<p><strong>ನವದೆಹಲಿ (ಪಿಟಿಐ): </strong>ಶಸ್ತ್ರಾಸ್ತ್ರಗಳ ಅಕ್ರಮ ಮಾರಾಟದಲ್ಲಿ ರಾಜ್ಯದ ಅಧಿಕಾರಿಗಳ ಪಾತ್ರವಿರುವ ಆರೋಪಗಳ ಕುರಿತು ತನಿಖೆ ನಡೆಸುವಲ್ಲಿ ರಾಜಸ್ತಾನ ಸರ್ಕಾರ ನಿಧಾನಗತಿ ಪ್ರಗತಿ ತೋರಿರುವುದಕ್ಕೆ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಪೊಲೀಸರಿಗೆ ಕಷ್ಟವಾದಲ್ಲಿ, ತಾನೇ ಸಿಬಿಐ ತನಿಖೆಗೆ ಆದೇಶ ನೀಡುವುದಾಗಿ ತಿಳಿಸಿದೆ.<br /> <br /> ನ್ಯಾಯಮೂರ್ತಿಗಳಾದ ಬಿ. ಸುದರ್ಶನ್ ರೆಡ್ಡಿ ಮತ್ತು ಎಸ್.ಎಸ್. ನಿಜ್ಜಾರ್ ಅವರನ್ನೊಳಗೊಂಡ ನ್ಯಾಯಪೀಠವು, ಮೂರು ವಾರಗಳಲ್ಲಿ ಉತ್ತರಿಸಲು ರಾಜಸ್ತಾನ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದೆ. <br /> <br /> ‘ಶಸ್ತ್ರಾಸ್ತ್ರಗಳ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಐಎಎಸ್ ಮತ್ತು ಸೇನಾ ಅಧಿಕಾರಿಗಳ ವಿರುದ್ಧ ದಾಖಲಾದ 14 ಎಫ್ಐಆರ್ ಪ್ರಕರಣಗಳ ಬಗ್ಗೆ ರಾಜ್ಯ ಪೊಲೀಸರು ಕೈಗೊಂಡ ತನಿಖೆ ಯಾವ ಹಂತದಲ್ಲಿದೆ’ ಎಂಬುದನ್ನು ತನಗೆ ಮಹತ್ವದ ಪ್ರಮಾಣಪತ್ರ ಸಲ್ಲಿಕೆ ಮೂಲಕ ಸ್ಪಷ್ಟಪಡಿಸುವಂತೆ ನ್ಯಾಯಪೀಠ ಸೂಚಿಸಿದೆ.<br /> ಈ ಹಿಂದಿನ ವಿಚಾರಣೆಯಲ್ಲಿ ಆರೋಪಕ್ಕೆ ಗುರಿಯಾಗಿರುವ ಸೇನಾಧಿಕಾರಿಗಳ ವಿರುದ್ಧ ರಕ್ಷಣಾ ಸಚಿವಾಲಯ ಕೈಗೊಂಡಿರುವ ಕ್ರಮಗಳ ಕುರಿತು ಆರು ವಾರಗಳಲ್ಲಿ ಉತ್ತರಿಸುವಂತೆ ಮತ್ತು ಅಗತ್ಯ ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಶಸ್ತ್ರಾಸ್ತ್ರಗಳ ಅಕ್ರಮ ಮಾರಾಟದಲ್ಲಿ ರಾಜ್ಯದ ಅಧಿಕಾರಿಗಳ ಪಾತ್ರವಿರುವ ಆರೋಪಗಳ ಕುರಿತು ತನಿಖೆ ನಡೆಸುವಲ್ಲಿ ರಾಜಸ್ತಾನ ಸರ್ಕಾರ ನಿಧಾನಗತಿ ಪ್ರಗತಿ ತೋರಿರುವುದಕ್ಕೆ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಪೊಲೀಸರಿಗೆ ಕಷ್ಟವಾದಲ್ಲಿ, ತಾನೇ ಸಿಬಿಐ ತನಿಖೆಗೆ ಆದೇಶ ನೀಡುವುದಾಗಿ ತಿಳಿಸಿದೆ.<br /> <br /> ನ್ಯಾಯಮೂರ್ತಿಗಳಾದ ಬಿ. ಸುದರ್ಶನ್ ರೆಡ್ಡಿ ಮತ್ತು ಎಸ್.ಎಸ್. ನಿಜ್ಜಾರ್ ಅವರನ್ನೊಳಗೊಂಡ ನ್ಯಾಯಪೀಠವು, ಮೂರು ವಾರಗಳಲ್ಲಿ ಉತ್ತರಿಸಲು ರಾಜಸ್ತಾನ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದೆ. <br /> <br /> ‘ಶಸ್ತ್ರಾಸ್ತ್ರಗಳ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಐಎಎಸ್ ಮತ್ತು ಸೇನಾ ಅಧಿಕಾರಿಗಳ ವಿರುದ್ಧ ದಾಖಲಾದ 14 ಎಫ್ಐಆರ್ ಪ್ರಕರಣಗಳ ಬಗ್ಗೆ ರಾಜ್ಯ ಪೊಲೀಸರು ಕೈಗೊಂಡ ತನಿಖೆ ಯಾವ ಹಂತದಲ್ಲಿದೆ’ ಎಂಬುದನ್ನು ತನಗೆ ಮಹತ್ವದ ಪ್ರಮಾಣಪತ್ರ ಸಲ್ಲಿಕೆ ಮೂಲಕ ಸ್ಪಷ್ಟಪಡಿಸುವಂತೆ ನ್ಯಾಯಪೀಠ ಸೂಚಿಸಿದೆ.<br /> ಈ ಹಿಂದಿನ ವಿಚಾರಣೆಯಲ್ಲಿ ಆರೋಪಕ್ಕೆ ಗುರಿಯಾಗಿರುವ ಸೇನಾಧಿಕಾರಿಗಳ ವಿರುದ್ಧ ರಕ್ಷಣಾ ಸಚಿವಾಲಯ ಕೈಗೊಂಡಿರುವ ಕ್ರಮಗಳ ಕುರಿತು ಆರು ವಾರಗಳಲ್ಲಿ ಉತ್ತರಿಸುವಂತೆ ಮತ್ತು ಅಗತ್ಯ ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>