<p><strong>ಮಾಲೂರು: </strong>ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ಸಭೆಗೆ ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ಗೈರು ಹಾಜರಾಗಿದ್ದರಿಂದ ದಲಿತ ಸಂಘಟನೆಗಳ ಮುಖಂಡರು ಸಭೆ ಬಹಿಷ್ಕರಿಸಿ ಹೊರ ನಡೆದ ಘಟನೆ ನಡೆಯಿತು.<br /> <br /> ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ತಹಶೀಲ್ದಾರ್ ಅಧ್ಯಕ್ಷತೆ ಯಲ್ಲಿ ಕರೆದಿದ್ದ ಸಭೆಯಲ್ಲಿ ದಸಂಸ ಬೆಂಗಳೂರು ವಿಭಾಗೀಯ ಸಂಚಾಲಕ ಮು.ತಿಮ್ಮಯ್ಯ ಮಾತನಾಡಿ, ಪ್ರತಿ 3 ತಿಂಗಳಿಗೊಮ್ಮೆ ದೌರ್ಜನ್ಯ ಪ್ರಕರಣ ಪರಿಶೀಲನೆ ಸಭೆಯನ್ನು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಶಾಸಕರ ಉಪಸ್ಥಿತಿ ಯಲ್ಲಿ ನಡೆಸಬೇಕಾಗಿದೆ. <br /> <br /> ಆದರೆ ಕಳೆದ ಒಂದು ವರ್ಷದಿಂದ ಸಭೆ ಮೊಟಕು ಗೊಳಿಸಿ ದಲಿತ ವಿರೋದಿ ನೀತಿಯನ್ನು ಇಲ್ಲಿನ ಆಡಳಿತ ಅನುಸರಿಸುತ್ತಿದೆ ಎಂದು ಆರೋಪಿಸಿದರು.<br /> <br /> ಸಭೆಯಲ್ಲಿ ಸರಿಯಾದ ಆಸನ ವ್ಯವಸ್ಥೆ ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ದಲಿತರ ಸಮಸ್ಯೆಗಳನ್ನು ಶಾಸಕರಿಗೆ ಮನವರಿಕೆ ಮಾಡಿಕೊಡುವುದಕ್ಕೆ ಹಲವಾರು ದಲಿತ ಮುಖಂಡರು ಸಭೆಗೆ ಆಗಮಿಸಿದ್ದರು. ಕ್ಷೇತ್ರದ ಶಾಸಕರು ಸಭೆಗೆ ಹಾಜರಾಗದೆ ಇರುವುದರಿಂದ ಸಭೆಯನ್ನು ಬಹಿಷ್ಕರಿಸುವ ತೀರ್ಮಾನ ಕೈಗೊಳ್ಳಲಾಯಿತೆಂದು ಹೇಳಿದರು. <br /> <br /> ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಚಿಕ್ಕಾಪುರ ಶ್ರೀನಿವಾಸ್, ದಲಿತ ನಾಗರಿಕ ಸಮಿತಿ ಜಿಲ್ಲಾ ಸಂಚಾಲಕ ಪುರಸನಹಳ್ಳಿ ಶ್ರೀನಿವಾಸ್, ಅಧ್ಯಕ್ಷ ಗೋಪಾಲ್, ದಲಿತ ಮುಖಂಡ ರಾದ ಇಂದುಮಂಗಲ ಶ್ರೀನಿವಾಸ್, ಭುವನಹಳ್ಳಿ ಚನ್ನಪ್ಪ, ಮಾನವ ಭೂ ಹಕ್ಕುಗಳ- ಸಂರಕ್ಷಣಾ ಸಮಿತಿ ಅಧ್ಯಕ್ಷ ಎ.ಕೆ.ವೆಂಕಟೇಶ್, ದಲಿತ ಸಿಂಹಸೇನೆ ಅಧ್ಯಕ್ಷ ತಿಪ್ಪಸಂದ್ರ ಶ್ರೀನಿವಾಸ್, ಸಮತ ಸೈನಿಕದಳ ತಾಲ್ಲೂಕು ಅಧ್ಯಕ್ಷ ಗೋವಿಂದಸ್ವಾಮಿ ಉಪಸ್ಥಿತರಿದ್ದರು.