<p>ದೇವನಹಳ್ಳಿ: ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನವನ್ನು ಸ್ಥಳಿಯರು ಒತ್ತುವರಿ ಮಾಡಿಕೊಂಡಿದ್ದರೂ ಸಂಬಂಧಪಟ್ಟ ಇಲಾಖೆ ಸ್ವಾಧಿನ ಪಡೆಯುವಲ್ಲಿ ವಿಫಲವಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಶಾಮೇಗೌಡ ಆರೋಪಿಸಿದರು.<br /> <br /> ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಶಾಲೆಯು 1952ರಲ್ಲಿ ಆರಂಭವಾಗಿದೆ. ಒಂದರಿಂದ ಏಳನೇ ತರಗತಿವರೆಗೆ ಒಟ್ಟು 70 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆಯ 100*200 ಅಡಿ ವಿಸ್ತೀರ್ಣ ಹೊಂದಿದೆ. 1994-95 ರಲ್ಲಿ ವಿಶ್ವನಾಥಪುರ ಗ್ರಾ. ಪಂ.ಯಿಂದ ಇದಕ್ಕೆ ಖಾತೆ ಮಾಡಿಕೊಡಲಾಗಿದೆ. <br /> <br /> ಈ ಜಾಗದಲ್ಲಿ ಒತ್ತುವರಿ ಆಗಿದ್ದು ಈ ಸಂಬಂಧ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗೆ 30.1.2010 ರಂದು ದಾಖಲೆ ಸಹಿತ ಮನವಿ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗೂ ಪೂರಕ ದಾಖಲೆಯೊಂದಿಗೆ ತಿಳಿಸಲಾಗಿದೆ ಆದರೆ ಪ್ರಯೋಜನವಾಗಿಲ್ಲ ಎಂದು ದೂರಿದರು.<br /> <br /> ಕೂಡಲೇ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಶಾಲಾಭಿವೃದ್ಧಿ ಪದಾಧಿಕಾರಿ, ಸ್ತ್ರಿಶಕ್ತಿ ಗುಂಪು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿ ಬ್ಯಾಡರಹಳ್ಳಿ ಗ್ರಾಮದಿಂದ ಕಾಲ್ನಡಿಗೆ ಜಾಥಾ ನಡೆಸಿ ಮಿನಿವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಶಾಲಾಭಿವೃದ್ಧಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.<br /> <br /> ಎಸ್ಡಿಎಂಸಿ ಉಪಾಧ್ಯಕ್ಷೆ ಅನುಸೂಯಮ್ಮ, ಸದಸ್ಯ ಮಂಜುನಾಥ್, ದೇವರಾಜ್, ಬೈರೇಗೌಡ, ರವೀಂದ್ರ ಶೋಭಾ, ಮಂಜುಳಮ್ಮ, ಲಕ್ಷ್ಮಮ್ಮ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನವನ್ನು ಸ್ಥಳಿಯರು ಒತ್ತುವರಿ ಮಾಡಿಕೊಂಡಿದ್ದರೂ ಸಂಬಂಧಪಟ್ಟ ಇಲಾಖೆ ಸ್ವಾಧಿನ ಪಡೆಯುವಲ್ಲಿ ವಿಫಲವಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಶಾಮೇಗೌಡ ಆರೋಪಿಸಿದರು.<br /> <br /> ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಶಾಲೆಯು 1952ರಲ್ಲಿ ಆರಂಭವಾಗಿದೆ. ಒಂದರಿಂದ ಏಳನೇ ತರಗತಿವರೆಗೆ ಒಟ್ಟು 70 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆಯ 100*200 ಅಡಿ ವಿಸ್ತೀರ್ಣ ಹೊಂದಿದೆ. 1994-95 ರಲ್ಲಿ ವಿಶ್ವನಾಥಪುರ ಗ್ರಾ. ಪಂ.ಯಿಂದ ಇದಕ್ಕೆ ಖಾತೆ ಮಾಡಿಕೊಡಲಾಗಿದೆ. <br /> <br /> ಈ ಜಾಗದಲ್ಲಿ ಒತ್ತುವರಿ ಆಗಿದ್ದು ಈ ಸಂಬಂಧ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗೆ 30.1.2010 ರಂದು ದಾಖಲೆ ಸಹಿತ ಮನವಿ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗೂ ಪೂರಕ ದಾಖಲೆಯೊಂದಿಗೆ ತಿಳಿಸಲಾಗಿದೆ ಆದರೆ ಪ್ರಯೋಜನವಾಗಿಲ್ಲ ಎಂದು ದೂರಿದರು.<br /> <br /> ಕೂಡಲೇ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಶಾಲಾಭಿವೃದ್ಧಿ ಪದಾಧಿಕಾರಿ, ಸ್ತ್ರಿಶಕ್ತಿ ಗುಂಪು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿ ಬ್ಯಾಡರಹಳ್ಳಿ ಗ್ರಾಮದಿಂದ ಕಾಲ್ನಡಿಗೆ ಜಾಥಾ ನಡೆಸಿ ಮಿನಿವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಶಾಲಾಭಿವೃದ್ಧಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.<br /> <br /> ಎಸ್ಡಿಎಂಸಿ ಉಪಾಧ್ಯಕ್ಷೆ ಅನುಸೂಯಮ್ಮ, ಸದಸ್ಯ ಮಂಜುನಾಥ್, ದೇವರಾಜ್, ಬೈರೇಗೌಡ, ರವೀಂದ್ರ ಶೋಭಾ, ಮಂಜುಳಮ್ಮ, ಲಕ್ಷ್ಮಮ್ಮ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>