<p><strong>ಬೆಂಗಳೂರು:</strong> ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಚರಿತ್ರೆಯ ಪುಸ್ತಕಗಳನ್ನು ಖರೀದಿ ಮಾಡಿ ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಂಚಲು ಒಂದು ಕೋಟಿ ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಇಲ್ಲಿ ತಿಳಿಸಿದರು.<br /> <br /> ಸುಭಾಷ್ ಚಂದ್ರ ಬೋಸ್ ಅವರ 114ನೇ ಜನ್ಮದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಅವರ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ‘ಇಂದಿನ ಯುವ ಪೀಳಿಗೆ ಅದರಲ್ಲೂ ಶಾಲಾ ಮಕ್ಕಳು ಬೋಸ್ ಅವರ ದೇಶಭಕ್ತಿ, ನಾಯಕತ್ವದ ಗುಣಗಳನ್ನು ಓದಿ ತಿಳಿದುಕೊಳ್ಳುವುದಲ್ಲದೆ ಆ ಮಾರ್ಗದಲ್ಲಿ ಸಾಗಬೇಕು ಎಂದರು.<br /> <br /> ದೇಶಕ್ಕಾಗಿ ಹೋರಾಟ ನಡೆಸಿದ ಅಪ್ರತಿಮ ನಾಯಕನ ಜೀವನ ಚರಿತ್ರೆ ಪುಸ್ತಕ ಎಲ್ಲ ಮಾಧ್ಯಮಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಲಭ್ಯವಾಗಬೇಕು. ಈ ಉದ್ದೇಶದಿಂದ ಸರ್ಕಾರ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪುಸ್ತಕಗಳನ್ನು ಖರೀದಿಸಿ ಶಾಲೆಗಳಿಗೆ ಹಂಚಲಿದೆ ಎಂದು ತಿಳಿಸಿದರು.<br /> <br /> ‘ಅವರಲ್ಲಿದ್ದ ರಾಷ್ಟ್ರಪ್ರೇಮ, ದೇಶಭಕ್ತಿ ಮತ್ತು ನಾಯಕತ್ವದ ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಇಂದಿನ ಕಲುಷಿತ ರಾಜಕಾರಣದಲ್ಲಿ ಅಂತಹ ನಾಯಕನ ಅಗತ್ಯವಿದೆ’ ಎಂದು ಹೇಳಿದರು. ಸಚಿವರಾದ ಮುರುಗೇಶ್ ನಿರಾಣಿ, ಸಿ.ಎಚ್.ವಿಜಯ ಶಂಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಚರಿತ್ರೆಯ ಪುಸ್ತಕಗಳನ್ನು ಖರೀದಿ ಮಾಡಿ ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಂಚಲು ಒಂದು ಕೋಟಿ ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಇಲ್ಲಿ ತಿಳಿಸಿದರು.<br /> <br /> ಸುಭಾಷ್ ಚಂದ್ರ ಬೋಸ್ ಅವರ 114ನೇ ಜನ್ಮದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಅವರ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ‘ಇಂದಿನ ಯುವ ಪೀಳಿಗೆ ಅದರಲ್ಲೂ ಶಾಲಾ ಮಕ್ಕಳು ಬೋಸ್ ಅವರ ದೇಶಭಕ್ತಿ, ನಾಯಕತ್ವದ ಗುಣಗಳನ್ನು ಓದಿ ತಿಳಿದುಕೊಳ್ಳುವುದಲ್ಲದೆ ಆ ಮಾರ್ಗದಲ್ಲಿ ಸಾಗಬೇಕು ಎಂದರು.<br /> <br /> ದೇಶಕ್ಕಾಗಿ ಹೋರಾಟ ನಡೆಸಿದ ಅಪ್ರತಿಮ ನಾಯಕನ ಜೀವನ ಚರಿತ್ರೆ ಪುಸ್ತಕ ಎಲ್ಲ ಮಾಧ್ಯಮಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಲಭ್ಯವಾಗಬೇಕು. ಈ ಉದ್ದೇಶದಿಂದ ಸರ್ಕಾರ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪುಸ್ತಕಗಳನ್ನು ಖರೀದಿಸಿ ಶಾಲೆಗಳಿಗೆ ಹಂಚಲಿದೆ ಎಂದು ತಿಳಿಸಿದರು.<br /> <br /> ‘ಅವರಲ್ಲಿದ್ದ ರಾಷ್ಟ್ರಪ್ರೇಮ, ದೇಶಭಕ್ತಿ ಮತ್ತು ನಾಯಕತ್ವದ ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಇಂದಿನ ಕಲುಷಿತ ರಾಜಕಾರಣದಲ್ಲಿ ಅಂತಹ ನಾಯಕನ ಅಗತ್ಯವಿದೆ’ ಎಂದು ಹೇಳಿದರು. ಸಚಿವರಾದ ಮುರುಗೇಶ್ ನಿರಾಣಿ, ಸಿ.ಎಚ್.ವಿಜಯ ಶಂಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>