<p><strong>ಹೈದರಾಬಾದ್:</strong> ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಕುರಿತು ತಮ್ಮ ಹೇಳಿಕೆಗೆ ಬದ್ಧವಾಗದೇ ಜನತೆಗೆ ವಂಚನೆ ಎಸಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಸುಶೀಲಕುಮಾರ ಶಿಂಧೆ ಹಾಗೂ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.<br /> <br /> ಜಿಲ್ಲಾ ನ್ಯಾಯಾಲಯದ ಆದೇಶದ ಅನುಸಾರ, ಭಾರತೀಯ ದಂಡ ಸಂಹಿತೆಯ 420ನೇ (ವಂಚನೆ) ಪರಿಚ್ಛೇದದ ಅಡಿ ಹೈದರಾಬಾದ್ ಹೊರವಲಯದಲ್ಲಿರುವ ಎಲ್.ಬಿ.ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.<br /> <br /> ಶಿಂಧೆ ಹಾಗೂ ಚಿದಂಬರಂ ಅವರು ತೆಲಂಗಾಣ ರಾಜ್ಯ ರಚನೆ ಕುರಿತು ತಪ್ಪು ಹೇಳಿಕೆ ನೀಡಿ, ಜನರನ್ನು ವಂಚಿಸಿದ್ದಾರೆ ಎಂದು `ತೆಲಂಗಾಣ ಕಿರಿಯ ವಕೀಲರ ಸಂಘ'ದ ಸದಸ್ಯ ನರೇಶ್ಕುಮಾರ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.<br /> <br /> ಈ ಕುರಿತು ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.<br /> <br /> ಈ ಬಗ್ಗೆ ನ್ಯಾಯಾಲಯ ಜ. 28ರಂದು ಆದೇಶ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿತ್ತು. ಆದರೆ ಈ ಆದೇಶ ಪಾಲನೆಯಾಗದ ಹಿನ್ನೆಲೆಯಲ್ಲಿ ಠಾಣಾಧಿಕಾರಿಯನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದರು.<br /> <br /> ಈ ಬೆಳವಣಿಗೆಯ ಬೆನ್ನಲ್ಲೇ ಪೊಲೀಸರು ಸೋಮವಾರ ಇಬ್ಬರು ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಕುರಿತು ತಮ್ಮ ಹೇಳಿಕೆಗೆ ಬದ್ಧವಾಗದೇ ಜನತೆಗೆ ವಂಚನೆ ಎಸಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಸುಶೀಲಕುಮಾರ ಶಿಂಧೆ ಹಾಗೂ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.<br /> <br /> ಜಿಲ್ಲಾ ನ್ಯಾಯಾಲಯದ ಆದೇಶದ ಅನುಸಾರ, ಭಾರತೀಯ ದಂಡ ಸಂಹಿತೆಯ 420ನೇ (ವಂಚನೆ) ಪರಿಚ್ಛೇದದ ಅಡಿ ಹೈದರಾಬಾದ್ ಹೊರವಲಯದಲ್ಲಿರುವ ಎಲ್.ಬಿ.ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.<br /> <br /> ಶಿಂಧೆ ಹಾಗೂ ಚಿದಂಬರಂ ಅವರು ತೆಲಂಗಾಣ ರಾಜ್ಯ ರಚನೆ ಕುರಿತು ತಪ್ಪು ಹೇಳಿಕೆ ನೀಡಿ, ಜನರನ್ನು ವಂಚಿಸಿದ್ದಾರೆ ಎಂದು `ತೆಲಂಗಾಣ ಕಿರಿಯ ವಕೀಲರ ಸಂಘ'ದ ಸದಸ್ಯ ನರೇಶ್ಕುಮಾರ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.<br /> <br /> ಈ ಕುರಿತು ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.<br /> <br /> ಈ ಬಗ್ಗೆ ನ್ಯಾಯಾಲಯ ಜ. 28ರಂದು ಆದೇಶ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿತ್ತು. ಆದರೆ ಈ ಆದೇಶ ಪಾಲನೆಯಾಗದ ಹಿನ್ನೆಲೆಯಲ್ಲಿ ಠಾಣಾಧಿಕಾರಿಯನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದರು.<br /> <br /> ಈ ಬೆಳವಣಿಗೆಯ ಬೆನ್ನಲ್ಲೇ ಪೊಲೀಸರು ಸೋಮವಾರ ಇಬ್ಬರು ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>