<p><strong>ಚಿಕ್ಕೋಡಿ:</strong> ತಾಲ್ಲೂಕಿನ ನಿಪ್ಪಾಣಿ ವಲಯ ವ್ಯಾಪ್ತಿಯಲ್ಲಿ ಬರುವ ಬೋರಗಾಂವ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ಕೊಠಡಿಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯನ್ನು ಒದಗಿಸಲಾಗಿದ್ದು, ಶೀಘ್ರದಲ್ಲೇ ಇನ್ನೊಂದು ಕೊಠಡಿ ಒದಗಿಸಲಾಗುವುದು ಹಾಗೂ ಶಿಥಿಲಗೊಂಡಿರುವ ಕಟ್ಟಡ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು' ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ತಿಳಿಸಿದ್ದಾರೆ.<br /> <br /> ಕಳೆದ ಮಂಗಳವಾರ (ಜೂ.11)ದ `ಪ್ರಜಾವಾಣಿ' ಸಂಚಿಕೆಯಲ್ಲಿ `ಕಾಯಕಲ್ಪಕ್ಕೆ ಕಾದಿದೆ ಶಾಲಾ ಕಟ್ಟಡ' ಶೀರ್ಷಿಕೆಯಡಿ ಪ್ರಕಟಗೊಂಡ ವರದಿಗೆ ಸ್ಪಂದಿಸಿ ಶನಿವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು `ಪ್ರಜಾವಾಣಿ'ಯೊಂದಿಗೆ ಮಾತನಾಡಿದರು.<br /> <br /> ಶಾಲೆಗೆ ಸದ್ಯ 17 ಕೊಠಡಿಗಳಿವೆ. ಆದರೆ, 5 ಕೊಠಡಿಗಳು ಮಾತ್ರ ತರಗತಿಗಳನ್ನು ನಡೆಸಲು ಬಳಸಲಾಗುತ್ತಿದೆ. ಉಳಿದ ಕೊಠಡಿಗಳು ಶಿಥಿಲಗೊಂಡಿವೆ. ಅದರಲ್ಲೂ ಎರಡು ಕೊಠಡಿಗಳನ್ನು ದುರಸ್ತಿ ಮಾಡಿಕೊಂಡು ಬಳಕೆ ಮಾಡಲಾಗುತ್ತಿದೆ.<br /> <br /> ಸುರಕ್ಷತೆ ದೃಷ್ಟಿಯಿಂದ ಮುಖ್ಯ ಕಟ್ಟಡ ಎರಡು ಕೊಠಡಿಗಳಲ್ಲೇ ಅಕ್ಷರದಾಸೋಹ ಸಾಮಗ್ರಿ ದಾಸ್ತಾನು ಮತ್ತು ಗಣಕಯಂತ್ರಗಳನ್ನು ಅಳವಡಿಸಲಾಗಿದೆ. ಹೀಗಾಗಿ ಶಾಲೆಗೆ ಕೊಠಡಿಗಳ ಅಭಾವ ಎದುರಾಗಿದ್ದು, ಸದ್ಯಕ್ಕೆ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯನ್ನು ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ಒದಗಿಸಲಾಗಿದೆ. ಇನ್ನೂ 2 ಕೊಠಡಿಗಳ ಆಭಾವ ಎದುರಾಗಲಿದ್ದು, ಶೀಘ್ರದಲ್ಲೇ ಇನ್ನೊಂದು ಕೊಠಡಿಯನ್ನು ಒದಗಿಸಲು ಪ್ರಯತ್ನಿಸಲಾಗುವುದು' ಎಂದು ತಿಳಿಸಿದರು.<br /> <br /> ಹೊಸ ಕಟ್ಟಡಗಳ ಮಂಜೂರು ಪ್ರಕ್ರಿಯೆ ವಿಳಂಬವಾಗುವುದರಿಂದ ಇತರ ಅನುದಾನವನ್ನು ಬಳಸಿಕೊಂಡು ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ದುರಸ್ತಿಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸುವುದಾಗಿ ದಂಡಿನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ತಾಲ್ಲೂಕಿನ ನಿಪ್ಪಾಣಿ ವಲಯ ವ್ಯಾಪ್ತಿಯಲ್ಲಿ ಬರುವ ಬೋರಗಾಂವ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ಕೊಠಡಿಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯನ್ನು ಒದಗಿಸಲಾಗಿದ್ದು, ಶೀಘ್ರದಲ್ಲೇ ಇನ್ನೊಂದು ಕೊಠಡಿ ಒದಗಿಸಲಾಗುವುದು ಹಾಗೂ ಶಿಥಿಲಗೊಂಡಿರುವ ಕಟ್ಟಡ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು' ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ತಿಳಿಸಿದ್ದಾರೆ.<br /> <br /> ಕಳೆದ ಮಂಗಳವಾರ (ಜೂ.11)ದ `ಪ್ರಜಾವಾಣಿ' ಸಂಚಿಕೆಯಲ್ಲಿ `ಕಾಯಕಲ್ಪಕ್ಕೆ ಕಾದಿದೆ ಶಾಲಾ ಕಟ್ಟಡ' ಶೀರ್ಷಿಕೆಯಡಿ ಪ್ರಕಟಗೊಂಡ ವರದಿಗೆ ಸ್ಪಂದಿಸಿ ಶನಿವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು `ಪ್ರಜಾವಾಣಿ'ಯೊಂದಿಗೆ ಮಾತನಾಡಿದರು.<br /> <br /> ಶಾಲೆಗೆ ಸದ್ಯ 17 ಕೊಠಡಿಗಳಿವೆ. ಆದರೆ, 5 ಕೊಠಡಿಗಳು ಮಾತ್ರ ತರಗತಿಗಳನ್ನು ನಡೆಸಲು ಬಳಸಲಾಗುತ್ತಿದೆ. ಉಳಿದ ಕೊಠಡಿಗಳು ಶಿಥಿಲಗೊಂಡಿವೆ. ಅದರಲ್ಲೂ ಎರಡು ಕೊಠಡಿಗಳನ್ನು ದುರಸ್ತಿ ಮಾಡಿಕೊಂಡು ಬಳಕೆ ಮಾಡಲಾಗುತ್ತಿದೆ.<br /> <br /> ಸುರಕ್ಷತೆ ದೃಷ್ಟಿಯಿಂದ ಮುಖ್ಯ ಕಟ್ಟಡ ಎರಡು ಕೊಠಡಿಗಳಲ್ಲೇ ಅಕ್ಷರದಾಸೋಹ ಸಾಮಗ್ರಿ ದಾಸ್ತಾನು ಮತ್ತು ಗಣಕಯಂತ್ರಗಳನ್ನು ಅಳವಡಿಸಲಾಗಿದೆ. ಹೀಗಾಗಿ ಶಾಲೆಗೆ ಕೊಠಡಿಗಳ ಅಭಾವ ಎದುರಾಗಿದ್ದು, ಸದ್ಯಕ್ಕೆ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯನ್ನು ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ಒದಗಿಸಲಾಗಿದೆ. ಇನ್ನೂ 2 ಕೊಠಡಿಗಳ ಆಭಾವ ಎದುರಾಗಲಿದ್ದು, ಶೀಘ್ರದಲ್ಲೇ ಇನ್ನೊಂದು ಕೊಠಡಿಯನ್ನು ಒದಗಿಸಲು ಪ್ರಯತ್ನಿಸಲಾಗುವುದು' ಎಂದು ತಿಳಿಸಿದರು.<br /> <br /> ಹೊಸ ಕಟ್ಟಡಗಳ ಮಂಜೂರು ಪ್ರಕ್ರಿಯೆ ವಿಳಂಬವಾಗುವುದರಿಂದ ಇತರ ಅನುದಾನವನ್ನು ಬಳಸಿಕೊಂಡು ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ದುರಸ್ತಿಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸುವುದಾಗಿ ದಂಡಿನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>