<p><strong>ಉಡುಪಿ: </strong>ಕಾರ್ಕಳ ತಾಲ್ಲೂಕಿನ ಈದುವಿನಲ್ಲಿ ನಡೆದಿದ್ದ ಪಶ್ಚಿಮ ಘಟ್ಟದ ಮೊದಲ ನಕ್ಸಲ್ ಎನ್ಕೌಂಟರ್ ಪ್ರಕರಣದಲ್ಲಿ ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಳಸದ ಬಿ.ಟಿ.ಯಶೋದಾ (29) ಅವರನ್ನು ಉಡುಪಿ ಜಿಲ್ಲಾ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.<br /> <br /> ಎಂಟು ವರ್ಷಗಳ ಹಿಂದಿನ ಪ್ರಕರಣದ ಬಗ್ಗೆ ಜಿಲ್ಲಾ ನ್ಯಾಯಾಧೀಶ ನರೇಂದ್ರ ಕುಮಾರ್ ಗುಣಕಿ ತೀರ್ಪು ಪ್ರಕಟಿಸಿದರು. <br /> <br /> 2003ರ ನ.17ರಂದು ನಡೆದ ಎನ್ಕೌಂಟರ್ನಲ್ಲಿ ಹಾಜಿಮಾ ಮತ್ತು ಪಾರ್ವತಿ ಎಂಬ ಇಬ್ಬರು ಶಂಕಿತ ನಕ್ಸಲ್ ಯುವತಿಯರು ಹತರಾಗಿದ್ದರು. ಇನ್ನಿಬ್ಬರು ಆರೋಪಿಗಳಾದ ಆನಂದ ಮತ್ತು ವಿಷ್ಣು ತಪ್ಪಿಸಿಕೊಂಡಿದ್ದರು. <br /> <br /> ಗುಂಡೇಟಿನಿಂದ ಗಾಯಗೊಂಡಿದ್ದ ಯಶೋದಾ ಅವರನ್ನು ಪೊಲೀಸರು ಬಂಧಿಸಿದ್ದರು. 3 ತಿಂಗಳು 20 ದಿನ ನ್ಯಾಯಾಂಗ ಬಂಧನದಲ್ಲಿದ್ದ ಯಶೋದಾ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ತಿಂಗಳಿಗೊಮ್ಮೆ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದರು. <br /> <br /> ಈ ಪ್ರಕರಣದಲ್ಲಿ ಸುಮಾರು 40 ಮಂದಿ ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಇದೇ ನವೆಂಬರ್ಗೆ ಎಂಟು ವರ್ಷ ಭರ್ತಿಯಾಗುತ್ತಿದ್ದ ಈ ಪ್ರಕರಣದಿಂದ ಕೊನೆಗೂ ಅವರು ಖುಲಾಸೆಗೊಂಡಿದ್ದಾರೆ. <br /> <br /> ತೀರ್ಪು ಹೊರಬಿದ್ದ ಬಳಿಕ ಮಾಧ್ಯಮದವರೊಂದಿಗೆ ಖುಷಿಯನ್ನು ಹಂಚಿಕೊಂಡ ಯಶೋದಾ ` ಈ ತೀರ್ಪಿನಿಂದ ಬಹಳ ಖುಷಿಯಾಗಿದೆ. ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ ಎನ್ನುವುದು ಈಗಲಾದರೂ ಸಾಬೀತಾಗಿದೆ. <br /> <br /> ಇನ್ನು ಮುಂದೆ ಊರಿನಲ್ಲಿ ಸಾಮಾಜಿಕ ಕೆಲಸ ಮಾಡಿಕೊಂಡಿರುತ್ತೇನೆ~ ಎಂದು ಪ್ರತಿಕ್ರಿಯಿಸಿದರು. ಆರೋಪಿ ಪರ ವಕೀಲ ಎಂ.ಶಾಂತಾರಾಂ ಶೆಟ್ಟಿ ಹಾಗೂ ಬಿ.ಎನ್.