿ, ಬಾಳೆಹಣ್ಣು ಹಾಗೂ ಲಿಂಬೆಹಣ್ಣುಗಳನ್ನು ಎಸೆದು ದೇವಿಯ ಕೃಪೆಗೆ ಪಾತ್ರರಾದರು. ರಥೋತ್ಸವ ನಂತರ ಭಕ್ತರು ದೇವಿಯ ದರ್ಶನ ಪಡೆದರು. <br /> <br /> ಹಂಪಿ ಹೇಮಕೂಟ ದಯಾನಂದ ಪುರಿ ಸ್ವಾಮೀಜಿ, ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ದೇವಾಲಯ ಟ್ರಸ್ಟ್ ಕಮೀಟಿ ಅಧ್ಯಕ್ಷ ಎಸ್.ಡಿ. ಪೂಜಾರ, ಬಾಗಲಕೋಟೆ ಉಪವಿಭಾಗ ಅಧಿಕಾರಿ ಗೋವಿಂದರೆಡ್ಡಿ, ತಹಸೀಲ್ದಾರ ಮಹೇಶ ಕರ್ಜಗಿ ಸೇರಿದಂತೆ ಇತರ ಗಣ್ಯರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>