<p><strong>ಬೀದರ್: </strong>ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಪುಣೆಯ ಮುಕ್ತಾಂಗಣ ಮಿತ್ರ ವ್ಯಸನಮುಕ್ತಿ ಹಾಗೂ ಪುನರ್ ವಸತಿ ಕೇಂದ್ರದ ಸಲಹೆಗಾರ ಭಾಸ್ಕರ್ ಮೋರೆ ತಿಳಿಸಿದರು.<br /> <br /> ಶರಣ ಸಂಸ್ಕತಿ ಪ್ರಸಾರ ವೇದಿಕೆಯ ಸಹಯೋಗದೊಂದಿಗೆ ನಗರದ ಶಾಹೀನ್ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವ್ಯಸನಮುಕ್ತಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಯುವಕರು ವ್ಯಸನಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಆಗಿದೆ ಎಂದು ಹೇಳಿದರು.<br /> <br /> ಮದ್ಯಪಾನ, ಸಿಗರೇಟ್, ತಂಬಾಕು, ಗುಟ್ಕಾ ಸೇವನೆ ಮತ್ತಿತರ ಚಟಗಳಿಗೆ ದಾಸರಾದವರ ನೆನಪಿನ ಶಕ್ತಿ ಕಡಿಮೆ ಆಗುತ್ತದೆ. ಕೌಟುಂಬಿಕ ನೆಮ್ಮದಿ ಹಾಳಾಗುತ್ತದೆ. ಆರ್ಥಿಕವಾಗಿ ನಷ್ಟವುಂಟಾಗುತ್ತದೆ. ಆತ್ಮವಿಶ್ವಾಸ ಕಡಿಮೆ ಆಗಿ ಸಾಮಾಜಿಕ ಸ್ಥಾನಮಾನವನ್ನೂ ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದರು.<br /> <br /> ವ್ಯಸನ ಬಿಡಿಸಲು ಯಾವುದೇ ಔಷಧಿ ಇಲ್ಲ. ಸ್ವಂತ ನಿರ್ಧಾರ ಮತ್ತು ಕುಟುಂಬ ವರ್ಗದವರ ಪ್ರೀತಿ- ವಿಶ್ವಾಸದಿಂದ ಮಾತ್ರ ಚಟವನ್ನು ಬಿಡಬಹುದು. ವ್ಯಸನಕ್ಕೆ ಬಲಿಯಾದವರನ್ನು ಅದರಿಂದ ಹೊರತರುವ ಜೊತೆಗೆ ಯುವ ಪೀಳಿಗೆ ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಶಾಹೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ್ ಮಾತನಾಡಿ, ಮಾದಕ ವಸ್ತುಗಳ ಕುರಿತು ಜನಜಾಗೃತಿ ಮೂಡಿಸುವುದು ಜರೂರಿಯಾಗಿದೆ ಎಂದು ತಿಳಿಸಿದರು.<br /> <br /> ಯುವಶಕ್ತಿಯೇ ಈ ದೇಶದ ಭವಿಷ್ಯವಾಗಿದೆ. ಆದ್ದರಿಂದ ಅವರನ್ನು ದುಶ್ಚಟಗಳಿಂದ ದೂರವಿರಿಸುವುದಕ್ಕಾಗಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.<br /> <br /> ಚಟಗಳಿಗೆ ಬಲಿಯಾಗುವುದರಿಂದ ಹಣ ವ್ಯಯವಾಗಿ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಸಮಾಜದಲ್ಲಿಯು ಬೆಲೆ ಇಲ್ಲದಂತಾಗುತ್ತದೆ. ಆದ್ದರಿಂದ ಉನ್ನತ ಹಾಗೂ ಆದರ್ಶ ವ್ಯಕ್ತಿಗಳಾಗುವುದಕ್ಕಾಗಿ ಚಟಗಳಿಂದ ದೂರರಬೇಕು ಎಂದು ತಿಳಿಸಿದರು.<br /> <br /> ಮುಕ್ತಾಂಗಣ ಮಿತ್ರ ವ್ಯಸನಮುಕ್ತಿ ಹಾಗೂ ಪುನರ್ ವಸತಿ ಕೇಂದ್ರದ ಬೀದರ್ ಮುಖ್ಯಸ್ಥ ವಿದ್ಯಾಸಾಗರ ಪಾಟೀಲ್, ಶರಣ ಸಂಸ್ಕತಿ ಪ್ರಸಾದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕಲ್ಯಾಣರಾಯ ಚಳಕಾಪುರೆ, ಸಂಚಾಲಕ ಬಸವರಾಜ ಕಾಜಿ ಮೊದಲಾದವರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಪುಣೆಯ ಮುಕ್ತಾಂಗಣ ಮಿತ್ರ ವ್ಯಸನಮುಕ್ತಿ ಹಾಗೂ ಪುನರ್ ವಸತಿ ಕೇಂದ್ರದ ಸಲಹೆಗಾರ ಭಾಸ್ಕರ್ ಮೋರೆ ತಿಳಿಸಿದರು.