<br /> <br /> <strong>ತಡವಾಗಿ ಆಗಮಿಸಿದ ಶಾಸಕ<br /> </strong><br /> ದಲಿತ ಮುಖಂಡರು ಸಭೆ ಬಹಿಷ್ಕ ರಿಸಿ ಹೊರನಡೆದ ನಂತರ ತಡವಾಗಿ ಬಂದ ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ಪತ್ರಕರ್ತರೊಂದಿಗೆ ಮಾತನಾಡಿ, ಅನ್ಯಕಾರ್ಯ ನಿಮಿತ್ತ ಸಭೆಗೆ ಬರಲು ತಡವಾಗಿದೆ. ದಲಿತ ಮುಖಂಡರು ಸಭೆ ಬಹಿಷ್ಕರಿಸಿದ್ದರಿಂದ ಮಾರ್ಚ್ 6ಕ್ಕೆ ಮುಂದೂಡಲಾಗಿದೆ ಎಂದರು.<br /> <br /> ದಲಿತರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ತಾಲ್ಲೂಕಿನಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಗಳಲ್ಲಿ ಇಳಿಮುಖ ಕಂಡಿದೆ ಎಂದರು.<br /> <br /> ತಹಶೀಲ್ದಾರ್ ಎಚ್.ಅಮರೇಶ್, ತಾ.ಪಂ. ಅಧ್ಯಕ್ಷ ಕೆ.ಗೋಪಾಲಗೌಡ, ಸದಸ್ಯ ಎಸ್.ವಿ.ಲೋಕೇಶ್, ಜಿ.ಪಂ. ಸದಸ್ಯೆ ಯಲ್ಲಮ್ಮ, ಪುರಸಭಾ ಅಧ್ಯಕ್ಷೆ ಗುಲಾಬ್ಜಾನ್, ಉಪಾಧ್ಯಕ್ಷ ಎ. ರಾಜಪ್ಪ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ಸಭೆಗೆ ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ಗೈರು ಹಾಜರಾಗಿದ್ದರಿಂದ ದಲಿತ ಸಂಘಟನೆಗಳ ಮುಖಂಡರು ಸಭೆ ಬಹಿಷ್ಕರಿಸಿ ಹೊರ ನಡೆದ ಘಟನೆ ನಡೆಯಿತು.<br /> <br /> ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ತಹಶೀಲ್ದಾರ್ ಅಧ್ಯಕ್ಷತೆ ಯಲ್ಲಿ ಕರೆದಿದ್ದ ಸಭೆಯಲ್ಲಿ ದಸಂಸ ಬೆಂಗಳೂರು ವಿಭಾಗೀಯ ಸಂಚಾಲಕ ಮು.ತಿಮ್ಮಯ್ಯ ಮಾತನಾಡಿ, ಪ್ರತಿ 3 ತಿಂಗಳಿಗೊಮ್ಮೆ ದೌರ್ಜನ್ಯ ಪ್ರಕರಣ ಪರಿಶೀಲನೆ ಸಭೆಯನ್ನು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಶಾಸಕರ ಉಪಸ್ಥಿತಿ ಯಲ್ಲಿ ನಡೆಸಬೇಕಾಗಿದೆ. <br /> <br /> ಆದರೆ ಕಳೆದ ಒಂದು ವರ್ಷದಿಂದ ಸಭೆ ಮೊಟಕು ಗೊಳಿಸಿ ದಲಿತ ವಿರೋದಿ ನೀತಿಯನ್ನು ಇಲ್ಲಿನ ಆಡಳಿತ ಅನುಸರಿಸುತ್ತಿದೆ ಎಂದು ಆರೋಪಿಸಿದರು.