<p><strong>ಕೋಲಾರ: </strong>ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರುವ ಮನಸ್ಸು ಸರ್ಕಾರಕ್ಕೆ ಇದ್ದರೆ ಪರಮಶಿವಯ್ಯ ವರದಿಯನ್ನೇ ಜಾರಿಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಡಾ.ಮಧು ಸೀತಪ್ಪ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಪಾದಿಸಿದರು.<br /> <br /> ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಪರಮಶಿವಯ್ಯ ವರದಿ ವೈಜ್ಞಾನಿಕವಾಗಿದೆ. ನೇತ್ರಾವತಿ ನದಿಯ ಆಸುಪಾಸಿನ ಹಳ್ಳಕೊಳ್ಳಗಳಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಬಯಲು ಸೀಮೆಗೆ ತರುವ ಯೋಜನೆ ಶಾಶ್ವತವಾಗಿರುತ್ತದೆ. ಈ ಯೋಜನೆ ಬಿಟ್ಟರೆ ಮತ್ಯಾವುದೇ ಯೋಜನೆ ಬಯಲು ಸೀಮೆಯ ಜನರ ನೀರಿನ ಹಾಹಾಕಾರವನ್ನು ಇಂಗಿಸುವುದಿಲ್ಲ ಎಂದರು<br /> <br /> ಎತ್ತಿನಹೊಳೆ ಯೋಜನೆಯಿಂದ 23 ಟಿಎಂಸಿ ನೀರು ತರಬಹುದು ಎಂಬ ವಾದ ಕೇಳಿ ಬರುತ್ತಿದೆ. ಅದರಲ್ಲಿ 6 ಟಿಎಂಸಿ ನೀರು ಸಿಗುವುದೂ ಅನುಮಾನ. ಅಲ್ಲದೆ ಅದು ಶಾಶ್ವತವಾಗಿ ನೀರಿನ ಸಮಸ್ಯೆಯನ್ನು ಬಗೆಹರಿಸುತ್ತದೆ ಎಂಬ ವಿಶ್ವಾಸವೂ ಇಲ್ಲ ಎಂದರು.<br /> <br /> ಶಾಶ್ವತ ಕುಡಿಯುವ ನೀರಿಗಾಗಿ ಈಗಾಗಲೇ ಹೋರಾಟಗಳು ಪ್ರಾರಂಭವಾಗಿವೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಬೇಕು. ಜಿಲ್ಲೆಯಲ್ಲಿ ಸಂಘಟಿತ ಹೋರಾಟ ನಡೆಯುತ್ತಿದ್ದರೂ ಕೆಜಿಎಫ್ ಮತ್ತು ಬಂಗಾರಪೇಟೆ ಜನತೆ ಈ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ. ಅವೆರಡೂ ಸ್ಥಳಗಳು ನಮ್ಮ ಜಿಲ್ಲೆಯಲ್ಲಿ ಇದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಮಧು ಸೀತಪ್ಪ ವಿಷಾದ ವ್ಯಕ್ತಪಡಿಸಿದರು.<br /> <br /> ಮುಖಂಡರಾದ ತ್ಯಾಗರಾಜ್, ಮಳ್ಳೂರು ಶಿವಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರುವ ಮನಸ್ಸು ಸರ್ಕಾರಕ್ಕೆ ಇದ್ದರೆ ಪರಮಶಿವಯ್ಯ ವರದಿಯನ್ನೇ ಜಾರಿಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಡಾ.ಮಧು ಸೀತಪ್ಪ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಪಾದಿಸಿದರು.<br /> <br /> ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಪರಮಶಿವಯ್ಯ ವರದಿ ವೈಜ್ಞಾನಿಕವಾಗಿದೆ. ನೇತ್ರಾವತಿ ನದಿಯ ಆಸುಪಾಸಿನ ಹಳ್ಳಕೊಳ್ಳಗಳಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಬಯಲು ಸೀಮೆಗೆ ತರುವ ಯೋಜನೆ ಶಾಶ್ವತವಾಗಿರುತ್ತದೆ. ಈ ಯೋಜನೆ ಬಿಟ್ಟರೆ ಮತ್ಯಾವುದೇ ಯೋಜನೆ ಬಯಲು ಸೀಮೆಯ ಜನರ ನೀರಿನ ಹಾಹಾಕಾರವನ್ನು ಇಂಗಿಸುವುದಿಲ್ಲ ಎಂದರು<br /> <br /> ಎತ್ತಿನಹೊಳೆ ಯೋಜನೆಯಿಂದ 23 ಟಿಎಂಸಿ ನೀರು ತರಬಹುದು ಎಂಬ ವಾದ ಕೇಳಿ ಬರುತ್ತಿದೆ. ಅದರಲ್ಲಿ 6 ಟಿಎಂಸಿ ನೀರು ಸಿಗುವುದೂ ಅನುಮಾನ. ಅಲ್ಲದೆ ಅದು ಶಾಶ್ವತವಾಗಿ ನೀರಿನ ಸಮಸ್ಯೆಯನ್ನು ಬಗೆಹರಿಸುತ್ತದೆ ಎಂಬ ವಿಶ್ವಾಸವೂ ಇಲ್ಲ ಎಂದರು.<br /> <br /> ಶಾಶ್ವತ ಕುಡಿಯುವ ನೀರಿಗಾಗಿ ಈಗಾಗಲೇ ಹೋರಾಟಗಳು ಪ್ರಾರಂಭವಾಗಿವೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಬೇಕು. ಜಿಲ್ಲೆಯಲ್ಲಿ ಸಂಘಟಿತ ಹೋರಾಟ ನಡೆಯುತ್ತಿದ್ದರೂ ಕೆಜಿಎಫ್ ಮತ್ತು ಬಂಗಾರಪೇಟೆ ಜನತೆ ಈ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ. ಅವೆರಡೂ ಸ್ಥಳಗಳು ನಮ್ಮ ಜಿಲ್ಲೆಯಲ್ಲಿ ಇದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಮಧು ಸೀತಪ್ಪ ವಿಷಾದ ವ್ಯಕ್ತಪಡಿಸಿದರು.<br /> <br /> ಮುಖಂಡರಾದ ತ್ಯಾಗರಾಜ್, ಮಳ್ಳೂರು ಶಿವಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>