<p>ಬೆಂಗಳೂರು: ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ 1,105 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ವ ಶಿಕ್ಷಣ ಅಭಿಯಾನದ ಅಡಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 29.82 ಕೋಟಿ ರೂಪಾಯಿ ಅನುದಾನ ದೊರೆತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎನ್. ಬಚ್ಚೇಗೌಡ ತಿಳಿಸಿದರು.<br /> <br /> ಇಲ್ಲಿನ ಶಿಕ್ಷಕರ ಸದನದಲ್ಲಿ ಶನಿವಾರ ನಡೆದ ಸರ್ವ ಶಿಕ್ಷಣ ಅಭಿಯಾನದ ಜಿಲ್ಲಾ ಅನುಷ್ಠಾನ ಸಮಿತಿಯ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಈ ಅಭಿಯಾನದ ಅಡಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ನಿಗದಿ ಮಾಡಿದ ಅನುದಾನದ 16 ಕೋಟಿ ರೂಪಾಯಿ ಮೊತ್ತದಲ್ಲಿ 13.68 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಆಗಿದೆ~ ಎಂದು ತಿಳಿಸಿದರು.<br /> <br /> ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 115 ಕೊಠಡಿಗಳನ್ನು ಅಗತ್ಯವಿರುವ ಶಾಲೆಗಳಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ ಶಾಲೆಗಳಿಗೆ ತಲಾ 5.45 ಲಕ್ಷ ರೂಪಾಯಿ ನೀಡಲಾಗುವುದು. ಶಾಲೆಗಳ ಆವರಣ ಗೋಡೆ ನಿರ್ಮಾಣಕ್ಕೆ ಈ ಬಾರಿ ಒಟ್ಟು 7.5 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು ಎಂದರು.<br /> <br /> ನಾಲ್ಕು ತಾಲ್ಲೂಕುಗಳಲ್ಲಿ 340 ಮಕ್ಕಳು ಶಾಲೆಗೆ ಹೋಗುತ್ತಿರಲಿಲ್ಲ. ಅವರ ಪೈಕಿ 140 ಮಕ್ಕಳನ್ನು ಶಾಲೆಗೆ ಹೋಗುವಂತೆ ಮಾಡಲಾಗಿದೆ. ಈ ಬಾರಿ 19 ಶಾಲೆಗಳಲ್ಲಿ ಹೊಸದಾಗಿ ಕಂಪ್ಯೂಟರ್ ಕಲಿಕೆ ಆರಂಭಿಸಲಾಗುವುದು. 34 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಸಿಬಿಎಸ್ಸಿ ಪಠ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ 1,105 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ವ ಶಿಕ್ಷಣ ಅಭಿಯಾನದ ಅಡಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 29.82 ಕೋಟಿ ರೂಪಾಯಿ ಅನುದಾನ ದೊರೆತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎನ್. ಬಚ್ಚೇಗೌಡ ತಿಳಿಸಿದರು.<br /> <br /> ಇಲ್ಲಿನ ಶಿಕ್ಷಕರ ಸದನದಲ್ಲಿ ಶನಿವಾರ ನಡೆದ ಸರ್ವ ಶಿಕ್ಷಣ ಅಭಿಯಾನದ ಜಿಲ್ಲಾ ಅನುಷ್ಠಾನ ಸಮಿತಿಯ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಈ ಅಭಿಯಾನದ ಅಡಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ನಿಗದಿ ಮಾಡಿದ ಅನುದಾನದ 16 ಕೋಟಿ ರೂಪಾಯಿ ಮೊತ್ತದಲ್ಲಿ 13.68 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಆಗಿದೆ~ ಎಂದು ತಿಳಿಸಿದರು.<br /> <br /> ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 115 ಕೊಠಡಿಗಳನ್ನು ಅಗತ್ಯವಿರುವ ಶಾಲೆಗಳಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ ಶಾಲೆಗಳಿಗೆ ತಲಾ 5.45 ಲಕ್ಷ ರೂಪಾಯಿ ನೀಡಲಾಗುವುದು. ಶಾಲೆಗಳ ಆವರಣ ಗೋಡೆ ನಿರ್ಮಾಣಕ್ಕೆ ಈ ಬಾರಿ ಒಟ್ಟು 7.5 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು ಎಂದರು.<br /> <br /> ನಾಲ್ಕು ತಾಲ್ಲೂಕುಗಳಲ್ಲಿ 340 ಮಕ್ಕಳು ಶಾಲೆಗೆ ಹೋಗುತ್ತಿರಲಿಲ್ಲ. ಅವರ ಪೈಕಿ 140 ಮಕ್ಕಳನ್ನು ಶಾಲೆಗೆ ಹೋಗುವಂತೆ ಮಾಡಲಾಗಿದೆ. ಈ ಬಾರಿ 19 ಶಾಲೆಗಳಲ್ಲಿ ಹೊಸದಾಗಿ ಕಂಪ್ಯೂಟರ್ ಕಲಿಕೆ ಆರಂಭಿಸಲಾಗುವುದು. 34 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಸಿಬಿಎಸ್ಸಿ ಪಠ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>