<p><strong>ಬೆಂಗಳೂರು:</strong> ಅಂಗನವಾಡಿಯಿಂದ 5ನೇ ತರಗತಿ ಅಥವಾ 7ನೇ ತರಗತಿವರೆಗಿನ ಮಕ್ಕಳಿಗೆ ಹಾಲು ನೀಡುವ ಬಗ್ಗೆ ಚರ್ಚೆ ನಡೆದಿದೆ. ಆದರೆ, ಯಾವ ತರಗತಿವರೆಗಿನ ಮಕ್ಕಳಿಗೆ ನೀಡಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ ಎಂದು ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.<br /> <br /> ಕರ್ನಾಟಕ ಹಾಲು ಮಹಾಮಂಡಲಕ್ಕೆ (ಕೆಎಂಎಫ್) ಪೂರೈಕೆ ಆಗುವ ಹಾಲಿನ ಪ್ರಮಾಣ ಹೆಚ್ಚಾಗಿದೆ. ಹಾಲನ್ನು ಪೌಡರ್ ಆಗಿ ಪರಿವರ್ತಿಸಲು ಅಧಿಕ ವೆಚ್ಚವಾಗುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಮಕ್ಕಳಿಗೆ ಹಾಲು ನೀಡಲು ತೀರ್ಮಾನಿಸಲಾಗಿದೆ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> ತಿಂಗಳಿಗೆ 54 ಲಕ್ಷ ಲೀಟರ್ ಹಾಲು ಪೂರೈಕೆ ಆಗುತ್ತಿದೆ. ಆದರೆ, ಬಳಕೆ ಆಗುತ್ತಿರುವುದು 34 ಲಕ್ಷ ಲೀಟರ್ ಮಾತ್ರ. ಹೆಚ್ಚುವರಿಯಾಗಿ 20 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಈ ಪೈಕಿ ಹತ್ತು ಲಕ್ಷ ಲೀಟರ್ ಹಾಲನ್ನು ತಮಿಳುನಾಡಿಗೆ ಕಳುಹಿಸುತ್ತಿದ್ದರೆ, ಇನ್ನುಳಿದ ಹತ್ತು ಲಕ್ಷ ಲೀಟರ್ ಹಾಲನ್ನು ಪೌಡರ್ ಆಗಿ ಪರಿವರ್ತಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂಗನವಾಡಿಯಿಂದ 5ನೇ ತರಗತಿ ಅಥವಾ 7ನೇ ತರಗತಿವರೆಗಿನ ಮಕ್ಕಳಿಗೆ ಹಾಲು ನೀಡುವ ಬಗ್ಗೆ ಚರ್ಚೆ ನಡೆದಿದೆ. ಆದರೆ, ಯಾವ ತರಗತಿವರೆಗಿನ ಮಕ್ಕಳಿಗೆ ನೀಡಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ ಎಂದು ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.<br /> <br /> ಕರ್ನಾಟಕ ಹಾಲು ಮಹಾಮಂಡಲಕ್ಕೆ (ಕೆಎಂಎಫ್) ಪೂರೈಕೆ ಆಗುವ ಹಾಲಿನ ಪ್ರಮಾಣ ಹೆಚ್ಚಾಗಿದೆ. ಹಾಲನ್ನು ಪೌಡರ್ ಆಗಿ ಪರಿವರ್ತಿಸಲು ಅಧಿಕ ವೆಚ್ಚವಾಗುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಮಕ್ಕಳಿಗೆ ಹಾಲು ನೀಡಲು ತೀರ್ಮಾನಿಸಲಾಗಿದೆ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> ತಿಂಗಳಿಗೆ 54 ಲಕ್ಷ ಲೀಟರ್ ಹಾಲು ಪೂರೈಕೆ ಆಗುತ್ತಿದೆ. ಆದರೆ, ಬಳಕೆ ಆಗುತ್ತಿರುವುದು 34 ಲಕ್ಷ ಲೀಟರ್ ಮಾತ್ರ. ಹೆಚ್ಚುವರಿಯಾಗಿ 20 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಈ ಪೈಕಿ ಹತ್ತು ಲಕ್ಷ ಲೀಟರ್ ಹಾಲನ್ನು ತಮಿಳುನಾಡಿಗೆ ಕಳುಹಿಸುತ್ತಿದ್ದರೆ, ಇನ್ನುಳಿದ ಹತ್ತು ಲಕ್ಷ ಲೀಟರ್ ಹಾಲನ್ನು ಪೌಡರ್ ಆಗಿ ಪರಿವರ್ತಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>