<p><strong>ಹಾವೇರಿ:</strong> ಶಾಲೆಯ ಸ್ವಚ್ಛತೆಗೆ ಮಕ್ಕಳನ್ನು ಬಳಕೆ ಮಾಡಿಕೊಂಡು ತಪ್ಪು ಮಾಡಿ ಅಮಾನತುಗೊಂಡ ಶಿಕ್ಷಕರೊಬ್ಬರ ರಕ್ಷಣೆಗೆ ಶಾಸಕರೇ ಪೌರೋಹಿತ್ಯ ವಹಿಸಿರುವ ಅಂಶ ತಡವಾಗಿ ಬೆಳಕಿಗೆ ಬಂದಿದೆ.<br /> <br /> ತಾಲ್ಲೂಕಿನ ನಾಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎಚ್.ಎನ್.ಪಾಟೀಲ ಅವರು, ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಶಾಲೆಯನ್ನು ಸ್ವಚ್ಛಗೊಳಿಸಲು ಕೂಲಿಗಳನ್ನು ಬಳಸದೇ ಮಕ್ಕಳನ್ನು ಬಳಕೆ ಮಾಡಿಕೊಂಡು ತಪ್ಪು ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೇ 31 ರಂದು ಆ ಮುಖ್ಯಶಿಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸಿದ್ದರು.<br /> <br /> ಆಮಾನತುಗೊಂಡ ಮುಖ್ಯಶಿಕ್ಷಕ ಪಾಟೀಲ ಅವರನ್ನು ಕೇವಲ ಮೂರು ದಿನಗಳಲ್ಲಿ ಅಮಾನತು ರದ್ದುಗೊಳಿಸಿ ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರನ್ನಾಗಿ ಮರು ನೇಮಕ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮರು ಆದೇಶ ಮಾಡಿದ್ದಾರೆ.<br /> <br /> ಆದರೆ, ಅಮಾನತು ರದ್ದುಗೊಳಿಸಲು ಹಾಗೂ ಮರು ನೇಮಕ ಮಾಡಲು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ ಅವರು ದೂರವಾಣಿ ಮೂಲಕ ತಿಳಿಸಿದ ಹಿನ್ನೆಲೆಯಲ್ಲಿ ಅವರ ಅಮಾನತು ರದ್ದುಗೊಳಿಸಿ, ಶಾಲೆಗೆ ಮರು ನಿಯುಕ್ತಿ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೊರಡಿಸಿದ ಮರು ಆದೇಶದಲ್ಲಿ ತಿಳಿಸಿದ್ದಾರೆ.<br /> <br /> ಇದರಿಂದ ಶಾಸಕರು ತಪ್ಪಿತಸ್ಥ ಶಿಕ್ಷಕನನ್ನು ರಕ್ಷಿಸುವ ಮೂಲಕ ತಪ್ಪು ಮಾಡುವ ಶಿಕ್ಷಕರ ಬೆನ್ನ ಹಿಂದೆ ನಾವಿದ್ದೇವೆ ಎಂಬುದನ್ನು ತೋರಿಸಿಕೊಟ್ಟಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.<br /> <br /> ಶಾಲಾ ಮಕ್ಕಳಿಂದಲೇ ಶಾಲೆಯ ಕಸ ಗೂಡಿಸುವುದು, ಅದನ್ನು ಬೇರೆಡೆಗೆ ಸಾಗಿಸುವುದು ಅಲ್ಲದೇ ರಜೆಯ ಅವಧಿಯಲ್ಲಿ ಒಡೆದು ಶಾಲೆಯ ಮೇಲ್ಛಾವಣಿ ಹೆಂಚುಗಳನ್ನು ಬದಲಾವಣೆ ಮಾಡಿಸಲಾಗಿದೆ ಎಂಬ ವಿಷಯವನ್ನು ಮೇ 31 ರಂದು `ಪ್ರಜಾವಾಣಿ' ಪತ್ರಿಕೆ `ಶಾಲೆಗೆ ಬರುವ ಮುನ್ನವೇ ಸ್ವಚ್ಛತೆ ಶಿಕ್ಷೆ' ಎಂಬ ಶಿರ್ಷಿಕೆಯಡಿ ಚಿತ್ರ ಸಹಿತ ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.<br /> <br /> ಮಕ್ಕಳನ್ನು ಶಾಲಾ ಸ್ವಚ್ಛತಾ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಮುಖ್ಯ ಶಿಕ್ಷಕರು ಕರ್ತವ್ಯಲೋಪ ಎಸಗಿರುವುದು ಹಾಗೂ ಸರ್ಕಾರಿ ನೌಕರಿಗೆ ಭೂಷಣವಲ್ಲದ ರೀತಿತಯಲ್ಲಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಶೆಟ್ಟಿ ಅವರು ಅಮಾನತು ರದ್ದು ಪಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಶಾಲೆಯ ಸ್ವಚ್ಛತೆಗೆ ಮಕ್ಕಳನ್ನು ಬಳಕೆ ಮಾಡಿಕೊಂಡು ತಪ್ಪು ಮಾಡಿ ಅಮಾನತುಗೊಂಡ ಶಿಕ್ಷಕರೊಬ್ಬರ ರಕ್ಷಣೆಗೆ ಶಾಸಕರೇ ಪೌರೋಹಿತ್ಯ ವಹಿಸಿರುವ ಅಂಶ ತಡವಾಗಿ ಬೆಳಕಿಗೆ ಬಂದಿದೆ.<br /> <br /> ತಾಲ್ಲೂಕಿನ ನಾಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎಚ್.ಎನ್.ಪಾಟೀಲ ಅವರು, ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಶಾಲೆಯನ್ನು ಸ್ವಚ್ಛಗೊಳಿಸಲು ಕೂಲಿಗಳನ್ನು ಬಳಸದೇ ಮಕ್ಕಳನ್ನು ಬಳಕೆ ಮಾಡಿಕೊಂಡು ತಪ್ಪು ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೇ 31 ರಂದು ಆ ಮುಖ್ಯಶಿಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸಿದ್ದರು.<br /> <br /> ಆಮಾನತುಗೊಂಡ ಮುಖ್ಯಶಿಕ್ಷಕ ಪಾಟೀಲ ಅವರನ್ನು ಕೇವಲ ಮೂರು ದಿನಗಳಲ್ಲಿ ಅಮಾನತು ರದ್ದುಗೊಳಿಸಿ ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರನ್ನಾಗಿ ಮರು ನೇಮಕ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮರು ಆದೇಶ ಮಾಡಿದ್ದಾರೆ.<br /> <br /> ಆದರೆ, ಅಮಾನತು ರದ್ದುಗೊಳಿಸಲು ಹಾಗೂ ಮರು ನೇಮಕ ಮಾಡಲು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ ಅವರು ದೂರವಾಣಿ ಮೂಲಕ ತಿಳಿಸಿದ ಹಿನ್ನೆಲೆಯಲ್ಲಿ ಅವರ ಅಮಾನತು ರದ್ದುಗೊಳಿಸಿ, ಶಾಲೆಗೆ ಮರು ನಿಯುಕ್ತಿ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೊರಡಿಸಿದ ಮರು ಆದೇಶದಲ್ಲಿ ತಿಳಿಸಿದ್ದಾರೆ.<br /> <br /> ಇದರಿಂದ ಶಾಸಕರು ತಪ್ಪಿತಸ್ಥ ಶಿಕ್ಷಕನನ್ನು ರಕ್ಷಿಸುವ ಮೂಲಕ ತಪ್ಪು ಮಾಡುವ ಶಿಕ್ಷಕರ ಬೆನ್ನ ಹಿಂದೆ ನಾವಿದ್ದೇವೆ ಎಂಬುದನ್ನು ತೋರಿಸಿಕೊಟ್ಟಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.<br /> <br /> ಶಾಲಾ ಮಕ್ಕಳಿಂದಲೇ ಶಾಲೆಯ ಕಸ ಗೂಡಿಸುವುದು, ಅದನ್ನು ಬೇರೆಡೆಗೆ ಸಾಗಿಸುವುದು ಅಲ್ಲದೇ ರಜೆಯ ಅವಧಿಯಲ್ಲಿ ಒಡೆದು ಶಾಲೆಯ ಮೇಲ್ಛಾವಣಿ ಹೆಂಚುಗಳನ್ನು ಬದಲಾವಣೆ ಮಾಡಿಸಲಾಗಿದೆ ಎಂಬ ವಿಷಯವನ್ನು ಮೇ 31 ರಂದು `ಪ್ರಜಾವಾಣಿ' ಪತ್ರಿಕೆ `ಶಾಲೆಗೆ ಬರುವ ಮುನ್ನವೇ ಸ್ವಚ್ಛತೆ ಶಿಕ್ಷೆ' ಎಂಬ ಶಿರ್ಷಿಕೆಯಡಿ ಚಿತ್ರ ಸಹಿತ ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.<br /> <br /> ಮಕ್ಕಳನ್ನು ಶಾಲಾ ಸ್ವಚ್ಛತಾ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಮುಖ್ಯ ಶಿಕ್ಷಕರು ಕರ್ತವ್ಯಲೋಪ ಎಸಗಿರುವುದು ಹಾಗೂ ಸರ್ಕಾರಿ ನೌಕರಿಗೆ ಭೂಷಣವಲ್ಲದ ರೀತಿತಯಲ್ಲಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಶೆಟ್ಟಿ ಅವರು ಅಮಾನತು ರದ್ದು ಪಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>