<p>ಶಿಕಾರಿಪುರ (ಶಿವಮೊಗ್ಗ ಜಿಲ್ಲೆ): ಕಾಡಿನಿಂದ ದಾರಿ ತಪ್ಪಿ ನಾಡಿಗೆ ಬಂದ ಒಂದು ಹುಲಿ ನಡೆಸಿದ ದಾಳಿಯಿಂದ ಒಬ್ಬ ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಗಾಮ ಗ್ರಾಮದ ಸಮೀಪ ಭಾನುವಾರ ನಡೆದಿದೆ.<br /> <br /> ಗ್ರಾಮದ ಮುನೀರ್ (58) ಮೃತಪಟ್ಟ ವ್ಯಕ್ತಿ. ಇದೇ ಗ್ರಾಮದ ನಾಗರಾಜ್, ಈಸೂರು ಗ್ರಾಮದ ರಘು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> ಬೆಳಿಗ್ಗೆ ಈಸೂರಿನಿಂದ ಶಿಕಾರಿಪುರ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವ್ಯಕ್ತಿಯು ರಸ್ತೆ ಮಧ್ಯೆ ಹುಲಿ ಹಾದು ಹೋಗಿದ್ದನ್ನು ಕಂಡು ಸಮೀಪದ ತೋಟದ ಮನೆಯವರಿಗೆ ವಿಷಯ ತಿಳಿಸಿದ್ದಾರೆ.<br /> <br /> ಬೆಳಿಗ್ಗೆ 6 ಗಂಟೆಯಿಂದ ಊರಿನ ಸುತ್ತಮುತ್ತ ಹುಲಿ ತಿರುಗಾಡುತ್ತಿದ್ದುದನ್ನು ಕಂಡ ಜನರು ಭಯಭೀತರಾಗಿ ಗ್ರಾಮಸ್ಥರಿಗೆ ವಿಷಯ ತಿಳಿಸಿದರು. ಕುತೂಹಲಗೊಂಡು ಸುತ್ತಮುತ್ತಲ ಗ್ರಾಮದ ಜನರು ಹುಲಿ ವೀಕ್ಷಿಸಲು ತಂಡೋಪತಂಡವಾಗಿ ಜಮಾಯಿಸಿದ್ದರು. ಜನ ಜಂಗುಳಿಯನ್ನು ನಿಯಂತ್ರಿಸಲು ಪೊಲೀಸರು, ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು.<br /> <br /> ಹುಲಿ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವನ್ಯಜೀವಿ ವಿಭಾಗದವರು ಸ್ಥಳಕ್ಕೆ ಆಗಮಿಸಿದರು. ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾದ ಕಾರ್ಯಾಚರಣೆ ಸಂಜೆ 6ರ ವೇಳೆಗೆ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಹಿಡಿದು ಬೋನಿಗೆ ಹಾಕುವ ಮೂಲಕ ಮುಕ್ತಾಯಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಕಾರಿಪುರ (ಶಿವಮೊಗ್ಗ ಜಿಲ್ಲೆ): ಕಾಡಿನಿಂದ ದಾರಿ ತಪ್ಪಿ ನಾಡಿಗೆ ಬಂದ ಒಂದು ಹುಲಿ ನಡೆಸಿದ ದಾಳಿಯಿಂದ ಒಬ್ಬ ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಗಾಮ ಗ್ರಾಮದ ಸಮೀಪ ಭಾನುವಾರ ನಡೆದಿದೆ.<br /> <br /> ಗ್ರಾಮದ ಮುನೀರ್ (58) ಮೃತಪಟ್ಟ ವ್ಯಕ್ತಿ. ಇದೇ ಗ್ರಾಮದ ನಾಗರಾಜ್, ಈಸೂರು ಗ್ರಾಮದ ರಘು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> ಬೆಳಿಗ್ಗೆ ಈಸೂರಿನಿಂದ ಶಿಕಾರಿಪುರ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವ್ಯಕ್ತಿಯು ರಸ್ತೆ ಮಧ್ಯೆ ಹುಲಿ ಹಾದು ಹೋಗಿದ್ದನ್ನು ಕಂಡು ಸಮೀಪದ ತೋಟದ ಮನೆಯವರಿಗೆ ವಿಷಯ ತಿಳಿಸಿದ್ದಾರೆ.<br /> <br /> ಬೆಳಿಗ್ಗೆ 6 ಗಂಟೆಯಿಂದ ಊರಿನ ಸುತ್ತಮುತ್ತ ಹುಲಿ ತಿರುಗಾಡುತ್ತಿದ್ದುದನ್ನು ಕಂಡ ಜನರು ಭಯಭೀತರಾಗಿ ಗ್ರಾಮಸ್ಥರಿಗೆ ವಿಷಯ ತಿಳಿಸಿದರು. ಕುತೂಹಲಗೊಂಡು ಸುತ್ತಮುತ್ತಲ ಗ್ರಾಮದ ಜನರು ಹುಲಿ ವೀಕ್ಷಿಸಲು ತಂಡೋಪತಂಡವಾಗಿ ಜಮಾಯಿಸಿದ್ದರು. ಜನ ಜಂಗುಳಿಯನ್ನು ನಿಯಂತ್ರಿಸಲು ಪೊಲೀಸರು, ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು.<br /> <br /> ಹುಲಿ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವನ್ಯಜೀವಿ ವಿಭಾಗದವರು ಸ್ಥಳಕ್ಕೆ ಆಗಮಿಸಿದರು. ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾದ ಕಾರ್ಯಾಚರಣೆ ಸಂಜೆ 6ರ ವೇಳೆಗೆ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಹಿಡಿದು ಬೋನಿಗೆ ಹಾಕುವ ಮೂಲಕ ಮುಕ್ತಾಯಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>