<p><strong>ಬೆಂಗಳೂರು: </strong>ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉದ್ದೇಶದಿಂದ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಬಿ.ಶ್ರೀರಾಮುಲು ಅವರು ಶಾಸಕ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭೆಯ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.<br /> <br /> ಬುಧವಾರ ವಿಧಾನಸೌಧದಲ್ಲಿನ ಸ್ಪೀಕರ್ ಕಚೇರಿಗೆ ತೆರಳಿದ ಶ್ರೀರಾಮುಲು ಅವರು ಬಳ್ಳಾರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು, ಶ್ರೀರಾಮುಲು ಅವರ ರಾಜೀನಾಮೆಗೆ ಬಾಹ್ಯ ಒತ್ತಡಗಳು ಕಾರಣವಲ್ಲ ಹಾಗೂ ಅದು ಸ್ವಂತ ನಿರ್ಧಾರ ಎಂಬುದನ್ನು ಖಾತರಿಪಡಿಸಿಕೊಂಡ ಸ್ಪೀಕರ್, ರಾಜೀನಾಮೆಯನ್ನು ಅಂಗೀಕರಿಸಿದರು.<br /> <br /> ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಸಮಾಜವಾದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಕುರಿತು ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ, ‘ಯೋಗೇಶ್ವರ್ ಅವರು ಸಮಾಜವಾದಿ ಪಕ್ಷದ ಏಕೈಕ ಶಾಸಕರಾಗಿದ್ದರು. ಅವರು ಇತರೆ ಪಕ್ಷ ಸೇರಿದಾಗ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗುವುದಿಲ್ಲ. ಆದ್ದರಿಂದ ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉದ್ದೇಶದಿಂದ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಬಿ.ಶ್ರೀರಾಮುಲು ಅವರು ಶಾಸಕ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭೆಯ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.<br /> <br /> ಬುಧವಾರ ವಿಧಾನಸೌಧದಲ್ಲಿನ ಸ್ಪೀಕರ್ ಕಚೇರಿಗೆ ತೆರಳಿದ ಶ್ರೀರಾಮುಲು ಅವರು ಬಳ್ಳಾರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು, ಶ್ರೀರಾಮುಲು ಅವರ ರಾಜೀನಾಮೆಗೆ ಬಾಹ್ಯ ಒತ್ತಡಗಳು ಕಾರಣವಲ್ಲ ಹಾಗೂ ಅದು ಸ್ವಂತ ನಿರ್ಧಾರ ಎಂಬುದನ್ನು ಖಾತರಿಪಡಿಸಿಕೊಂಡ ಸ್ಪೀಕರ್, ರಾಜೀನಾಮೆಯನ್ನು ಅಂಗೀಕರಿಸಿದರು.<br /> <br /> ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಸಮಾಜವಾದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಕುರಿತು ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ, ‘ಯೋಗೇಶ್ವರ್ ಅವರು ಸಮಾಜವಾದಿ ಪಕ್ಷದ ಏಕೈಕ ಶಾಸಕರಾಗಿದ್ದರು. ಅವರು ಇತರೆ ಪಕ್ಷ ಸೇರಿದಾಗ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗುವುದಿಲ್ಲ. ಆದ್ದರಿಂದ ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>