<p><strong>ಬೆಂಗಳೂರು:</strong> `ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಆರಂಭವಾದಾಗಿನಿಂದಲೂ ಕನ್ನಡ ಭಾಷೆಗೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಂಶೋಧನೆಗಳು ನಡೆಯುತ್ತಿಲ್ಲ. ಇದಕ್ಕೆ ಮೂಲ ಕಾರಣ ಅಧ್ಯಾಪಕರು ಕನ್ನಡ ಶಾಸನಗಳನ್ನು ಸಮರ್ಪಕವಾಗಿ ಅಧ್ಯಯನ ನಡೆಸುತ್ತಿಲ್ಲ~ ಎಂದು ಸಂಶೋಧಕ ಪ್ರೊ.ಎಸ್.ಶೆಟ್ಟರ್ ದೂರಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ `ಕನ್ನಡ ಸಾಹಿತ್ಯ ಇತಿಹಾಸ-ಒಂದು ಅವಲೋಕನ~ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>`ಇತಿಹಾಸಕಾರರಿಗಿಂತ ಕನ್ನಡ ಪ್ರಾಧ್ಯಾಪಕರು ಕನ್ನಡ ಸಾಹಿತ್ಯ ಚರಿತ್ರೆಯನ್ನು ಆಳವಾಗಿ ಅಭ್ಯಸಿಸಿದ್ದಾರೆ. ಯುವ ಸಂಶೋಧಕರು ಪ್ರಸ್ತುತವಿರುವ ಕನ್ನಡ ಸಂಶೋಧನಾ ಗ್ರಂಥಗಳನ್ನು ಯಥಾವತ್ತಾಗಿ ಅನುಕರಿಸದೇ, ಇದನ್ನು ಆಧಾರವಾಗಿಟ್ಟುಕೊಂಡೇ ವಿವಿಧ ಆಯಾಮಗಳಲ್ಲಿ ಅಧ್ಯಯನ ನಡೆಸಬೇಕು~ ಎಂದರು.</p>.<p>`ಕನ್ನಡ ಸಾಹಿತ್ಯ ಚರಿತ್ರೆ ಅಧ್ಯಯನ ಮಾಡಲು ಇಚ್ಛಿಸುವವರು ಕನ್ನಡ ಭಾಷೆ ಜತೆಗೆ ಸಮಕಾಲೀನ ಇತರೆ ಭಾಷೆಗಳನ್ನು ಅಧ್ಯಯನ ಮಾಡಿದಾಗ ಮಾತ್ರ ಸಂಶೋಧನೆ ಅರ್ಥಪೂರ್ಣವೆನಿಸುತ್ತದೆ. ಈ ನಿಟ್ಟಿನಲ್ಲಿ ಯುವ ಸಂಶೋಧಕರು ಕಾರ್ಯನಿರ್ವಹಿಸಬೇಕು~ ಎಂದು ಸಲಹೆ ನೀಡಿದರು.</p>.<p>`ಕೇವಲ ನಾಲ್ಕೈದು ಸಾಹಿತ್ಯ ಪುಸ್ತಕಗಳ ಅಧ್ಯಯನದಿಂದ ಕನ್ನಡ ಸಾಹಿತ್ಯ ಸಂಶೋಧನೆ ಪೂರ್ಣಗೊಳ್ಳುವುದಿಲ್ಲ. ಆರಂಭದಲ್ಲಿ ಅನೇಕ ಸಂಶೋಧಕರು ತಮ್ಮ ಕಾಲಘಟ್ಟದಲ್ಲಿ ದೊರೆತ ಮಾಹಿತಿಯನ್ನು ಮಾತ್ರ ಆಧರಿಸಿ ಸಂಶೋಧನೆ ಮಾಡಿದ್ದಾರೆ ಇದರಿಂದಲೂ ಕನ್ನಡ ಸಾಹಿತ್ಯ ಸಂಶೋಧನೆ ಅಪೂರ್ಣವಾಗಿದೆ~ ಎಂದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಮನು ಬಳಿಗಾರ್, `ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆಯನ್ನು ಸಮರ್ಪಕವಾಗಿ ಬಳಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕನ್ನಡಿಗರು ಮುಂದಾಗಬೇಕು~ ಎಂದು ಕರೆ ನೀಡಿದರು.</p>.<p>ಬೆಂಗಳೂರು ವಿ.ವಿ ಕಾಲೇಜು ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಕೆ.ಕೃಷ್ಣಪ್ಪ, ಇಲಾಖೆಯ ಜಂಟಿ ನಿರ್ದೇಶಕ ಕಾ.ತ.ಚಿಕ್ಕಣ್ಣ, ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಆರ್.ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಆರಂಭವಾದಾಗಿನಿಂದಲೂ ಕನ್ನಡ ಭಾಷೆಗೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಂಶೋಧನೆಗಳು ನಡೆಯುತ್ತಿಲ್ಲ. ಇದಕ್ಕೆ ಮೂಲ ಕಾರಣ ಅಧ್ಯಾಪಕರು ಕನ್ನಡ ಶಾಸನಗಳನ್ನು ಸಮರ್ಪಕವಾಗಿ ಅಧ್ಯಯನ ನಡೆಸುತ್ತಿಲ್ಲ~ ಎಂದು ಸಂಶೋಧಕ ಪ್ರೊ.ಎಸ್.ಶೆಟ್ಟರ್ ದೂರಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ `ಕನ್ನಡ ಸಾಹಿತ್ಯ ಇತಿಹಾಸ-ಒಂದು ಅವಲೋಕನ~ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>`ಇತಿಹಾಸಕಾರರಿಗಿಂತ ಕನ್ನಡ ಪ್ರಾಧ್ಯಾಪಕರು ಕನ್ನಡ ಸಾಹಿತ್ಯ ಚರಿತ್ರೆಯನ್ನು ಆಳವಾಗಿ ಅಭ್ಯಸಿಸಿದ್ದಾರೆ. ಯುವ ಸಂಶೋಧಕರು ಪ್ರಸ್ತುತವಿರುವ ಕನ್ನಡ ಸಂಶೋಧನಾ ಗ್ರಂಥಗಳನ್ನು ಯಥಾವತ್ತಾಗಿ ಅನುಕರಿಸದೇ, ಇದನ್ನು ಆಧಾರವಾಗಿಟ್ಟುಕೊಂಡೇ ವಿವಿಧ ಆಯಾಮಗಳಲ್ಲಿ ಅಧ್ಯಯನ ನಡೆಸಬೇಕು~ ಎಂದರು.</p>.<p>`ಕನ್ನಡ ಸಾಹಿತ್ಯ ಚರಿತ್ರೆ ಅಧ್ಯಯನ ಮಾಡಲು ಇಚ್ಛಿಸುವವರು ಕನ್ನಡ ಭಾಷೆ ಜತೆಗೆ ಸಮಕಾಲೀನ ಇತರೆ ಭಾಷೆಗಳನ್ನು ಅಧ್ಯಯನ ಮಾಡಿದಾಗ ಮಾತ್ರ ಸಂಶೋಧನೆ ಅರ್ಥಪೂರ್ಣವೆನಿಸುತ್ತದೆ. ಈ ನಿಟ್ಟಿನಲ್ಲಿ ಯುವ ಸಂಶೋಧಕರು ಕಾರ್ಯನಿರ್ವಹಿಸಬೇಕು~ ಎಂದು ಸಲಹೆ ನೀಡಿದರು.</p>.<p>`ಕೇವಲ ನಾಲ್ಕೈದು ಸಾಹಿತ್ಯ ಪುಸ್ತಕಗಳ ಅಧ್ಯಯನದಿಂದ ಕನ್ನಡ ಸಾಹಿತ್ಯ ಸಂಶೋಧನೆ ಪೂರ್ಣಗೊಳ್ಳುವುದಿಲ್ಲ. ಆರಂಭದಲ್ಲಿ ಅನೇಕ ಸಂಶೋಧಕರು ತಮ್ಮ ಕಾಲಘಟ್ಟದಲ್ಲಿ ದೊರೆತ ಮಾಹಿತಿಯನ್ನು ಮಾತ್ರ ಆಧರಿಸಿ ಸಂಶೋಧನೆ ಮಾಡಿದ್ದಾರೆ ಇದರಿಂದಲೂ ಕನ್ನಡ ಸಾಹಿತ್ಯ ಸಂಶೋಧನೆ ಅಪೂರ್ಣವಾಗಿದೆ~ ಎಂದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಮನು ಬಳಿಗಾರ್, `ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆಯನ್ನು ಸಮರ್ಪಕವಾಗಿ ಬಳಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕನ್ನಡಿಗರು ಮುಂದಾಗಬೇಕು~ ಎಂದು ಕರೆ ನೀಡಿದರು.</p>.<p>ಬೆಂಗಳೂರು ವಿ.ವಿ ಕಾಲೇಜು ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಕೆ.ಕೃಷ್ಣಪ್ಪ, ಇಲಾಖೆಯ ಜಂಟಿ ನಿರ್ದೇಶಕ ಕಾ.ತ.ಚಿಕ್ಕಣ್ಣ, ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಆರ್.ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>