<p><strong>ಗದಗ: </strong>ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕಾನೂನಿನ ಅವಶ್ಯಕತೆ ಇದೆ ಎಂದು ನ್ಯಾಯಾಧೀಶ ಎಂ.ಎಸ್.ಪಾಟೀಲ ತಿಳಿಸಿದರು.<br /> <br /> ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಬಳಗಾನೂರಿನ ಚನ್ನವೀರ ಶರಣರ ಮಠದ ಆವರಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಹಾಗೂ ಜನತಾ ನ್ಯಾಯಾಲಯ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕಾನೂನು ನಮಗೆ ಏಕೆ ಬೇಕು ಎನ್ನುವ ಅರಿವು ಮೊದಲು ಉಂಟಾಗಬೇಕು. ಅದಕ್ಕಾಗಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಾಮಾನ್ಯ ಜನರಿಗೂ ಕಾನೂನಿನ ತಿಳಿವಳಿಕೆ ಮೂಡಿಸಲಾಗುತ್ತಿದೆ. ಸಮಾಜದಲ್ಲಿ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಕಾನೂನಿನ ಅವಶ್ಯಕತೆ ಇದೆ ಎಂದರು.<br /> <br /> ನೂರು ರೂಪಾಯಿಗಿಂತ ಹೆಚ್ಚಿನ ಮೊತ್ತದ ಖರೀದಿ ವ್ಯವಹಾರವನ್ನು ಊರಿನ ಪಂಚಾಯ್ತಿದಾರರ ಸಮ್ಮುಖದಲ್ಲಿ ಮಾಡಿಕೊಂಡರೆ ಅದು ಉರ್ಜಿತವಾಗುವುದಿಲ್ಲ. ಆದ್ದರಿಂದ ಗ್ರಾಮಸ್ಥರು ಇಂತಹ ವ್ಯವಹಾರಗಳನ್ನು ನೋಂದಣಿ ಕಚೇರಿಗಳಲ್ಲಿ ಕಾನೂನಬದ್ಧವಾಗಿ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.<br /> <br /> ನ್ಯಾಯಾಧೀಶ ಉಮೇಶ ಮೂಲಿಮನಿ ಮಾತನಾಡಿ, ಗ್ರಾಮೀಣ ಜನರು ಕಾನೂನು ಸಾಕ್ಷರತೆ ಅರಿತುಕೊಂಡರೆ ವ್ಯಾಜ್ಯಗಳು ಕಡಿಮೆಯಾಗುತ್ತವೆ ಎಂದರು.<br /> <br /> ವಕೀಲರ ಸಂಘದ ಅಧ್ಯಕ್ಷ ವೈ.ಆರ್.ಗುಡೂರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಾನೂನು ಸಾಕ್ಷರತೆ ಮೂಡಿಸುವ ಅವಶ್ಯಕತೆ ಬಹಳ ಮುಖ್ಯವಾಗಿದೆ. ಮಕ್ಕಳು ಚಿಕ್ಕಂದಿನಿಂದಲೇ ಕಾನೂನು ಮಾಹಿತಿ ಪುಸ್ತಕವನ್ನು ಓದಿ ಕಾನೂನಿನ ಅರಿವನ್ನು ಹೊಂದಬೇಕು ಎಂದರು.<br /> <br /> ವಕೀಲ ಬಿ.ಎ.ಗೂಳರಡ್ಡಿ `ಮಧ್ಯಸ್ಥಿಕೆ ಮತ್ತು ಎಡಿಆರ್ ಪದ್ಧತಿ~ ಕುರಿತು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಎಫ್. ತಹಶೀಲ್ದಾರ `ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ~ ಕುರಿತು ಉಪನ್ಯಾಸ ನೀಡಿದರು.<br /> ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಎಸ್.ವಾಲಿ ಅಧ್ಯಕ್ಷತೆ ವಹಿಸಿದ್ದರು.<br /> <br /> ನ್ಯಾಯಾಧೀಶ ಎಲ್.ಆರ್.ಕುರಣೆ, ತಾಲ್ಲೂಕು ಪಂಚಾಯಿತಿ ಸದಸ್ಯ ಎ.ಎಸ್.ಅಗಸಿಮನಿ, ವಕೀಲ ಸಂಘದ ಕಾರ್ಯದರ್ಶಿ ಎಂ.ಎಸ್. ರಾಮೇನಹಳ್ಳಿ, ಸಿ.ಆರ್.ಚಳ್ಳಮರದ, ಎಸ್.ಆರ್.ಗೊಂಡಬಾಳ. ಎಸ್.ವಿ.ಕಬಾಡಿ ಹಾಜರಿದ್ದರು. ಬಿ.ವಿ.ನೀಲರೂಟಿ ಸ್ವಾಗತಿಸಿದರು. ಎ.ಎಸ್.ಮಕಾನದಾದ ವಂದಿಸಿದರು. ಬಿ.ಎಂ.