<p><strong>ಕೃಷ್ಣರಾಜಪುರ:</strong> `ಆಯಾ ಬಡಾವಣೆಗಳಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆಗೆ ಬಡಾವಣೆಯ ಹಿರಿಯರನ್ನು ಒಳಗೊಂಡ ಸಮಿತಿ ರಚಿಸಲು ಬಿಬಿಎಂಪಿ ಸದಸ್ಯರಿಗೆ ಸೂಚಿಸಲಾಗಿದೆ~ ಎಂದು ಶಾಸಕ ಎನ್.ಎಸ್.ನಂದೀಶ ರೆಡ್ಡಿ ತಿಳಿಸಿದರು.<br /> <br /> ಕಳಪೆ ಹಾಗು ನಿಧಾನಗತಿ ಕಾಮಗಾರಿ ದೂರಿನ ಹಿನ್ನೆಲೆಯಲ್ಲಿ ಸ್ಥಳೀಯ ವಾಸವಿ ಮಹಲ್ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಕೈಗೊಂಡಿರುವ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.<br /> <br /> ಕಾಮಗಾರಿಗಳನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಲು ಎಂಜಿನಿಯರುಗಳಿಗೆ ಸೂಚಿಸಲಾಗಿದೆ. ಕಾಮಗಾರಿಯ ಗುಣಮಟ್ಟ ಕಾಪಾಡಲು ಗುತ್ತಿಗೆದಾರರಿಗೆ ತಿಳಿಸಲಾಗಿದೆ. <br /> <br /> ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ನಾಗರಿಕರ ಸಹಭಾಗಿತ್ವ ಅಗತ್ಯ ಎಂದು ಅವರು ಕೋರಿದರು.<br /> ಬಿಬಿಎಂಪಿ ಸದಸ್ಯ ಎನ್.ವೀರಣ್ಣ, ಮುಖಂಡ ತಿರುಪುರ ಶ್ರೀನಿವಾಸ್, ಮಂಜುನಾಥ ರೆಡ್ಡಿ, ವೆಂಕಟೇಶ ಶೆಟ್ಟಿ, ಆರಾಧ್ಯ, ಜಗದೀಶ್ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ:</strong> `ಆಯಾ ಬಡಾವಣೆಗಳಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆಗೆ ಬಡಾವಣೆಯ ಹಿರಿಯರನ್ನು ಒಳಗೊಂಡ ಸಮಿತಿ ರಚಿಸಲು ಬಿಬಿಎಂಪಿ ಸದಸ್ಯರಿಗೆ ಸೂಚಿಸಲಾಗಿದೆ~ ಎಂದು ಶಾಸಕ ಎನ್.ಎಸ್.ನಂದೀಶ ರೆಡ್ಡಿ ತಿಳಿಸಿದರು.<br /> <br /> ಕಳಪೆ ಹಾಗು ನಿಧಾನಗತಿ ಕಾಮಗಾರಿ ದೂರಿನ ಹಿನ್ನೆಲೆಯಲ್ಲಿ ಸ್ಥಳೀಯ ವಾಸವಿ ಮಹಲ್ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಕೈಗೊಂಡಿರುವ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.<br /> <br /> ಕಾಮಗಾರಿಗಳನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಲು ಎಂಜಿನಿಯರುಗಳಿಗೆ ಸೂಚಿಸಲಾಗಿದೆ. ಕಾಮಗಾರಿಯ ಗುಣಮಟ್ಟ ಕಾಪಾಡಲು ಗುತ್ತಿಗೆದಾರರಿಗೆ ತಿಳಿಸಲಾಗಿದೆ. <br /> <br /> ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ನಾಗರಿಕರ ಸಹಭಾಗಿತ್ವ ಅಗತ್ಯ ಎಂದು ಅವರು ಕೋರಿದರು.<br /> ಬಿಬಿಎಂಪಿ ಸದಸ್ಯ ಎನ್.ವೀರಣ್ಣ, ಮುಖಂಡ ತಿರುಪುರ ಶ್ರೀನಿವಾಸ್, ಮಂಜುನಾಥ ರೆಡ್ಡಿ, ವೆಂಕಟೇಶ ಶೆಟ್ಟಿ, ಆರಾಧ್ಯ, ಜಗದೀಶ್ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>