<p>ಕೃಷ್ಣರಾಜಪುರ: ಇಂದಿನ ಯುವಕರು ಪಾಶ್ಚಾತ್ಯ ಸಂಸ್ಕೃತಿಗೆ ಜೋತು ಬೀಳುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಶಾಸಕ ಎನ್.ಎಸ್. ನಂದೀಶರೆಡ್ಡಿ, ಯುವ ಪೀಳಿಗೆ ಬಸವಾದಿ ಶರಣರ ಆದರ್ಶಗಳನ್ನು ಮೈಗೂಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಕರೆ ನೀಡಿದರು.<br /> <br /> ಬಸವ ಸೇವಾ ಸಮಿತಿಯು ಬಸವನಗರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಮತ್ತು ಬಸವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಉಮಾದೇವಿ ಸ್ತ್ರೀ ಸಮಾಜ ಟ್ರಸ್ಟ್ನ ಅಧ್ಯಕ್ಷೆ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಕೆ.ಬಿ. ಸರ್ವಮಂಗಳಾಶಾಸ್ತ್ರಿ ಅವರನ್ನು ಸನ್ಮಾನಿಸಿ ಮಾತನಾಡಿದರು.<br /> <br /> ಸಮಾರಂಭದ ಸಾನಿಧ್ಯ ವಹಿಸಿದ್ದ ವಿಭೂತಿಪುರ ಮಠದ ಪೀಠಾಧ್ಯಕ್ಷ ಡಾ. ಮಹಾಂತಲಿಂಗ ಸ್ವಾಮೀಜಿ, `ಶರಣರು ಸಮಾಜವನ್ನು ಸರಿದಾರಿಗೆ ತರಲು ತಾವೇ ಮಾದರಿಯಾಗಿ ನಡೆದು ತೋರಿಸಿದರು~ ಎಂದರು. <br /> <br /> ಸನ್ಮಾನ ಸ್ವೀಕರಿಸಿ ಕೆ.ಬಿ. ಸರ್ವಮಂಗಳಾಶಾಸ್ತ್ರಿ ಮಾತನಾಡಿದರು. ರಕ್ತದಾನ ಏರ್ಪಡಿಸಲಾಗಿತ್ತು. <br /> <br /> ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬಿಜೆಪಿ ಮುಖಂಡರಾದ ದೇವರಾಜು, ನರೇಂದ್ರ ಪುಟ್ಟು, ಸಮಿತಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಆಂಜಿ, ಸಾಮಾಜಿಕ ಕಾರ್ಯಕರ್ತ ಕೆ.ಜಿ.ಶಿವರುದ್ರಯ್ಯ ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು. ಅಧ್ಯಕ್ಷ ಆಡಿ ಪಾಟೀಲ್ ಸ್ವಾಗತಿಸಿದರು. ಹೊಸಮನೆ ನಿರೂಪಿಸಿದರು. ಗಾಯಕ ನಟರಾಜ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪುರ: ಇಂದಿನ ಯುವಕರು ಪಾಶ್ಚಾತ್ಯ ಸಂಸ್ಕೃತಿಗೆ ಜೋತು ಬೀಳುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಶಾಸಕ ಎನ್.ಎಸ್. ನಂದೀಶರೆಡ್ಡಿ, ಯುವ ಪೀಳಿಗೆ ಬಸವಾದಿ ಶರಣರ ಆದರ್ಶಗಳನ್ನು ಮೈಗೂಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಕರೆ ನೀಡಿದರು.<br /> <br /> ಬಸವ ಸೇವಾ ಸಮಿತಿಯು ಬಸವನಗರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಮತ್ತು ಬಸವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಉಮಾದೇವಿ ಸ್ತ್ರೀ ಸಮಾಜ ಟ್ರಸ್ಟ್ನ ಅಧ್ಯಕ್ಷೆ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಕೆ.ಬಿ. ಸರ್ವಮಂಗಳಾಶಾಸ್ತ್ರಿ ಅವರನ್ನು ಸನ್ಮಾನಿಸಿ ಮಾತನಾಡಿದರು.<br /> <br /> ಸಮಾರಂಭದ ಸಾನಿಧ್ಯ ವಹಿಸಿದ್ದ ವಿಭೂತಿಪುರ ಮಠದ ಪೀಠಾಧ್ಯಕ್ಷ ಡಾ. ಮಹಾಂತಲಿಂಗ ಸ್ವಾಮೀಜಿ, `ಶರಣರು ಸಮಾಜವನ್ನು ಸರಿದಾರಿಗೆ ತರಲು ತಾವೇ ಮಾದರಿಯಾಗಿ ನಡೆದು ತೋರಿಸಿದರು~ ಎಂದರು. <br /> <br /> ಸನ್ಮಾನ ಸ್ವೀಕರಿಸಿ ಕೆ.ಬಿ. ಸರ್ವಮಂಗಳಾಶಾಸ್ತ್ರಿ ಮಾತನಾಡಿದರು. ರಕ್ತದಾನ ಏರ್ಪಡಿಸಲಾಗಿತ್ತು. <br /> <br /> ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬಿಜೆಪಿ ಮುಖಂಡರಾದ ದೇವರಾಜು, ನರೇಂದ್ರ ಪುಟ್ಟು, ಸಮಿತಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಆಂಜಿ, ಸಾಮಾಜಿಕ ಕಾರ್ಯಕರ್ತ ಕೆ.ಜಿ.ಶಿವರುದ್ರಯ್ಯ ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು. ಅಧ್ಯಕ್ಷ ಆಡಿ ಪಾಟೀಲ್ ಸ್ವಾಗತಿಸಿದರು. ಹೊಸಮನೆ ನಿರೂಪಿಸಿದರು. ಗಾಯಕ ನಟರಾಜ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>