<p><span style="font-size: 26px;"><strong>ತುಮಕೂರು:</strong> ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಮಾ. 24ರಂದು ನಾಮಪತ್ರ ಸಲ್ಲಿಸಲಿದ್ದು, ಆ ವೇಳೆ ಶಕ್ತಿ ಪ್ರದರ್ಶನ ನಡೆಸಲು ಸಿದ್ಧತೆ ನಡೆದಿದೆ.</span></p>.<p>ಕಾರ್ಯಕರ್ತರು, ಮುಖಂಡರನ್ನು ಕಲೆಹಾಕುವ ಸಲುವಾಗಿ ಶನಿವಾರ ನಗರದ ಹಲವು ವಾರ್ಡ್ಗಳಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿದರು. ಕ್ಯಾತ್ಸಂದ್ರದಲ್ಲಿ ಸಭೆ ನಡೆಸಿದ ಬಳಿಕ ಪಕ್ಷದ ಹಲವು ಮುಖಂಡರ ಮನೆಗಳಿಗೆ ಭೇಟಿ ನೀಡಿ ನಾಮಪತ್ರ ಸಲ್ಲಿಕೆ ವೇಳೆ ಬರುವಂತೆ ಮನವಿ ಮಾಡಿದರು.<br /> <br /> 20ಕ್ಕೂ ಹೆಚ್ಚು ವಾರ್ಡ್ಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಪಕ್ಷದ ಮುಖಂಡರಾದ ರವಿ ಹೆಬ್ಬಾಕ, ನಾಗಣ್ಣ ಬಾವಿಕಟ್ಟೆ, ಕೆ.ಪಿ.ಮಹೇಶ್, ರುದ್ರೇಶ್, ಬ್ಯಾಟರಂಗೇಗೌಡ, ಜ್ಯೋತಿಗಣೇಶ್ ಸೇರಿದಂತೆ ಆಯಾ ವಾರ್ಡ್ ಸದಸ್ಯರು ಪಕ್ಷದ ಪ್ರಮುಖ ಮುಖಂಡರ ಮನೆಗಳಿಗೆ ಭೇಟಿ ನೀಡಿದ್ದರು.<br /> <br /> ನಗರದ ಅರ್ಧದಷ್ಟು ವಾರ್ಡ್ಗಳಲ್ಲಿ ಶನಿವಾರ ಸಭೆ, ಮುಖಂಡರ ಮನೆಗಳಿಗೆ ಭೇಟಿ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿರುವಂತೆ ಕೋರಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ತುಮಕೂರು:</strong> ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಮಾ. 24ರಂದು ನಾಮಪತ್ರ ಸಲ್ಲಿಸಲಿದ್ದು, ಆ ವೇಳೆ ಶಕ್ತಿ ಪ್ರದರ್ಶನ ನಡೆಸಲು ಸಿದ್ಧತೆ ನಡೆದಿದೆ.</span></p>.<p>ಕಾರ್ಯಕರ್ತರು, ಮುಖಂಡರನ್ನು ಕಲೆಹಾಕುವ ಸಲುವಾಗಿ ಶನಿವಾರ ನಗರದ ಹಲವು ವಾರ್ಡ್ಗಳಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿದರು. ಕ್ಯಾತ್ಸಂದ್ರದಲ್ಲಿ ಸಭೆ ನಡೆಸಿದ ಬಳಿಕ ಪಕ್ಷದ ಹಲವು ಮುಖಂಡರ ಮನೆಗಳಿಗೆ ಭೇಟಿ ನೀಡಿ ನಾಮಪತ್ರ ಸಲ್ಲಿಕೆ ವೇಳೆ ಬರುವಂತೆ ಮನವಿ ಮಾಡಿದರು.<br /> <br /> 20ಕ್ಕೂ ಹೆಚ್ಚು ವಾರ್ಡ್ಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಪಕ್ಷದ ಮುಖಂಡರಾದ ರವಿ ಹೆಬ್ಬಾಕ, ನಾಗಣ್ಣ ಬಾವಿಕಟ್ಟೆ, ಕೆ.ಪಿ.ಮಹೇಶ್, ರುದ್ರೇಶ್, ಬ್ಯಾಟರಂಗೇಗೌಡ, ಜ್ಯೋತಿಗಣೇಶ್ ಸೇರಿದಂತೆ ಆಯಾ ವಾರ್ಡ್ ಸದಸ್ಯರು ಪಕ್ಷದ ಪ್ರಮುಖ ಮುಖಂಡರ ಮನೆಗಳಿಗೆ ಭೇಟಿ ನೀಡಿದ್ದರು.<br /> <br /> ನಗರದ ಅರ್ಧದಷ್ಟು ವಾರ್ಡ್ಗಳಲ್ಲಿ ಶನಿವಾರ ಸಭೆ, ಮುಖಂಡರ ಮನೆಗಳಿಗೆ ಭೇಟಿ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿರುವಂತೆ ಕೋರಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>