<br /> <br /> ಶರಣ ಸಂಸ್ಕತಿ ಪ್ರಸಾರ ವೇದಿಕೆಯ ಸಹಯೋಗದೊಂದಿಗೆ ನಗರದ ಶಾಹೀನ್ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವ್ಯಸನಮುಕ್ತಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಯುವಕರು ವ್ಯಸನಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಆಗಿದೆ ಎಂದು ಹೇಳಿದರು.<br /> <br /> ಮದ್ಯಪಾನ, ಸಿಗರೇಟ್, ತಂಬಾಕು, ಗುಟ್ಕಾ ಸೇವನೆ ಮತ್ತಿತರ ಚಟಗಳಿಗೆ ದಾಸರಾದವರ ನೆನಪಿನ ಶಕ್ತಿ ಕಡಿಮೆ ಆಗುತ್ತದೆ. ಕೌಟುಂಬಿಕ ನೆಮ್ಮದಿ ಹಾಳಾಗುತ್ತದೆ. ಆರ್ಥಿಕವಾಗಿ ನಷ್ಟವುಂಟಾಗುತ್ತದೆ. ಆತ್ಮವಿಶ್ವಾಸ ಕಡಿಮೆ ಆಗಿ ಸಾಮಾಜಿಕ ಸ್ಥಾನಮಾನವನ್ನೂ ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದರು.<br /> <br /> ವ್ಯಸನ ಬಿಡಿಸಲು ಯಾವುದೇ ಔಷಧಿ ಇಲ್ಲ. ಸ್ವಂತ ನಿರ್ಧಾರ ಮತ್ತು ಕುಟುಂಬ ವರ್ಗದವರ ಪ್ರೀತಿ- ವಿಶ್ವಾಸದಿಂದ ಮಾತ್ರ ಚಟವನ್ನು ಬಿಡಬಹುದು. ವ್ಯಸನಕ್ಕೆ ಬಲಿಯಾದವರನ್ನು ಅದರಿಂದ ಹೊರತರುವ ಜೊತೆಗೆ ಯುವ ಪೀಳಿಗೆ ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಶಾಹೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ್ ಮಾತನಾಡಿ, ಮಾದಕ ವಸ್ತುಗಳ ಕುರಿತು ಜನಜಾಗೃತಿ ಮೂಡಿಸುವುದು ಜರೂರಿಯಾಗಿದೆ ಎಂದು ತಿಳಿಸಿದರು.<br /> <br /> ಯುವಶಕ್ತಿಯೇ ಈ ದೇಶದ ಭವಿಷ್ಯವಾಗಿದೆ. ಆದ್ದರಿಂದ ಅವರನ್ನು ದುಶ್ಚಟಗಳಿಂದ ದೂರವಿರಿಸುವುದಕ್ಕಾಗಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.<br /> <br /> ಚಟಗಳಿಗೆ ಬಲಿಯಾಗುವುದರಿಂದ ಹಣ ವ್ಯಯವಾಗಿ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಸಮಾಜದಲ್ಲಿಯು ಬೆಲೆ ಇಲ್ಲದಂತಾಗುತ್ತದೆ. ಆದ್ದರಿಂದ ಉನ್ನತ ಹಾಗೂ ಆದರ್ಶ ವ್ಯಕ್ತಿಗಳಾಗುವುದಕ್ಕಾಗಿ ಚಟಗಳಿಂದ ದೂರರಬೇಕು ಎಂದು ತಿಳಿಸಿದರು.<br /> <br /> ಮುಕ್ತಾಂಗಣ ಮಿತ್ರ ವ್ಯಸನಮುಕ್ತಿ ಹಾಗೂ ಪುನರ್ ವಸತಿ ಕೇಂದ್ರದ ಬೀದರ್ ಮುಖ್ಯಸ್ಥ ವಿದ್ಯಾಸಾಗರ ಪಾಟೀಲ್, ಶರಣ ಸಂಸ್ಕತಿ ಪ್ರಸಾದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕಲ್ಯಾಣರಾಯ ಚಳಕಾಪುರೆ, ಸಂಚಾಲಕ ಬಸವರಾಜ ಕಾಜಿ ಮೊದಲಾದವರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>