<p><strong>ಮಂಡ್ಯ: </strong> `ಮನುಷ್ಯ ನೆಮ್ಮದಿಯಾಗಿ ಬದಕಲು ಮನೆ ಬೇಕು. ಕನಸಿನ ಮನೆ ನಿರ್ಮಾಣಕ್ಕೆ ಸುಸಜ್ಜಿತ ಬಡಾವಣೆ ಅಭಿವೃದ್ಧಿ ಅಗತ್ಯ~ ಎಂದು ಕೇಂದ್ರದ ಮಾಜಿ ಸಚಿವ ಅಂಬರೀಷ್ ಹೇಳಿದರು.<br /> <br /> ಪಟ್ಟಣದ ಹೊರವಲಯದ ಶ್ರೀನಿವಾಸಪುರ ಬಳಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಂಘ ಹಾಗೂ ಅಮರಾವತಿ ಡೆವಲಪರ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಶಿಕ್ಷಕರ ಬಡಾವಣೆಗೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.<br /> <br /> `ಶಿಕ್ಷಕ ವೃತ್ತಿ ಬಗೆಗೆ ನನಗೆ ಅಪಾರ ಗೌರವವಿದೆ. ಅಷ್ಟೇನು ವಿದ್ಯಾವಂತನೂ, ಬುದ್ಧಿವಂತನೂ ಅಲ್ಲದ ನನ್ನನ್ನು ಶಿಕ್ಷಕರ ಬಡಾವಣೆಯ ಶಂಕುಸ್ಥಾಪನೆಗೆ ಆಹ್ವಾನಿಸಿರುವುದು ನಿಮ್ಮ ಹೃದಯ ವೈಶ್ಯಾಲತೆಗೆ ಸಾಕ್ಷಿ~ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. <br /> <br /> ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ್ ಬಡಾವಣೆ ನಕ್ಷೆ ಅನಾವರಣಗೊಳಿಸಿ, `ಶಿಕ್ಷಕರ ಬಡಾವಣೆಯಲ್ಲಿ ಭವಿಷ್ಯದ ದೃಷ್ಟಿಯಿಂದ ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಬೇಕು~ ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ಶಾಸಕಿ ಕಲ್ಪನಾ ಸಿದ್ದರಾಜು ಮಾತನಾಡಿ, ಕಡಿಮೆ ವೆಚ್ಚದಲ್ಲಿ ಶಿಕ್ಷಕರಿಗೆ ಸುಸಜ್ಜಿತ ನಿವೇಶನಗಳು ದೊರಕಲಿ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಗೋಪಾಲ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬೋರೇಗೌಡ ಮಾತನಾಡಿದರು. <br /> <br /> ಅಮರಾವತಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಸಿ.ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೋದಂಡರಾಮ, ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ರಾವ್, ಸಂಘದ ಅಧ್ಯಕ್ಷ ಎಚ್. ಟಿ.ನಾಗೇಂದ್ರರಾವ್, ಉಪಾಧ್ಯಕ್ಷ ಕೆ.ಬಿ.ಅಶೋಕ್ಕುಮಾರ್, ಗೌರವ ಕಾರ್ಯದರ್ಶಿ ಎಚ್. ಟಿ.ಗುರುಲಿಂಗಯ್ಯ ಮತ್ತು ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong> `ಮನುಷ್ಯ ನೆಮ್ಮದಿಯಾಗಿ ಬದಕಲು ಮನೆ ಬೇಕು. ಕನಸಿನ ಮನೆ ನಿರ್ಮಾಣಕ್ಕೆ ಸುಸಜ್ಜಿತ ಬಡಾವಣೆ ಅಭಿವೃದ್ಧಿ ಅಗತ್ಯ~ ಎಂದು ಕೇಂದ್ರದ ಮಾಜಿ ಸಚಿವ ಅಂಬರೀಷ್ ಹೇಳಿದರು.<br /> <br /> ಪಟ್ಟಣದ ಹೊರವಲಯದ ಶ್ರೀನಿವಾಸಪುರ ಬಳಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಂಘ ಹಾಗೂ ಅಮರಾವತಿ ಡೆವಲಪರ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಶಿಕ್ಷಕರ ಬಡಾವಣೆಗೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.<br /> <br /> `ಶಿಕ್ಷಕ ವೃತ್ತಿ ಬಗೆಗೆ ನನಗೆ ಅಪಾರ ಗೌರವವಿದೆ. ಅಷ್ಟೇನು ವಿದ್ಯಾವಂತನೂ, ಬುದ್ಧಿವಂತನೂ ಅಲ್ಲದ ನನ್ನನ್ನು ಶಿಕ್ಷಕರ ಬಡಾವಣೆಯ ಶಂಕುಸ್ಥಾಪನೆಗೆ ಆಹ್ವಾನಿಸಿರುವುದು ನಿಮ್ಮ ಹೃದಯ ವೈಶ್ಯಾಲತೆಗೆ ಸಾಕ್ಷಿ~ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. <br /> <br /> ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ್ ಬಡಾವಣೆ ನಕ್ಷೆ ಅನಾವರಣಗೊಳಿಸಿ, `ಶಿಕ್ಷಕರ ಬಡಾವಣೆಯಲ್ಲಿ ಭವಿಷ್ಯದ ದೃಷ್ಟಿಯಿಂದ ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಬೇಕು~ ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ಶಾಸಕಿ ಕಲ್ಪನಾ ಸಿದ್ದರಾಜು ಮಾತನಾಡಿ, ಕಡಿಮೆ ವೆಚ್ಚದಲ್ಲಿ ಶಿಕ್ಷಕರಿಗೆ ಸುಸಜ್ಜಿತ ನಿವೇಶನಗಳು ದೊರಕಲಿ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಗೋಪಾಲ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬೋರೇಗೌಡ ಮಾತನಾಡಿದರು. <br /> <br /> ಅಮರಾವತಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಸಿ.ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೋದಂಡರಾಮ, ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ರಾವ್, ಸಂಘದ ಅಧ್ಯಕ್ಷ ಎಚ್. ಟಿ.ನಾಗೇಂದ್ರರಾವ್, ಉಪಾಧ್ಯಕ್ಷ ಕೆ.ಬಿ.ಅಶೋಕ್ಕುಮಾರ್, ಗೌರವ ಕಾರ್ಯದರ್ಶಿ ಎಚ್. ಟಿ.ಗುರುಲಿಂಗಯ್ಯ ಮತ್ತು ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>