<p>ಎಲ್ಲಾ ಸರ್ಕಾರಗಳೂ ಶಿಕ್ಷಣಕ್ಕೆ ನಮ್ಮ ಮೊದಲ ಆದ್ಯತೆ ಎಂದು ಹೇಳುತ್ತಲೇ ಬಂದಿವೆ. ಆದರೆ ಶಿಕ್ಷಣಕ್ಕೆ ನೀಡುತ್ತಿರುವ ಆದ್ಯತೆ ಎಂಥದೆಂಬುದು ಎಲ್ಲರ ಅನುಭವಕ್ಕೆ ಬಂದಿದೆ. <br /> <br /> ಕೊಠಡಿಗಳ ಅವಶ್ಯಕತೆ ಇಲ್ಲದಿದ್ದರೂ ಕೊಠಡಿಗಳ ನಿರ್ಮಾಣಕ್ಕೆ ಹಣ ನೀಡುವ, ಮಕ್ಕಳ ಅನುಪಾತಕ್ಕನುಗುಣವಾಗಿ ಶಿಕ್ಷಕರು ಎಂಬ ಕಾರಣ ನೀಡಿ ಶಿಕ್ಷಕರನ್ನು ಸ್ಥಳಾಂತರಗೊಳಿಸುವ, ಹಲವು ಯೋಜನೆಗಳನ್ನು ಮತ್ತೆ, ಮತ್ತೆ ಮಂಜೂರು ಮಾಡಿ. <br /> <br /> ಕೋಟ್ಯಂತರ ರೂ ಹಣವನ್ನು ಸರ್ಕಾರ ಖರ್ಚು ಮಾಡುತ್ತದೆ. ಚುನಾವಣೆಗಳು, ಮತದಾರರ ಯಾದಿ ಪರಿಷ್ಕರಣೆ, ಜನಗಣತಿ, ಗ್ರಾಮ ನಕ್ಷೆ ತಯಾರಿಕೆ, ಬಿಸಿಯೂಟದ ಉಸ್ತುವಾರಿ ಮತ್ತಿತರ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುತ್ತಿದೆ. <br /> ಇದರಿಂದಾಗಿ ಮಕ್ಕಳಿಗೆ ಪಾಠ,ಪ್ರವಚನ ಹಾಗೂ ಓದುವ ಹವ್ಯಾಸ ಬೆಳೆಸುವಂತಹ ಕಾರ್ಯಗಳಿಗೆ ಹಿನ್ನಡೆಯಾಗಿದೆ. <br /> <br /> ಶಿಕ್ಷಣಕ್ಕೆ ಭಾರೀ ಹಣ ಖರ್ಚು ಮಾಡುತ್ತಿರುವ ಸರ್ಕಾರ ಪ್ರತಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲೊಂದು ಸುಸಜ್ಜಿತ ಗ್ರಂಥಾಲಯ ತೆರೆದು ಪುಸ್ತಕಗಳು ವಿದ್ಯಾರ್ಥಿಗಳ ಕೈಗೆಟುಕುವಂತೆ ಮತ್ತು ಅಲ್ಲೇ ಕುಳಿತು ಓದುವ ವ್ಯವಸ್ಥೆ ಹಾಗೂ ಕಲ್ಪಿಸುವ ಅಗತ್ಯವಿದೆ. <br /> <br /> ಶಾಲೆಯ ಒಂದು ಕೊಠಡಿಯನ್ನು ಅದಕ್ಕೆಂದೇ ಮೀಸಲಿರಿಸಿ ಸುಸಜ್ಜಿತ ಗ್ರಂಥಾಲಯ ತೆರೆದು ಅದಕ್ಕೊಬ್ಬ ಗ್ರಂಥಪಾಲಕನನ್ನು ನೇಮಿಸಿದರೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಯಬಹುದು. ಬಿಡುವಿನ ಸಮಯದಲ್ಲಿ ಮಕ್ಕಳು, ಆಟೋಟಗಳಲ್ಲಿ ಹಾಗೂ ಗ್ರಂಥಾಲಯದಲ್ಲಿ ಕಳೆಯುವಂತಹ ವಾತಾವರಣ ನಿರ್ಮಾಣ ಮಾಡುವ ಅಗತ್ಯವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಲ್ಲಾ ಸರ್ಕಾರಗಳೂ ಶಿಕ್ಷಣಕ್ಕೆ ನಮ್ಮ ಮೊದಲ ಆದ್ಯತೆ ಎಂದು ಹೇಳುತ್ತಲೇ ಬಂದಿವೆ. ಆದರೆ ಶಿಕ್ಷಣಕ್ಕೆ ನೀಡುತ್ತಿರುವ ಆದ್ಯತೆ ಎಂಥದೆಂಬುದು ಎಲ್ಲರ ಅನುಭವಕ್ಕೆ ಬಂದಿದೆ. <br /> <br /> ಕೊಠಡಿಗಳ ಅವಶ್ಯಕತೆ ಇಲ್ಲದಿದ್ದರೂ ಕೊಠಡಿಗಳ ನಿರ್ಮಾಣಕ್ಕೆ ಹಣ ನೀಡುವ, ಮಕ್ಕಳ ಅನುಪಾತಕ್ಕನುಗುಣವಾಗಿ ಶಿಕ್ಷಕರು ಎಂಬ ಕಾರಣ ನೀಡಿ ಶಿಕ್ಷಕರನ್ನು ಸ್ಥಳಾಂತರಗೊಳಿಸುವ, ಹಲವು ಯೋಜನೆಗಳನ್ನು ಮತ್ತೆ, ಮತ್ತೆ ಮಂಜೂರು ಮಾಡಿ. <br /> <br /> ಕೋಟ್ಯಂತರ ರೂ ಹಣವನ್ನು ಸರ್ಕಾರ ಖರ್ಚು ಮಾಡುತ್ತದೆ. ಚುನಾವಣೆಗಳು, ಮತದಾರರ ಯಾದಿ ಪರಿಷ್ಕರಣೆ, ಜನಗಣತಿ, ಗ್ರಾಮ ನಕ್ಷೆ ತಯಾರಿಕೆ, ಬಿಸಿಯೂಟದ ಉಸ್ತುವಾರಿ ಮತ್ತಿತರ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುತ್ತಿದೆ. <br /> ಇದರಿಂದಾಗಿ ಮಕ್ಕಳಿಗೆ ಪಾಠ,ಪ್ರವಚನ ಹಾಗೂ ಓದುವ ಹವ್ಯಾಸ ಬೆಳೆಸುವಂತಹ ಕಾರ್ಯಗಳಿಗೆ ಹಿನ್ನಡೆಯಾಗಿದೆ. <br /> <br /> ಶಿಕ್ಷಣಕ್ಕೆ ಭಾರೀ ಹಣ ಖರ್ಚು ಮಾಡುತ್ತಿರುವ ಸರ್ಕಾರ ಪ್ರತಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲೊಂದು ಸುಸಜ್ಜಿತ ಗ್ರಂಥಾಲಯ ತೆರೆದು ಪುಸ್ತಕಗಳು ವಿದ್ಯಾರ್ಥಿಗಳ ಕೈಗೆಟುಕುವಂತೆ ಮತ್ತು ಅಲ್ಲೇ ಕುಳಿತು ಓದುವ ವ್ಯವಸ್ಥೆ ಹಾಗೂ ಕಲ್ಪಿಸುವ ಅಗತ್ಯವಿದೆ. <br /> <br /> ಶಾಲೆಯ ಒಂದು ಕೊಠಡಿಯನ್ನು ಅದಕ್ಕೆಂದೇ ಮೀಸಲಿರಿಸಿ ಸುಸಜ್ಜಿತ ಗ್ರಂಥಾಲಯ ತೆರೆದು ಅದಕ್ಕೊಬ್ಬ ಗ್ರಂಥಪಾಲಕನನ್ನು ನೇಮಿಸಿದರೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಯಬಹುದು. ಬಿಡುವಿನ ಸಮಯದಲ್ಲಿ ಮಕ್ಕಳು, ಆಟೋಟಗಳಲ್ಲಿ ಹಾಗೂ ಗ್ರಂಥಾಲಯದಲ್ಲಿ ಕಳೆಯುವಂತಹ ವಾತಾವರಣ ನಿರ್ಮಾಣ ಮಾಡುವ ಅಗತ್ಯವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>