ಕುಕನೂರ ನಿರೂಪಿಸಿದರು. ವೀರಣ್ಣ ಚನ್ನಪ್ಪ ಅಂಗಡಿ ಗೀಗಿ ಪದ ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕಾನೂನಿನ ಅವಶ್ಯಕತೆ ಇದೆ ಎಂದು ನ್ಯಾಯಾಧೀಶ ಎಂ.ಎಸ್.ಪಾಟೀಲ ತಿಳಿಸಿದರು.<br /> <br /> ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಬಳಗಾನೂರಿನ ಚನ್ನವೀರ ಶರಣರ ಮಠದ ಆವರಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಹಾಗೂ ಜನತಾ ನ್ಯಾಯಾಲಯ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕಾನೂನು ನಮಗೆ ಏಕೆ ಬೇಕು ಎನ್ನುವ ಅರಿವು ಮೊದಲು ಉಂಟಾಗಬೇಕು. ಅದಕ್ಕಾಗಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಾಮಾನ್ಯ ಜನರಿಗೂ ಕಾನೂನಿನ ತಿಳಿವಳಿಕೆ ಮೂಡಿಸಲಾಗುತ್ತಿದೆ. ಸಮಾಜದಲ್ಲಿ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಕಾನೂನಿನ ಅವಶ್ಯಕತೆ ಇದೆ ಎಂದರು.<br /> <br /> ನೂರು ರೂಪಾಯಿಗಿಂತ ಹೆಚ್ಚಿನ ಮೊತ್ತದ ಖರೀದಿ ವ್ಯವಹಾರವನ್ನು ಊರಿನ ಪಂಚಾಯ್ತಿದಾರರ ಸಮ್ಮುಖದಲ್ಲಿ ಮಾಡಿಕೊಂಡರೆ ಅದು ಉರ್ಜಿತವಾಗುವುದಿಲ್ಲ. ಆದ್ದರಿಂದ ಗ್ರಾಮಸ್ಥರು ಇಂತಹ ವ್ಯವಹಾರಗಳನ್ನು ನೋಂದಣಿ ಕಚೇರಿಗಳಲ್ಲಿ ಕಾನೂನಬದ್ಧವಾಗಿ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.<br /> <br /> ನ್ಯಾಯಾಧೀಶ ಉಮೇಶ ಮೂಲಿಮನಿ ಮಾತನಾಡಿ, ಗ್ರಾಮೀಣ ಜನರು ಕಾನೂನು ಸಾಕ್ಷರತೆ ಅರಿತುಕೊಂಡರೆ ವ್ಯಾಜ್ಯಗಳು ಕಡಿಮೆಯಾಗುತ್ತವೆ ಎಂದರು.<br /> <br /> ವಕೀಲರ ಸಂಘದ ಅಧ್ಯಕ್ಷ ವೈ.ಆರ್.ಗುಡೂರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಾನೂನು ಸಾಕ್ಷರತೆ ಮೂಡಿಸುವ ಅವಶ್ಯಕತೆ ಬಹಳ ಮುಖ್ಯವಾಗಿದೆ. ಮಕ್ಕಳು ಚಿಕ್ಕಂದಿನಿಂದಲೇ ಕಾನೂನು ಮಾಹಿತಿ ಪುಸ್ತಕವನ್ನು ಓದಿ ಕಾನೂನಿನ ಅರಿವನ್ನು ಹೊಂದಬೇಕು ಎಂದರು.<br /> <br /> ವಕೀಲ ಬಿ.ಎ.ಗೂಳರಡ್ಡಿ `ಮಧ್ಯಸ್ಥಿಕೆ ಮತ್ತು ಎಡಿಆರ್ ಪದ್ಧತಿ~ ಕುರಿತು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಎಫ್. ತಹಶೀಲ್ದಾರ `ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ~ ಕುರಿತು ಉಪನ್ಯಾಸ ನೀಡಿದರು.<br /> ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಎಸ್.ವಾಲಿ ಅಧ್ಯಕ್ಷತೆ ವಹಿಸಿದ್ದರು.<br /> <br /> ನ್ಯಾಯಾಧೀಶ ಎಲ್.ಆರ್.ಕುರಣೆ, ತಾಲ್ಲೂಕು ಪಂಚಾಯಿತಿ ಸದಸ್ಯ ಎ.ಎಸ್.ಅಗಸಿಮನಿ, ವಕೀಲ ಸಂಘದ ಕಾರ್ಯದರ್ಶಿ ಎಂ.ಎಸ್. ರಾಮೇನಹಳ್ಳಿ, ಸಿ.ಆರ್.ಚಳ್ಳಮರದ, ಎಸ್.ಆರ್.ಗೊಂಡಬಾಳ. ಎಸ್.ವಿ.ಕಬಾಡಿ ಹಾಜರಿದ್ದರು. ಬಿ.ವಿ.ನೀಲರೂಟಿ ಸ್ವಾಗತಿಸಿದರು. ಎ.ಎಸ್.ಮಕಾನದಾದ ವಂದಿಸಿದರು. ಬಿ.ಎಂ.ಕುಕನೂರ ನಿರೂಪಿಸಿದರು. ವೀರಣ್ಣ ಚನ್ನಪ್ಪ ಅಂಗಡಿ ಗೀಗಿ ಪದ ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>