<br /> <br /> ಸಭೆಯಲ್ಲಿ ಸರಿಯಾದ ಆಸನ ವ್ಯವಸ್ಥೆ ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ದಲಿತರ ಸಮಸ್ಯೆಗಳನ್ನು ಶಾಸಕರಿಗೆ ಮನವರಿಕೆ ಮಾಡಿಕೊಡುವುದಕ್ಕೆ ಹಲವಾರು ದಲಿತ ಮುಖಂಡರು ಸಭೆಗೆ ಆಗಮಿಸಿದ್ದರು. ಕ್ಷೇತ್ರದ ಶಾಸಕರು ಸಭೆಗೆ ಹಾಜರಾಗದೆ ಇರುವುದರಿಂದ ಸಭೆಯನ್ನು ಬಹಿಷ್ಕರಿಸುವ ತೀರ್ಮಾನ ಕೈಗೊಳ್ಳಲಾಯಿತೆಂದು ಹೇಳಿದರು. <br /> <br /> ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಚಿಕ್ಕಾಪುರ ಶ್ರೀನಿವಾಸ್, ದಲಿತ ನಾಗರಿಕ ಸಮಿತಿ ಜಿಲ್ಲಾ ಸಂಚಾಲಕ ಪುರಸನಹಳ್ಳಿ ಶ್ರೀನಿವಾಸ್, ಅಧ್ಯಕ್ಷ ಗೋಪಾಲ್, ದಲಿತ ಮುಖಂಡ ರಾದ ಇಂದುಮಂಗಲ ಶ್ರೀನಿವಾಸ್, ಭುವನಹಳ್ಳಿ ಚನ್ನಪ್ಪ, ಮಾನವ ಭೂ ಹಕ್ಕುಗಳ- ಸಂರಕ್ಷಣಾ ಸಮಿತಿ ಅಧ್ಯಕ್ಷ ಎ.ಕೆ.ವೆಂಕಟೇಶ್, ದಲಿತ ಸಿಂಹಸೇನೆ ಅಧ್ಯಕ್ಷ ತಿಪ್ಪಸಂದ್ರ ಶ್ರೀನಿವಾಸ್, ಸಮತ ಸೈನಿಕದಳ ತಾಲ್ಲೂಕು ಅಧ್ಯಕ್ಷ ಗೋವಿಂದಸ್ವಾಮಿ ಉಪಸ್ಥಿತರಿದ್ದರು.<br /> <br /> <strong>ತಡವಾಗಿ ಆಗಮಿಸಿದ ಶಾಸಕ<br /> </strong><br /> ದಲಿತ ಮುಖಂಡರು ಸಭೆ ಬಹಿಷ್ಕ ರಿಸಿ ಹೊರನಡೆದ ನಂತರ ತಡವಾಗಿ ಬಂದ ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ಪತ್ರಕರ್ತರೊಂದಿಗೆ ಮಾತನಾಡಿ, ಅನ್ಯಕಾರ್ಯ ನಿಮಿತ್ತ ಸಭೆಗೆ ಬರಲು ತಡವಾಗಿದೆ. ದಲಿತ ಮುಖಂಡರು ಸಭೆ ಬಹಿಷ್ಕರಿಸಿದ್ದರಿಂದ ಮಾರ್ಚ್ 6ಕ್ಕೆ ಮುಂದೂಡಲಾಗಿದೆ ಎಂದರು.<br /> <br /> ದಲಿತರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ತಾಲ್ಲೂಕಿನಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಗಳಲ್ಲಿ ಇಳಿಮುಖ ಕಂಡಿದೆ ಎಂದರು.<br /> <br /> ತಹಶೀಲ್ದಾರ್ ಎಚ್.ಅಮರೇಶ್, ತಾ.ಪಂ. ಅಧ್ಯಕ್ಷ ಕೆ.ಗೋಪಾಲಗೌಡ, ಸದಸ್ಯ ಎಸ್.ವಿ.ಲೋಕೇಶ್, ಜಿ.ಪಂ. ಸದಸ್ಯೆ ಯಲ್ಲಮ್ಮ, ಪುರಸಭಾ ಅಧ್ಯಕ್ಷೆ ಗುಲಾಬ್ಜಾನ್, ಉಪಾಧ್ಯಕ್ಷ ಎ. ರಾಜಪ್ಪ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>