<p><strong>ಗೋಣಿಕೊಪ್ಪಲು:</strong> ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಟಿಟಿ-ಇಸಿಜಿ ಯಂತ್ರವನ್ನು ಸ್ವಾಮಿ ಅಕ್ಷರನಾತ್ಮನಂದಜಿ ಶನಿವಾರ ಸಾರ್ವಜನಿಕ ಸೇವೆಗೆ ಅರ್ಪಿಸಿದರು.<br /> <br /> 1942ರಲ್ಲಿ ಹೋಮಿಯೋಪತಿ ಕ್ಲಿನಿಕ್ ಆಗಿ ಆರಂಭಗೊಂಡ ಈ ಆಸ್ಪತ್ರೆಯು ಸಾರ್ವಜನಿಕರು, ದಾನಿಗಳು ಹಾಗೂ ಭಕ್ತರ ಮೂಲಕ ಈಗ ಬೃಹದಾಕಾರವಾಗಿ ಬೆಳೆದಿದೆ. ಇದೀಗ ಟಿಟಿ-ಇಸಿಜಿ ಯಂತ್ರ ಸೇರ್ಪಡೆಯಾಗಿದೆ. ಸುತ್ತಮುತ್ತಲಿನ ಜನತೆಗೆ ಮತ್ತಷ್ಟು ಸೌಲಭ್ಯ ಒದಗಿಸಲು ಶ್ರಮಿಸಲಾಗುವುದು ಎಂದು ಸ್ವಾಮೀಜಿ ಹೇಳಿದರು.<br /> <br /> ಆಶ್ರಮದ ಅಧ್ಯಕ್ಷ ಬೋಧಸ್ವರೂಪನಂದಜಿ ಮಾತನಾಡಿ ಇಸಿಜಿ ಮೂಲಕ ಹೃದ್ರೋಗಿಗಳನ್ನು ಪರೀಕ್ಷಿಸಿ ಇಂಟರ್ನೆಟ್ನಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕಳಿಸಿಕೊಡಲಾಗುವುದು. ಅಲ್ಲಿಯ ತಜ್ಞ ವೈದ್ಯರು ಪರೀಕ್ಷಿಸಿ ವರದಿ ನೀಡಿದ ಬಳಿಕ ಚಿಕಿತ್ಸೆ ನೀಡಲಾಗುವುದು. <br /> <br /> ಇದರಿಂದ ಅತಿಯಾದ ವೆಚ್ಚ, ವೈದ್ಯರಿಗಾಗಿ ಅಲೆಯುವುದು ಮತ್ತು ಕಾಯುವುದು ತಪ್ಪಲಿದೆ. ಜನತೆಯ ಸೇವೆಯೆ ಆಶ್ರಮದ ಗುರಿಯಾಗಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.<br /> ಗೋಣಿಕೊಪ್ಪಲು ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಸುಬ್ಬಯ್ಯ ಮಾತನಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಟಿಟಿ-ಇಸಿಜಿ ಯಂತ್ರವನ್ನು ಸ್ವಾಮಿ ಅಕ್ಷರನಾತ್ಮನಂದಜಿ ಶನಿವಾರ ಸಾರ್ವಜನಿಕ ಸೇವೆಗೆ ಅರ್ಪಿಸಿದರು.<br /> <br /> 1942ರಲ್ಲಿ ಹೋಮಿಯೋಪತಿ ಕ್ಲಿನಿಕ್ ಆಗಿ ಆರಂಭಗೊಂಡ ಈ ಆಸ್ಪತ್ರೆಯು ಸಾರ್ವಜನಿಕರು, ದಾನಿಗಳು ಹಾಗೂ ಭಕ್ತರ ಮೂಲಕ ಈಗ ಬೃಹದಾಕಾರವಾಗಿ ಬೆಳೆದಿದೆ. ಇದೀಗ ಟಿಟಿ-ಇಸಿಜಿ ಯಂತ್ರ ಸೇರ್ಪಡೆಯಾಗಿದೆ. ಸುತ್ತಮುತ್ತಲಿನ ಜನತೆಗೆ ಮತ್ತಷ್ಟು ಸೌಲಭ್ಯ ಒದಗಿಸಲು ಶ್ರಮಿಸಲಾಗುವುದು ಎಂದು ಸ್ವಾಮೀಜಿ ಹೇಳಿದರು.<br /> <br /> ಆಶ್ರಮದ ಅಧ್ಯಕ್ಷ ಬೋಧಸ್ವರೂಪನಂದಜಿ ಮಾತನಾಡಿ ಇಸಿಜಿ ಮೂಲಕ ಹೃದ್ರೋಗಿಗಳನ್ನು ಪರೀಕ್ಷಿಸಿ ಇಂಟರ್ನೆಟ್ನಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕಳಿಸಿಕೊಡಲಾಗುವುದು. ಅಲ್ಲಿಯ ತಜ್ಞ ವೈದ್ಯರು ಪರೀಕ್ಷಿಸಿ ವರದಿ ನೀಡಿದ ಬಳಿಕ ಚಿಕಿತ್ಸೆ ನೀಡಲಾಗುವುದು. <br /> <br /> ಇದರಿಂದ ಅತಿಯಾದ ವೆಚ್ಚ, ವೈದ್ಯರಿಗಾಗಿ ಅಲೆಯುವುದು ಮತ್ತು ಕಾಯುವುದು ತಪ್ಪಲಿದೆ. ಜನತೆಯ ಸೇವೆಯೆ ಆಶ್ರಮದ ಗುರಿಯಾಗಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.<br /> ಗೋಣಿಕೊಪ್ಪಲು ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಸುಬ್ಬಯ್ಯ ಮಾತನಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>