<p>ಬೆಂಗಳೂರು: ಶಾಶ್ವತ ನೀರಾವರಿ ಯೋಜನೆಯನ್ನು ಅನುಷ್ಠಾನಕ್ಕೆ ತರುವಂತೆ ಸರ್ಕಾರವನ್ನು ಒತ್ತಾಯಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ನಗರ ಸ್ವಾತಂತ್ರ್ಯ ಉದ್ಯಾನದ ಬಳಿ ಮಂಗಳವಾರ ಧರಣಿ ನಡೆಸಿದರು.<br /> <br /> ಸಮಿತಿಯ ಸಂಚಾಲಕರಾದ ಆರ್. ಆಂಜನೇಯ ರೆಡ್ಡಿ ಮಾತನಾಡಿ `ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ಶಾಶ್ವತವಾಗಿ ಶುದ್ಧ ಕುಡಿಯುವ ನೀರು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ, ನೀರಾವರಿ ತಜ್ಞ ಜಿ.ಎಸ್. ಪರಮಶಿವಯ್ಯ ಅವರು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಅದು ಇನ್ನೂ ಜಾರಿಗೆ ಬಂದಿಲ್ಲ. ಈ ಯೋಜನೆಗಳನ್ನು ದಿಕ್ಕು ತಪ್ಪಿಸಲು ಸರ್ಕಾರ ಷಡ್ಯಂತ್ರ ನಡೆಸುತ್ತಿದೆ~ ಎಂದು ಆರೋಪಿಸಿದರು.<br /> <br /> ನಮ್ಮ ಭಾಗದ ಜನರಿಗೆ ಕೃಷಿ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲ. ಕೆರೆಗಳೆಲ್ಲಾ ಬತ್ತಿ ಹೋಗಿದ್ದು, ನಾಲ್ಕು ಲಕ್ಷ ಜಾನುವಾರುಗಳು ಕುಡಿಯಲು ನೀರಿಲ್ಲದೆ ನರಳುತ್ತಿವೆ. ಶುದ್ಧ ಕುಡಿಯುವ ನೀರಿಲ್ಲದೆ ಜನ ಕಾಯಿಲೆಗಳಿಗೆ ತುತ್ತಾಗಿದ್ದು, ಮಕ್ಕಳು ಅಂಗವಿಕಲರಾಗಿ ಹುಟ್ಟುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೂ ಪರಮಶಿವಯ್ಯ ಅವರ ವರದಿಯೊಂದೇ ಪರಿಹಾರ ಎಂದು ಅವರು ಹೇಳಿದರು.<br /> <br /> ಸರ್ಕಾರ ನಮ್ಮ ಭಾಗಕ್ಕೆ ಯಾವುದೇ ನೀರಾವರಿ ಯೋಜನೆಗಳನ್ನು ಈವರೆಗೂ ಜಾರಿಗೊಳಿಸಿಲ್ಲ. ನಮ್ಮ ಭಾಗದಲ್ಲಿ ಮೂರು ಲಕ್ಷ ಬೋರ್ವೆಲ್ಗಳು ಕೆಲಸ ಮಾಡುತ್ತಿದ್ದು ಇದರಿಂದ ಅಂತರ್ಜಲ ಮಟ್ಟ ಕುಸಿದಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದಿನ 15-20 ವರ್ಷಗಳಲ್ಲಿ ಭೂಮಿ ಸಂಪೂರ್ಣ ಬತ್ತಿ ಹೋಗಲಿದೆ.<br /> ನಮ್ಮ ಸಮಸ್ಯೆಗಳನ್ನು ಮನಗಂಡು ಶೀಘ್ರವೇ ಈ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಶಾಶ್ವತ ನೀರಾವರಿ ಯೋಜನೆಯನ್ನು ಅನುಷ್ಠಾನಕ್ಕೆ ತರುವಂತೆ ಸರ್ಕಾರವನ್ನು ಒತ್ತಾಯಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ನಗರ ಸ್ವಾತಂತ್ರ್ಯ ಉದ್ಯಾನದ ಬಳಿ ಮಂಗಳವಾರ ಧರಣಿ ನಡೆಸಿದರು.<br /> <br /> ಸಮಿತಿಯ ಸಂಚಾಲಕರಾದ ಆರ್. ಆಂಜನೇಯ ರೆಡ್ಡಿ ಮಾತನಾಡಿ `ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ಶಾಶ್ವತವಾಗಿ ಶುದ್ಧ ಕುಡಿಯುವ ನೀರು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ, ನೀರಾವರಿ ತಜ್ಞ ಜಿ.ಎಸ್. ಪರಮಶಿವಯ್ಯ ಅವರು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಅದು ಇನ್ನೂ ಜಾರಿಗೆ ಬಂದಿಲ್ಲ. ಈ ಯೋಜನೆಗಳನ್ನು ದಿಕ್ಕು ತಪ್ಪಿಸಲು ಸರ್ಕಾರ ಷಡ್ಯಂತ್ರ ನಡೆಸುತ್ತಿದೆ~ ಎಂದು ಆರೋಪಿಸಿದರು.<br /> <br /> ನಮ್ಮ ಭಾಗದ ಜನರಿಗೆ ಕೃಷಿ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲ. ಕೆರೆಗಳೆಲ್ಲಾ ಬತ್ತಿ ಹೋಗಿದ್ದು, ನಾಲ್ಕು ಲಕ್ಷ ಜಾನುವಾರುಗಳು ಕುಡಿಯಲು ನೀರಿಲ್ಲದೆ ನರಳುತ್ತಿವೆ. ಶುದ್ಧ ಕುಡಿಯುವ ನೀರಿಲ್ಲದೆ ಜನ ಕಾಯಿಲೆಗಳಿಗೆ ತುತ್ತಾಗಿದ್ದು, ಮಕ್ಕಳು ಅಂಗವಿಕಲರಾಗಿ ಹುಟ್ಟುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೂ ಪರಮಶಿವಯ್ಯ ಅವರ ವರದಿಯೊಂದೇ ಪರಿಹಾರ ಎಂದು ಅವರು ಹೇಳಿದರು.<br /> <br /> ಸರ್ಕಾರ ನಮ್ಮ ಭಾಗಕ್ಕೆ ಯಾವುದೇ ನೀರಾವರಿ ಯೋಜನೆಗಳನ್ನು ಈವರೆಗೂ ಜಾರಿಗೊಳಿಸಿಲ್ಲ. ನಮ್ಮ ಭಾಗದಲ್ಲಿ ಮೂರು ಲಕ್ಷ ಬೋರ್ವೆಲ್ಗಳು ಕೆಲಸ ಮಾಡುತ್ತಿದ್ದು ಇದರಿಂದ ಅಂತರ್ಜಲ ಮಟ್ಟ ಕುಸಿದಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದಿನ 15-20 ವರ್ಷಗಳಲ್ಲಿ ಭೂಮಿ ಸಂಪೂರ್ಣ ಬತ್ತಿ ಹೋಗಲಿದೆ.<br /> ನಮ್ಮ ಸಮಸ್ಯೆಗಳನ್ನು ಮನಗಂಡು ಶೀಘ್ರವೇ ಈ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>