<p>ಬೆಂಗಳೂರು: `ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಆಯಾ ರಾಜ್ಯ ಸರ್ಕಾರಗಳ ಒಪ್ಪಿಗೆ ಕೋರಲಾಗಿದೆ~ ಎಂದು ಕಂಚಿ ಕಾಮಕೋಟಿ ಮಠದ ಜಯೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು. <br /> <br /> ಭಗವದ್ಗೀತಾ ಅಭಿಯಾನ ಕರ್ನಾಟಕ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಭಗವದ್ಗೀತೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಮಾತ್ರ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ನಡೆಯುತ್ತಿದೆ. ಇದಕ್ಕೆ ಆ ಪಕ್ಷದ ಆಡಳಿತವಿರುವ ಇತರೆ ರಾಜ್ಯಗಳು ಕೂಡ ಅನುಮತಿ ನೀಡಬೇಕು~ ಎಂದು ಅವರು ಮನವಿ ಮಾಡಿದರು.<br /> `ಅನೇಕ ಸಮುದಾಯಗಳು ಧಾರ್ಮಿಕ ಶಾಲೆಗಳಲ್ಲಿ ತಮ್ಮ ತಮ್ಮ ಧರ್ಮಗ್ರಂಥಗಳ ಬಗ್ಗೆ ಬೋಧಿಸುತ್ತಿವೆ. ಅದೇ ಮಾದರಿ ಭಗವದ್ಗೀತೆಯನ್ನು ಕೂಡ ಎಲ್ಲ ಶಾಲೆಗಳಲ್ಲಿ ಬೋಧಿಸುವಂತಾಗಬೇಕು~ ಎಂದರು. <br /> <br /> ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ವ್ಯಕ್ತಿತ್ವ ವಿಕಸನ, ನೈತಿಕ ಶಿಕ್ಷಣ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಾಮಾಜಿಕ ಸಾಮರಸ್ಯ ಅಂಶಗಳ ಆಧಾರದ ಮೇಲೆ ಅಭಿಯಾನ ಪ್ರಾರಂಭಿಸಲಾಯಿತು. 2007ರಲ್ಲಿ ಆರಂಭಗೊಂಡ ಭಗವದ್ಗೀತಾ ಅಭಿಯಾನವು ನಾಲ್ಕು ವರ್ಷಗಳನ್ನು ಪೂರೈಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.<br /> <br /> ಈ ಅಭಿಯಾನ ಕೇವಲ ಹಿಂದೂಗಳಿಗಷ್ಟೇ ಸೀಮಿತವಾಗದೇ ಜಗತ್ತಿನ ಎಲ್ಲಾ ಧರ್ಮಗಳಲ್ಲಿ ಭಗವದ್ಗೀತೆ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಅವರು ತಿಳಿಸಿದರು. <br /> <br /> ಗೃಹ ಹಾಗೂ ಸಾರಿಗೆ ಸಚಿವ ಆರ್. ಅಶೋಕ, `ಪರಕೀಯರ ದಾಳಿಗಳು ನಮ್ಮನ್ನು ನಲುಗಿಸಿದರೂ ಪುನಃ ಎದ್ದು ನಿಲ್ಲುವಂತೆ ಮಾಡಿದ್ದು ನಮ್ಮ ಧರ್ಮ, ಪರಂಪರೆ ಮತ್ತು ಸಂಸ್ಕೃತಿ. ಈ ನಿಟ್ಟಿನಲ್ಲಿ ಭಗವದ್ಗೀತೆ ಅಭಿಯಾನವನ್ನು ನಡೆಸುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ~ ಎಂದು ಅಭಿಪ್ರಾಯಪಟ್ಟರು.<br /> <br /> ಇದೇ ಸಂದರ್ಭದಲ್ಲಿ ಭಗವದ್ಗೀತಾ ಅಭಿಯಾನದ ಬಗ್ಗೆ ಸಂಪೂರ್ಣ ಮಾಹಿತಿಯುಳ್ಳ ಅಂತರ್ಜಾಲ ಹಾಗೂ ಸ್ವಯಂಪ್ರಕಾಶ ಸಚ್ಚಿದಾನಂದ ಸ್ವಾಮೀಜಿಯವರ `ಗೀತಾಂತರಂಗ~ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.<br /> <br /> ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ, ಸ್ವಯಂಪ್ರಕಾಶ ಸಚ್ಚಿದಾನಂದ ಸ್ವಾಮೀಜಿ, ಚಿನ್ಮಯ ಮಿಷನ್ನ ಬ್ರಹ್ಮಾನಂದಜಿ, ಭಗವದ್ಗೀತಾ ಅಭಿಯಾನ ರಾಜ್ಯ ಸಮಿತಿಯ ಗೌರವಾಧ್ಯಕ್ಷ ನ್ಯಾ.ಡಾ.ಎಂ.ರಾಮಾಜೋಯಿಸ್, ಶಾಸಕರಾದ ಎಂ.ಕೃಷ್ಣಪ್ಪ, ಎಲ್.ಎ.