<p>ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ (ಆರ್ಟಿಇ) ಅನುಷ್ಠಾನದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಬೇಕೆಂಬುದು ರಾಜ್ಯ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಸೋಮವಾರದಿಂದ ನಡೆಸುತ್ತಿದ್ದ ಶಾಲಾ ಬಂದ್ ಅನ್ನು ಬುಧವಾರ ವಾಪಸ್ ಪಡೆಯಿತು.<br /> <br /> `ವಿದ್ಯಾರ್ಥಿಗಳಿಗೆ ಅನನುಕೂಲವಾಗಬಾರದೆಂಬ ಉದ್ದೇಶದಿಂದ ಬಂದ್ ಹಿಂಪಡೆಯಲಾಗಿದೆ. ಆದರೆ, ಕಾಯ್ದೆಯ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟ ಪಡಿಸುವವರೆಗೂ ಹೋರಾಟ ಮುಂದುವರಿಯಲಿದೆ. ಹೋರಾಟದ ರೂಪುರೇಷೆ ಬಗ್ಗೆ ಸದ್ಯದಲ್ಲೇ ಕುಸ್ಮಾ ಸದಸ್ಯರ ಸಭೆ ಕರೆದು ಚರ್ಚಿಸಲಾಗುವುದು. ಸರ್ಕಾರದ ನೀತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು~ ಎಂದು ಕುಸ್ಮಾ ಕಾರ್ಯದರ್ಶಿ ಎ.ಮರಿಯಪ್ಪ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಶರ್ಮ ರಾಜೀನಾಮೆ ಅಂಗೀಕಾರ: `ತಮ್ಮ ಗೊಂದಲದ ಹೇಳಿಕೆಯ ಬಗ್ಗೆ ಬೇಸರಗೊಂಡು ಕುಸ್ಮಾ ಅಧ್ಯಕ್ಷ ಸ್ಥಾನಕ್ಕೆ ಜಿ.ಎಸ್. ಶರ್ಮ ಮಂಗಳವಾರ ನೀಡಿದ್ದ ರಾಜೀನಾಮೆಯನ್ನು ಬುಧವಾರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಮುಂದಿಟ್ಟು ಅಂಗೀಕರಿಸಲಾಗಿದೆ. ಸಂಘದ ಮುಂದಿನ ಅಧ್ಯಕ್ಷರ ಆಯ್ಕೆಯ ಬಗ್ಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು~ ಎಂದು ಅವರು ಹೇಳಿದರು.<br /> <br /> ಶರ್ಮ ವಿರುದ್ಧ ದೂರು : `ಬಡ ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕುಸ್ಮಾದ ಮಾಜಿ ಅಧ್ಯಕ್ಷ ಜಿ.ಎಸ್.ಶರ್ಮ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಾತಿ ನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಅವರನ್ನು ಬಂಧಿಸಬೇಕು~ ಎಂದು ದೇವನಹಳ್ಳಿ ತಾಲ್ಲೂಕಿನ ಚೌಡನಹಳ್ಳಿಯ ದಲಿತ ಮುಖಂಡ ಎಂ.ಲೋಕೇಶ್ ಎಂಬುವರು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.<br /> <br /> `ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆ 1999, ಅನುಬಂಧ 9 ಹಾಗೂ ಭಾರತೀಯ ದಂಡ ಸಂಹಿತೆ 153 ಎ ಕಲಂನ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ~ ಎಂದು ದೇವನಹಳ್ಳಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ (ಆರ್ಟಿಇ) ಅನುಷ್ಠಾನದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಬೇಕೆಂಬುದು ರಾಜ್ಯ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಸೋಮವಾರದಿಂದ ನಡೆಸುತ್ತಿದ್ದ ಶಾಲಾ ಬಂದ್ ಅನ್ನು ಬುಧವಾರ ವಾಪಸ್ ಪಡೆಯಿತು.<br /> <br /> `ವಿದ್ಯಾರ್ಥಿಗಳಿಗೆ ಅನನುಕೂಲವಾಗಬಾರದೆಂಬ ಉದ್ದೇಶದಿಂದ ಬಂದ್ ಹಿಂಪಡೆಯಲಾಗಿದೆ. ಆದರೆ, ಕಾಯ್ದೆಯ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟ ಪಡಿಸುವವರೆಗೂ ಹೋರಾಟ ಮುಂದುವರಿಯಲಿದೆ. ಹೋರಾಟದ ರೂಪುರೇಷೆ ಬಗ್ಗೆ ಸದ್ಯದಲ್ಲೇ ಕುಸ್ಮಾ ಸದಸ್ಯರ ಸಭೆ ಕರೆದು ಚರ್ಚಿಸಲಾಗುವುದು. ಸರ್ಕಾರದ ನೀತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು~ ಎಂದು ಕುಸ್ಮಾ ಕಾರ್ಯದರ್ಶಿ ಎ.ಮರಿಯಪ್ಪ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಶರ್ಮ ರಾಜೀನಾಮೆ ಅಂಗೀಕಾರ: `ತಮ್ಮ ಗೊಂದಲದ ಹೇಳಿಕೆಯ ಬಗ್ಗೆ ಬೇಸರಗೊಂಡು ಕುಸ್ಮಾ ಅಧ್ಯಕ್ಷ ಸ್ಥಾನಕ್ಕೆ ಜಿ.ಎಸ್. ಶರ್ಮ ಮಂಗಳವಾರ ನೀಡಿದ್ದ ರಾಜೀನಾಮೆಯನ್ನು ಬುಧವಾರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಮುಂದಿಟ್ಟು ಅಂಗೀಕರಿಸಲಾಗಿದೆ. ಸಂಘದ ಮುಂದಿನ ಅಧ್ಯಕ್ಷರ ಆಯ್ಕೆಯ ಬಗ್ಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು~ ಎಂದು ಅವರು ಹೇಳಿದರು.<br /> <br /> ಶರ್ಮ ವಿರುದ್ಧ ದೂರು : `ಬಡ ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕುಸ್ಮಾದ ಮಾಜಿ ಅಧ್ಯಕ್ಷ ಜಿ.ಎಸ್.ಶರ್ಮ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಾತಿ ನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಅವರನ್ನು ಬಂಧಿಸಬೇಕು~ ಎಂದು ದೇವನಹಳ್ಳಿ ತಾಲ್ಲೂಕಿನ ಚೌಡನಹಳ್ಳಿಯ ದಲಿತ ಮುಖಂಡ ಎಂ.ಲೋಕೇಶ್ ಎಂಬುವರು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.<br /> <br /> `ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆ 1999, ಅನುಬಂಧ 9 ಹಾಗೂ ಭಾರತೀಯ ದಂಡ ಸಂಹಿತೆ 153 ಎ ಕಲಂನ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ~ ಎಂದು ದೇವನಹಳ್ಳಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>