<p><strong>ಕೃಷ್ಣರಾಜಪೇಟೆ: </strong>ಮಾರುತಿ ವ್ಯಾನ್ಗೆ ಅಳವಡಿಸಿದ್ದ ಅನಿಲ ಸಿಲಿಂಡರ್ ಸಿಡಿದ ಪರಿಣಾಮ ಮಹಿಳೆ ಮತ್ತು ಮಗುವಿಗೆ ತೀವ್ರವಾದ ಸುಟ್ಟು ಗಾಯಗಳಾದ ಘಟನೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. <br /> <br /> ಕೆ.ಆರ್.ನಗರ ತಾಲ್ಲೂಕಿನ ದೊಡ್ಡಕೊಪ್ಪಲಿನ ಸಿರಾಜ್, ಪತ್ನಿ ಶಬನಾ ಮತ್ತು ಪುತ್ರ ಮೊಹಿದ್ ಅಹಮದ್ ಜೊತೆ ಕೆ.ಆರ್.ಪೇಟೆಯಿಂದ ತಮ್ಮೂರಿಗೆ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ. ಶಬನಾ ಮತ್ತು ಮೊಹಿದ್ಗೆ ಬೆನ್ನು, ಕಾಲುಗಳಿಗೆ ತೀವ್ರ ಪ್ರಮಾಣದ ಗಾಯಗಳಾಗಿವೆ.<br /> <br /> ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರಿಗೂ ಸ್ವಲ್ಪ ಪ್ರಮಾಣದ ಗಾಯಗಳಾಗಿದ್ದು, ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. <br /> <br /> ಸಿಲಿಂಡರ್ ಖಾಲಿಯಾದಾಗ, ಚಾಲಕ ಪೆಟ್ರೋಲ್ಗೆ ಬದಲಾವಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ವ್ಯಾನ್ ಸಂಪೂರ್ಣಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪೇಟೆ: </strong>ಮಾರುತಿ ವ್ಯಾನ್ಗೆ ಅಳವಡಿಸಿದ್ದ ಅನಿಲ ಸಿಲಿಂಡರ್ ಸಿಡಿದ ಪರಿಣಾಮ ಮಹಿಳೆ ಮತ್ತು ಮಗುವಿಗೆ ತೀವ್ರವಾದ ಸುಟ್ಟು ಗಾಯಗಳಾದ ಘಟನೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. <br /> <br /> ಕೆ.ಆರ್.ನಗರ ತಾಲ್ಲೂಕಿನ ದೊಡ್ಡಕೊಪ್ಪಲಿನ ಸಿರಾಜ್, ಪತ್ನಿ ಶಬನಾ ಮತ್ತು ಪುತ್ರ ಮೊಹಿದ್ ಅಹಮದ್ ಜೊತೆ ಕೆ.ಆರ್.ಪೇಟೆಯಿಂದ ತಮ್ಮೂರಿಗೆ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ. ಶಬನಾ ಮತ್ತು ಮೊಹಿದ್ಗೆ ಬೆನ್ನು, ಕಾಲುಗಳಿಗೆ ತೀವ್ರ ಪ್ರಮಾಣದ ಗಾಯಗಳಾಗಿವೆ.<br /> <br /> ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರಿಗೂ ಸ್ವಲ್ಪ ಪ್ರಮಾಣದ ಗಾಯಗಳಾಗಿದ್ದು, ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. <br /> <br /> ಸಿಲಿಂಡರ್ ಖಾಲಿಯಾದಾಗ, ಚಾಲಕ ಪೆಟ್ರೋಲ್ಗೆ ಬದಲಾವಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ವ್ಯಾನ್ ಸಂಪೂರ್ಣಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>