ರವಿ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಆಯಾ ರಾಜ್ಯ ಸರ್ಕಾರಗಳ ಒಪ್ಪಿಗೆ ಕೋರಲಾಗಿದೆ~ ಎಂದು ಕಂಚಿ ಕಾಮಕೋಟಿ ಮಠದ ಜಯೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು. <br /> <br /> ಭಗವದ್ಗೀತಾ ಅಭಿಯಾನ ಕರ್ನಾಟಕ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಭಗವದ್ಗೀತೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಮಾತ್ರ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ನಡೆಯುತ್ತಿದೆ. ಇದಕ್ಕೆ ಆ ಪಕ್ಷದ ಆಡಳಿತವಿರುವ ಇತರೆ ರಾಜ್ಯಗಳು ಕೂಡ ಅನುಮತಿ ನೀಡಬೇಕು~ ಎಂದು ಅವರು ಮನವಿ ಮಾಡಿದರು.<br /> `ಅನೇಕ ಸಮುದಾಯಗಳು ಧಾರ್ಮಿಕ ಶಾಲೆಗಳಲ್ಲಿ ತಮ್ಮ ತಮ್ಮ ಧರ್ಮಗ್ರಂಥಗಳ ಬಗ್ಗೆ ಬೋಧಿಸುತ್ತಿವೆ. ಅದೇ ಮಾದರಿ ಭಗವದ್ಗೀತೆಯನ್ನು ಕೂಡ ಎಲ್ಲ ಶಾಲೆಗಳಲ್ಲಿ ಬೋಧಿಸುವಂತಾಗಬೇಕು~ ಎಂದರು. <br /> <br /> ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ವ್ಯಕ್ತಿತ್ವ ವಿಕಸನ, ನೈತಿಕ ಶಿಕ್ಷಣ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಾಮಾಜಿಕ ಸಾಮರಸ್ಯ ಅಂಶಗಳ ಆಧಾರದ ಮೇಲೆ ಅಭಿಯಾನ ಪ್ರಾರಂಭಿಸಲಾಯಿತು. 2007ರಲ್ಲಿ ಆರಂಭಗೊಂಡ ಭಗವದ್ಗೀತಾ ಅಭಿಯಾನವು ನಾಲ್ಕು ವರ್ಷಗಳನ್ನು ಪೂರೈಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.<br /> <br /> ಈ ಅಭಿಯಾನ ಕೇವಲ ಹಿಂದೂಗಳಿಗಷ್ಟೇ ಸೀಮಿತವಾಗದೇ ಜಗತ್ತಿನ ಎಲ್ಲಾ ಧರ್ಮಗಳಲ್ಲಿ ಭಗವದ್ಗೀತೆ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಅವರು ತಿಳಿಸಿದರು. <br /> <br /> ಗೃಹ ಹಾಗೂ ಸಾರಿಗೆ ಸಚಿವ ಆರ್. ಅಶೋಕ, `ಪರಕೀಯರ ದಾಳಿಗಳು ನಮ್ಮನ್ನು ನಲುಗಿಸಿದರೂ ಪುನಃ ಎದ್ದು ನಿಲ್ಲುವಂತೆ ಮಾಡಿದ್ದು ನಮ್ಮ ಧರ್ಮ, ಪರಂಪರೆ ಮತ್ತು ಸಂಸ್ಕೃತಿ. ಈ ನಿಟ್ಟಿನಲ್ಲಿ ಭಗವದ್ಗೀತೆ ಅಭಿಯಾನವನ್ನು ನಡೆಸುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ~ ಎಂದು ಅಭಿಪ್ರಾಯಪಟ್ಟರು.<br /> <br /> ಇದೇ ಸಂದರ್ಭದಲ್ಲಿ ಭಗವದ್ಗೀತಾ ಅಭಿಯಾನದ ಬಗ್ಗೆ ಸಂಪೂರ್ಣ ಮಾಹಿತಿಯುಳ್ಳ ಅಂತರ್ಜಾಲ ಹಾಗೂ ಸ್ವಯಂಪ್ರಕಾಶ ಸಚ್ಚಿದಾನಂದ ಸ್ವಾಮೀಜಿಯವರ `ಗೀತಾಂತರಂಗ~ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.<br /> <br /> ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ, ಸ್ವಯಂಪ್ರಕಾಶ ಸಚ್ಚಿದಾನಂದ ಸ್ವಾಮೀಜಿ, ಚಿನ್ಮಯ ಮಿಷನ್ನ ಬ್ರಹ್ಮಾನಂದಜಿ, ಭಗವದ್ಗೀತಾ ಅಭಿಯಾನ ರಾಜ್ಯ ಸಮಿತಿಯ ಗೌರವಾಧ್ಯಕ್ಷ ನ್ಯಾ.ಡಾ.ಎಂ.ರಾಮಾಜೋಯಿಸ್, ಶಾಸಕರಾದ ಎಂ.ಕೃಷ್ಣಪ್ಪ, ಎಲ್.ಎ.ರವಿ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>