<p><strong>ಚಳ್ಳಕೆರೆ:</strong> ಶಾಲೆ ಬಿಟ್ಟ ಮಕ್ಕಳ ಶಿಕ್ಷಣಕ್ಕೆ ಸಮಾಜದ ಎಲ್ಲಾ ವರ್ಗಗಳ ಮುಖಂಡರು ಸಹಕಾರ ನೀಡುವ ಮೂಲಕ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಬೇಕು ಎಂದು ಶಾಸಕ ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ಲಯನ್ಸ್ ಹಾಗೂ ಲಯನೆಸ್ ಕ್ಲಬ್ ವತಿಯಿಂದ ಕಸ್ತೂರ ಬಾ ವಸತಿ ಶಾಲೆಯ ಮಕ್ಕಳಿಗೆ ಉಚಿತ ಬಟ್ಟೆ ಹಾಗೂ ನೋಟ್ಬುಕ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಶ್ರೀಮಂತರ ಮಕ್ಕಳು ಶಿಕ್ಷಣ ಪಡೆಯುವುದು ಸುಲಭ. ಆದರೆ, ಬಡ ಮಕ್ಕಳು ಪ್ರತಿಭಾವಂತರಾದರೂ ನಾನಾ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ತಡೆಯಲು ಸರ್ಕಾರ ವಸತಿ ಶಾಲೆಗಳನ್ನು ನಿರ್ಮಿಸಿ ಬಡವರ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ ಎಂದು ನುಡಿದರು.<br /> <br /> ರಾಜ್ಯದ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಕಸ್ತೂರ ಬಾ ವಸತಿಶಾಲೆಗಳಿಗೆ ಸರ್ಕಾರ ತಿಂಗಳಿಗೆ ಕೋಟಿಗಟ್ಟಲೆ ಹಣವನ್ನು ವಿನಿಯೋಗಿಸುತ್ತಿದೆ. ಇದರ ಜತೆಗೆ ಸಮಾಜದ ಗಣ್ಯರು ಸಹಾಯಹಸ್ತ ಚಾಚುವ ಮೂಲಕ ಮಹತ್ವದ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾದುದು ಎಂದರು.<br /> <br /> ಇಂತಹ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ತಮ್ಮ ಗುರಿಯನ್ನ ಸಾಧಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ಸಿಪಿಐ ಮಂಜುನಾಥ ತಳವಾರ ಮಾತನಾಡಿ, ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡುವ ಮೂಲಕ ಸಮಾಜದಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಕಾರಣಕರ್ತರಾಗಬೇಕು ಎಂದು ಹೇಳಿದರು.<br /> <br /> ಬಡಮಕ್ಕಳಲ್ಲಿ ಅತ್ಯುತ್ತಮ ಕೌಶಲಗಳು ಇರುತ್ತವೆ. ಇಂತಹ ಮಕ್ಕಳನ್ನು ತರಗತಿ ಕೋಣೆಗಳಲ್ಲಿ ಪಾಠ ಹೇಳುವ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ಆಸಕ್ತಿ ಮೂಡಿಸುವಂತೆ ಪ್ರೇರೇಪಿಸಬೇಕು ಎಂದು ಅವರು ಸಲಹೆ ನೀಡಿದರು.<br /> ಕಾರ್ಯಕ್ರಮದಲ್ಲಿ ಲಯನೆಸ್ ಕ್ಲಬ್ನ ಪ್ರಾದೇಶಿಕ ಅಧ್ಯಕ್ಷೆ ಸುಲೋಚನಾ ಲಕ್ಷ್ಮಣ್ ಮಾತನಾಡಿದರು. <br /> <br /> ಉದ್ಯಮಿ ಬಿ.ಕೆ. ರಾಜಶೇಖರಪ್ಪ ಮಕ್ಕಳಿಗೆ ಉಚಿತ ಬಟ್ಟೆ ಹಾಗೂ ನೋಟ್ಪುಸ್ತಕ ವಿತರಿಸಿದರು. <br /> ತಾಲ್ಲೂಕು ಲಯನೆಸ್ ಕ್ಲಬ್ನ ಅಧ್ಯಕ್ಷೆ ಅನ್ನಪೂರ್ಣಾ ಪ್ರಕಾಶ್, ವಕೀಲ ಜಿ.ಆರ್. ಅಶ್ವತ್ಠ್ ನಾಯಕ, ಪ್ರಸಾದ್, ಎಪಿಎಂಸಿ ಸದಸ್ಯ ರಘುನಾಥ ಬಾಬು, ಉದ್ಯಮಿ ಎನ್.ಟಿ. ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಶಾಲೆ ಬಿಟ್ಟ ಮಕ್ಕಳ ಶಿಕ್ಷಣಕ್ಕೆ ಸಮಾಜದ ಎಲ್ಲಾ ವರ್ಗಗಳ ಮುಖಂಡರು ಸಹಕಾರ ನೀಡುವ ಮೂಲಕ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಬೇಕು ಎಂದು ಶಾಸಕ ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ಲಯನ್ಸ್ ಹಾಗೂ ಲಯನೆಸ್ ಕ್ಲಬ್ ವತಿಯಿಂದ ಕಸ್ತೂರ ಬಾ ವಸತಿ ಶಾಲೆಯ ಮಕ್ಕಳಿಗೆ ಉಚಿತ ಬಟ್ಟೆ ಹಾಗೂ ನೋಟ್ಬುಕ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಶ್ರೀಮಂತರ ಮಕ್ಕಳು ಶಿಕ್ಷಣ ಪಡೆಯುವುದು ಸುಲಭ. ಆದರೆ, ಬಡ ಮಕ್ಕಳು ಪ್ರತಿಭಾವಂತರಾದರೂ ನಾನಾ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ತಡೆಯಲು ಸರ್ಕಾರ ವಸತಿ ಶಾಲೆಗಳನ್ನು ನಿರ್ಮಿಸಿ ಬಡವರ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ ಎಂದು ನುಡಿದರು.<br /> <br /> ರಾಜ್ಯದ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಕಸ್ತೂರ ಬಾ ವಸತಿಶಾಲೆಗಳಿಗೆ ಸರ್ಕಾರ ತಿಂಗಳಿಗೆ ಕೋಟಿಗಟ್ಟಲೆ ಹಣವನ್ನು ವಿನಿಯೋಗಿಸುತ್ತಿದೆ. ಇದರ ಜತೆಗೆ ಸಮಾಜದ ಗಣ್ಯರು ಸಹಾಯಹಸ್ತ ಚಾಚುವ ಮೂಲಕ ಮಹತ್ವದ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾದುದು ಎಂದರು.<br /> <br /> ಇಂತಹ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ತಮ್ಮ ಗುರಿಯನ್ನ ಸಾಧಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ಸಿಪಿಐ ಮಂಜುನಾಥ ತಳವಾರ ಮಾತನಾಡಿ, ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡುವ ಮೂಲಕ ಸಮಾಜದಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಕಾರಣಕರ್ತರಾಗಬೇಕು ಎಂದು ಹೇಳಿದರು.<br /> <br /> ಬಡಮಕ್ಕಳಲ್ಲಿ ಅತ್ಯುತ್ತಮ ಕೌಶಲಗಳು ಇರುತ್ತವೆ. ಇಂತಹ ಮಕ್ಕಳನ್ನು ತರಗತಿ ಕೋಣೆಗಳಲ್ಲಿ ಪಾಠ ಹೇಳುವ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ಆಸಕ್ತಿ ಮೂಡಿಸುವಂತೆ ಪ್ರೇರೇಪಿಸಬೇಕು ಎಂದು ಅವರು ಸಲಹೆ ನೀಡಿದರು.<br /> ಕಾರ್ಯಕ್ರಮದಲ್ಲಿ ಲಯನೆಸ್ ಕ್ಲಬ್ನ ಪ್ರಾದೇಶಿಕ ಅಧ್ಯಕ್ಷೆ ಸುಲೋಚನಾ ಲಕ್ಷ್ಮಣ್ ಮಾತನಾಡಿದರು. <br /> <br /> ಉದ್ಯಮಿ ಬಿ.ಕೆ. ರಾಜಶೇಖರಪ್ಪ ಮಕ್ಕಳಿಗೆ ಉಚಿತ ಬಟ್ಟೆ ಹಾಗೂ ನೋಟ್ಪುಸ್ತಕ ವಿತರಿಸಿದರು. <br /> ತಾಲ್ಲೂಕು ಲಯನೆಸ್ ಕ್ಲಬ್ನ ಅಧ್ಯಕ್ಷೆ ಅನ್ನಪೂರ್ಣಾ ಪ್ರಕಾಶ್, ವಕೀಲ ಜಿ.ಆರ್. ಅಶ್ವತ್ಠ್ ನಾಯಕ, ಪ್ರಸಾದ್, ಎಪಿಎಂಸಿ ಸದಸ್ಯ ರಘುನಾಥ ಬಾಬು, ಉದ್ಯಮಿ ಎನ್.ಟಿ. ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>