<p><strong>ಬೆಂಗಳೂರು (ಪಿಟಿಐ):</strong> ಲೋಕಸಭಾ ಚುನಾವಣೆಗಾಗಿ ರಾಜ್ಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷರು ಮಾರ್ಚ್ 8 ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪ್ರಹ್ಲಾದ್ ಜೋಶಿ ಸೋಮವಾರ ತಿಳಿಸಿದ್ದಾರೆ.</p>.<p>‘ಲೋಕಸಭಾ ಚುನಾವಣೆಯ ರಾಜ್ಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷದ ಕೇಂದ್ರೀಯ ಚುನಾವಣಾ ನಿರ್ವಹಣೆ ಹಾಗೂ ಸಮನ್ವಯ ಸಮಿತಿಯು ದೆಹಲಿಯಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ’ ಎಂದು ಜೋಶಿ ಹೇಳಿದ್ದಾರೆ.</p>.<p>ರಾಜ್ಯ ಬಿಜೆಪಿ ಚುನಾವಣಾ ಮಂಡಳಿ ಹಾಗೂ ಸಮನ್ವಯ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಲೋಕಸಭೆಯ ಎಲ್ಲಾ 28 ಕ್ಷೇತ್ರಗಳಿಗೂ ರಾಜ್ಯ ಘಟಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದರು.</p>.<p>ಕುತೂಹಲ ಕೆರಳಿಸಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಗ್ಗೆಯೂ ‘ಪಕ್ಷ ಉತ್ತರ ಕಂಡುಕೊಂಡಿದೆ’ ಎಂದು ಜೋಶಿ ಹೇಳಿದರಾದರೂ ಹೆಚ್ಚಿನ ವಿವರ ನೀಡಲಿಲ್ಲ.</p>.<p>ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಉತ್ಸುಕವಾಗಿದ್ದು, ಈ ಸಂಬಂಧ ಪರಸ್ಪರರು ‘ಬಹಿರಂಗ’ವಾಗಿಯೇ ಆರೋಪ–ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಪಿಟಿಐ):</strong> ಲೋಕಸಭಾ ಚುನಾವಣೆಗಾಗಿ ರಾಜ್ಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷರು ಮಾರ್ಚ್ 8 ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪ್ರಹ್ಲಾದ್ ಜೋಶಿ ಸೋಮವಾರ ತಿಳಿಸಿದ್ದಾರೆ.</p>.<p>‘ಲೋಕಸಭಾ ಚುನಾವಣೆಯ ರಾಜ್ಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷದ ಕೇಂದ್ರೀಯ ಚುನಾವಣಾ ನಿರ್ವಹಣೆ ಹಾಗೂ ಸಮನ್ವಯ ಸಮಿತಿಯು ದೆಹಲಿಯಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ’ ಎಂದು ಜೋಶಿ ಹೇಳಿದ್ದಾರೆ.</p>.<p>ರಾಜ್ಯ ಬಿಜೆಪಿ ಚುನಾವಣಾ ಮಂಡಳಿ ಹಾಗೂ ಸಮನ್ವಯ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಲೋಕಸಭೆಯ ಎಲ್ಲಾ 28 ಕ್ಷೇತ್ರಗಳಿಗೂ ರಾಜ್ಯ ಘಟಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದರು.</p>.<p>ಕುತೂಹಲ ಕೆರಳಿಸಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಗ್ಗೆಯೂ ‘ಪಕ್ಷ ಉತ್ತರ ಕಂಡುಕೊಂಡಿದೆ’ ಎಂದು ಜೋಶಿ ಹೇಳಿದರಾದರೂ ಹೆಚ್ಚಿನ ವಿವರ ನೀಡಲಿಲ್ಲ.</p>.<p>ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಉತ್ಸುಕವಾಗಿದ್ದು, ಈ ಸಂಬಂಧ ಪರಸ್ಪರರು ‘ಬಹಿರಂಗ’ವಾಗಿಯೇ ಆರೋಪ–ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>