<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ತೀವ್ರವಾಗಿರುವ ಶಿಕ್ಷಕರ ಕೊರತೆಯಿಂದಾಗಿ ಜನರು ರೋಸಿ ಹೋಗಿದ್ದು, ಇದೀಗ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳೇ ಬೀದಿಗಿಳಿದು ಹೋರಾಟ ಮಾಡು ವಂತಾಗಿದೆ. <br /> <br /> ಸೋಮವಾರ ತಾಲ್ಲೂಕಿನ ಕಿಲ್ಲನಕೇರಾ ಗ್ರಾಮದ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ದಾರಿಯುದ್ದಕ್ಕೂ, ಶಿಕ್ಷಕರನ್ನು ನೇಮಿಸಿ, ನಮ್ಮ ಭವಿಷ್ಯ ಹಾಳು ಮಾಡಬೇಡಿ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳು, ನೇರವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸುತ್ತಿದ್ದ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಆಗಮಿಸಿದರು. <br /> <br /> ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಾಜುಗೌಡ, ಮಕ್ಕಳ ಸಮಸ್ಯೆಯನ್ನು ಆಲಿಸಿದರು. ತಾಲ್ಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, 1ರಿಂದ 8 ನೇ ತರಗತಿಗಳು ನಡೆಯುತ್ತಿವೆ. ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಶಾಲೆಗೆ ಬರುತ್ತಿದ್ದಾರೆ. ಆದರೆ ಶಿಕ್ಷಕರೇ ಇಲ್ಲದಂತಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. <br /> <br /> ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕರ ಕೊರತೆ ಎದುರಾಗಿದೆ. ಮುಖ್ಯಾಧ್ಯಾಪಕರು ಹಾಗೂ ಒಬ್ಬ ಶಿಕ್ಷಕರು ಮಾತ್ರವಿದ್ದು, 8 ತರಗತಿಗಳನ್ನು ನಡೆಸಬೇಕಾಗಿದೆ. 10-12 ಶಿಕ್ಷಕರು ಮಾಡಬೇಕಾದ ಕೆಲಸವನ್ನು ಇಬ್ಬರೇ ಶಿಕ್ಷಕರು ನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸಬೇಕಾಗಿದೆ ಎಂದು ತಿಳಿಸಿದರು. <br /> <br /> ಗುಣಮಟ್ಟದ ಶಿಕ್ಷಣ ಸಿಗಬೇಕಾದರೆ, ಶಿಕ್ಷಕರು ಅಗತ್ಯವಾಗಿದ್ದು, ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಕೂಡಲೇ ಬಿಇಒ ಮಜರ್ ಹುಸೇನ್ ಅವರನ್ನು ಸ್ಥಳಕ್ಕೆ ಕರೆಯಿಸಿದ ಸಚಿವರು, ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಸೂಚನೆ ನೀಡಿದರು. <br /> <br /> ಎಸ್ಡಿಎಂಸಿ ಅಧ್ಯಕ್ಷ ಹಣಮಂತ ಧೋತ್ರೆ, ಗ್ರಾಮದ ಮುಖಂಡರಾದ ಬನ್ನಪ್ಪ ಬಾವುರ, ಚಂದ್ರಪ್ಪ ಧೋತ್ರೆ, ಮೆಹಬೂಬಸಾಬ್ ಬಡಿಗೇರ, ಮಹೇಶ ಸಜ್ಜನ್, ದಾವೂದ್ ಅಖ್ತರ್, ಹಳ್ಳೆಪ್ಪ ಹಾಜರಿದ್ದು, ಶಾಲೆಯ ವಾಸ್ತವ ಸ್ಥಿತಿಯನ್ನು ಸಚಿವರಿಗೆ ವಿವರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ತೀವ್ರವಾಗಿರುವ ಶಿಕ್ಷಕರ ಕೊರತೆಯಿಂದಾಗಿ ಜನರು ರೋಸಿ ಹೋಗಿದ್ದು, ಇದೀಗ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳೇ ಬೀದಿಗಿಳಿದು ಹೋರಾಟ ಮಾಡು ವಂತಾಗಿದೆ. <br /> <br /> ಸೋಮವಾರ ತಾಲ್ಲೂಕಿನ ಕಿಲ್ಲನಕೇರಾ ಗ್ರಾಮದ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ದಾರಿಯುದ್ದಕ್ಕೂ, ಶಿಕ್ಷಕರನ್ನು ನೇಮಿಸಿ, ನಮ್ಮ ಭವಿಷ್ಯ ಹಾಳು ಮಾಡಬೇಡಿ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳು, ನೇರವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸುತ್ತಿದ್ದ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಆಗಮಿಸಿದರು. <br /> <br /> ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಾಜುಗೌಡ, ಮಕ್ಕಳ ಸಮಸ್ಯೆಯನ್ನು ಆಲಿಸಿದರು. ತಾಲ್ಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, 1ರಿಂದ 8 ನೇ ತರಗತಿಗಳು ನಡೆಯುತ್ತಿವೆ. ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಶಾಲೆಗೆ ಬರುತ್ತಿದ್ದಾರೆ. ಆದರೆ ಶಿಕ್ಷಕರೇ ಇಲ್ಲದಂತಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. <br /> <br /> ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕರ ಕೊರತೆ ಎದುರಾಗಿದೆ. ಮುಖ್ಯಾಧ್ಯಾಪಕರು ಹಾಗೂ ಒಬ್ಬ ಶಿಕ್ಷಕರು ಮಾತ್ರವಿದ್ದು, 8 ತರಗತಿಗಳನ್ನು ನಡೆಸಬೇಕಾಗಿದೆ. 10-12 ಶಿಕ್ಷಕರು ಮಾಡಬೇಕಾದ ಕೆಲಸವನ್ನು ಇಬ್ಬರೇ ಶಿಕ್ಷಕರು ನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸಬೇಕಾಗಿದೆ ಎಂದು ತಿಳಿಸಿದರು. <br /> <br /> ಗುಣಮಟ್ಟದ ಶಿಕ್ಷಣ ಸಿಗಬೇಕಾದರೆ, ಶಿಕ್ಷಕರು ಅಗತ್ಯವಾಗಿದ್ದು, ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಕೂಡಲೇ ಬಿಇಒ ಮಜರ್ ಹುಸೇನ್ ಅವರನ್ನು ಸ್ಥಳಕ್ಕೆ ಕರೆಯಿಸಿದ ಸಚಿವರು, ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಸೂಚನೆ ನೀಡಿದರು. <br /> <br /> ಎಸ್ಡಿಎಂಸಿ ಅಧ್ಯಕ್ಷ ಹಣಮಂತ ಧೋತ್ರೆ, ಗ್ರಾಮದ ಮುಖಂಡರಾದ ಬನ್ನಪ್ಪ ಬಾವುರ, ಚಂದ್ರಪ್ಪ ಧೋತ್ರೆ, ಮೆಹಬೂಬಸಾಬ್ ಬಡಿಗೇರ, ಮಹೇಶ ಸಜ್ಜನ್, ದಾವೂದ್ ಅಖ್ತರ್, ಹಳ್ಳೆಪ್ಪ ಹಾಜರಿದ್ದು, ಶಾಲೆಯ ವಾಸ್ತವ ಸ್ಥಿತಿಯನ್ನು ಸಚಿವರಿಗೆ ವಿವರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>