ಜಗದೀಶ್ ವಾದಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕಾರ್ಕಳ ತಾಲ್ಲೂಕಿನ ಈದುವಿನಲ್ಲಿ ನಡೆದಿದ್ದ ಪಶ್ಚಿಮ ಘಟ್ಟದ ಮೊದಲ ನಕ್ಸಲ್ ಎನ್ಕೌಂಟರ್ ಪ್ರಕರಣದಲ್ಲಿ ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಳಸದ ಬಿ.ಟಿ.ಯಶೋದಾ (29) ಅವರನ್ನು ಉಡುಪಿ ಜಿಲ್ಲಾ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.<br /> <br /> ಎಂಟು ವರ್ಷಗಳ ಹಿಂದಿನ ಪ್ರಕರಣದ ಬಗ್ಗೆ ಜಿಲ್ಲಾ ನ್ಯಾಯಾಧೀಶ ನರೇಂದ್ರ ಕುಮಾರ್ ಗುಣಕಿ ತೀರ್ಪು ಪ್ರಕಟಿಸಿದರು. <br /> <br /> 2003ರ ನ.17ರಂದು ನಡೆದ ಎನ್ಕೌಂಟರ್ನಲ್ಲಿ ಹಾಜಿಮಾ ಮತ್ತು ಪಾರ್ವತಿ ಎಂಬ ಇಬ್ಬರು ಶಂಕಿತ ನಕ್ಸಲ್ ಯುವತಿಯರು ಹತರಾಗಿದ್ದರು. ಇನ್ನಿಬ್ಬರು ಆರೋಪಿಗಳಾದ ಆನಂದ ಮತ್ತು ವಿಷ್ಣು ತಪ್ಪಿಸಿಕೊಂಡಿದ್ದರು. <br /> <br /> ಗುಂಡೇಟಿನಿಂದ ಗಾಯಗೊಂಡಿದ್ದ ಯಶೋದಾ ಅವರನ್ನು ಪೊಲೀಸರು ಬಂಧಿಸಿದ್ದರು. 3 ತಿಂಗಳು 20 ದಿನ ನ್ಯಾಯಾಂಗ ಬಂಧನದಲ್ಲಿದ್ದ ಯಶೋದಾ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ತಿಂಗಳಿಗೊಮ್ಮೆ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದರು. <br /> <br /> ಈ ಪ್ರಕರಣದಲ್ಲಿ ಸುಮಾರು 40 ಮಂದಿ ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಇದೇ ನವೆಂಬರ್ಗೆ ಎಂಟು ವರ್ಷ ಭರ್ತಿಯಾಗುತ್ತಿದ್ದ ಈ ಪ್ರಕರಣದಿಂದ ಕೊನೆಗೂ ಅವರು ಖುಲಾಸೆಗೊಂಡಿದ್ದಾರೆ. <br /> <br /> ತೀರ್ಪು ಹೊರಬಿದ್ದ ಬಳಿಕ ಮಾಧ್ಯಮದವರೊಂದಿಗೆ ಖುಷಿಯನ್ನು ಹಂಚಿಕೊಂಡ ಯಶೋದಾ ` ಈ ತೀರ್ಪಿನಿಂದ ಬಹಳ ಖುಷಿಯಾಗಿದೆ. ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ ಎನ್ನುವುದು ಈಗಲಾದರೂ ಸಾಬೀತಾಗಿದೆ. <br /> <br /> ಇನ್ನು ಮುಂದೆ ಊರಿನಲ್ಲಿ ಸಾಮಾಜಿಕ ಕೆಲಸ ಮಾಡಿಕೊಂಡಿರುತ್ತೇನೆ~ ಎಂದು ಪ್ರತಿಕ್ರಿಯಿಸಿದರು. ಆರೋಪಿ ಪರ ವಕೀಲ ಎಂ.ಶಾಂತಾರಾಂ ಶೆಟ್ಟಿ ಹಾಗೂ ಬಿ.ಎನ್.ಜಗದೀಶ್ ವಾದಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>