<p><strong>ಹೊಸಕೋಟೆ</strong>: ಸ್ಥಳೀಯ ಶಾಸಕ ಎನ್. ನಾಗರಾಜು ಅವರ ಮೊಬೈಲ್ ಗೆ ಕರೆ ಮಾಡಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.<br /> <br /> ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂ ಕಿನ ಮಹೇಶ್ (19) ಬಂಧಿತ ಆರೋಪಿ. ಆರೋಪಿಗೆ ಮಾತನಾಡಲು ಮೊಬೈಲ್ ಕೊಟ್ಟು ಸಹಕರಿಸಿದ ಆತನ ಸ್ನೇಹಿತ ಹೊಸಪೇಟೆ ತಾಲ್ಲೂಕು ಮರಿಯಮ್ಮನ ಹಳ್ಳಿಯ ಸತೀಶ್ (21) ಎಂಬಾತನನ್ನೂ ಬಂಧಿಸಲಾಗಿದೆ.<br /> <br /> ಆರೋಪಿ ಮಾ.20 ರಂದು ಶಾಸಕರಿಗೆ ಕರೆ ಮಾಡಿ ₨ 3 ಕೋಟಿಗೆ ಬೇಡಿಕೆ ಇಟ್ಟಿದ್ದ. ಆರೋಪಿ ಕಂಪ್ಯೂಟರ್ ಸೈನ್ಸ್ ನಲ್ಲಿ ಡಿಪ್ಲೊಮಾ ಕೋರ್ಸ್ ಮುಗಿಸಿದ್ದು ನಿರುದ್ಯೋಗಿ ಆಗಿದ್ದ. ಸುಲ ಭವಾಗಿ ಹಣ ಮಾಡುವ ಉದ್ದೇಶದಿಂದ ಶಾಸಕರ ಮಾಹಿತಿಯನ್ನು ಪಡೆದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ನಾಗರಾಜು ಅವರು ಕೊಟ್ಟ ದೂರಿನ ಮೇರೆ ಆರೋಪಿ ಮೊಬೈಲ್ ನ ಜಾಡು ಹಿಡಿದ ಪೊಲೀಸರು ಆತನನ್ನು ಹೊಸಪೇಟೆ ಯಲ್ಲಿ ಬಂಧಿಸಿದರು.<br /> <br /> ಈ ಹಿಂದೆ ಮಾಜಿ ಸಚಿವ ಸಿದ್ದು ನ್ಯಾಮೇಗೌಡ ಹಾಗೂ ಮಾಜಿ ಸಚಿವ ಆನಂದ್ ಸಿಂಗ್ ಅವರಿಗೂ ಬೆದರಿಕೆ ಹಾಕಿ ಸೆರೆಮನೆ ವಾಸ ಅನುಭವಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಸ್ಥಳೀಯ ಶಾಸಕ ಎನ್. ನಾಗರಾಜು ಅವರ ಮೊಬೈಲ್ ಗೆ ಕರೆ ಮಾಡಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.<br /> <br /> ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂ ಕಿನ ಮಹೇಶ್ (19) ಬಂಧಿತ ಆರೋಪಿ. ಆರೋಪಿಗೆ ಮಾತನಾಡಲು ಮೊಬೈಲ್ ಕೊಟ್ಟು ಸಹಕರಿಸಿದ ಆತನ ಸ್ನೇಹಿತ ಹೊಸಪೇಟೆ ತಾಲ್ಲೂಕು ಮರಿಯಮ್ಮನ ಹಳ್ಳಿಯ ಸತೀಶ್ (21) ಎಂಬಾತನನ್ನೂ ಬಂಧಿಸಲಾಗಿದೆ.<br /> <br /> ಆರೋಪಿ ಮಾ.20 ರಂದು ಶಾಸಕರಿಗೆ ಕರೆ ಮಾಡಿ ₨ 3 ಕೋಟಿಗೆ ಬೇಡಿಕೆ ಇಟ್ಟಿದ್ದ. ಆರೋಪಿ ಕಂಪ್ಯೂಟರ್ ಸೈನ್ಸ್ ನಲ್ಲಿ ಡಿಪ್ಲೊಮಾ ಕೋರ್ಸ್ ಮುಗಿಸಿದ್ದು ನಿರುದ್ಯೋಗಿ ಆಗಿದ್ದ. ಸುಲ ಭವಾಗಿ ಹಣ ಮಾಡುವ ಉದ್ದೇಶದಿಂದ ಶಾಸಕರ ಮಾಹಿತಿಯನ್ನು ಪಡೆದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ನಾಗರಾಜು ಅವರು ಕೊಟ್ಟ ದೂರಿನ ಮೇರೆ ಆರೋಪಿ ಮೊಬೈಲ್ ನ ಜಾಡು ಹಿಡಿದ ಪೊಲೀಸರು ಆತನನ್ನು ಹೊಸಪೇಟೆ ಯಲ್ಲಿ ಬಂಧಿಸಿದರು.<br /> <br /> ಈ ಹಿಂದೆ ಮಾಜಿ ಸಚಿವ ಸಿದ್ದು ನ್ಯಾಮೇಗೌಡ ಹಾಗೂ ಮಾಜಿ ಸಚಿವ ಆನಂದ್ ಸಿಂಗ್ ಅವರಿಗೂ ಬೆದರಿಕೆ ಹಾಕಿ ಸೆರೆಮನೆ ವಾಸ ಅನುಭವಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>