<p>ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಎನ್ಎಸ್ಯುಐ ಕುವೆಂಪು ವಿಶ್ವವಿದ್ಯಾಲಯ ಘಟಕದ ಕಾರ್ಯಕರ್ತರು ರಾಜ್ಯ ಘಟಕದ ಅಧ್ಯಕ್ಷ ಮಹೇಶ್ ರಾವಣಿಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. <br /> <br /> ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ತರಬೇತಿ ಕೇಂದ್ರಗಳು ಹೆಚ್ಚಾಗುತ್ತಲೇ ಇವೆ. ಇದರಿಂದ ಪ್ರತಿ ಬಾರಿ ಲಕ್ಷಾಂತರ ವಿದ್ಯಾರ್ಥಿಗಳು ತರಬೇತಿ ಮುಗಿಸಿಕೊಂಡು ಹೊರಬರುತ್ತಿದ್ದಾರೆ. ಆದರೆ, ಸರ್ಕಾರ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. <br /> <br /> ಮುಖ್ಯಮಂತ್ರಿಗಳು 2010ರ ಒಳಗೆ ರಾಜ್ಯದಲ್ಲಿ 25 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದರು. ಆದರೆ, ನೇಮಕಾತಿ ಪ್ರಕ್ರಿಯೆ ಇನ್ನೂ ಆರಂಭಿಸಿಲ್ಲ ಎಂದು ಆರೋಪಿಸಿದರು. ಈ ಸಂಬಂಧ ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಿದರು. <br /> <br /> ಎನ್ಎಸ್ಯುಐ ಕುವೆಂಪು ವಿವಿ ಘಟಕದ ಅಧ್ಯಕ್ಷ ಸಿ.ಜಿ. ಮಧುಸೂದನ್, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎ. ರಮೇಶ್ ಹೆಗ್ಡೆ, ಪದಾಧಿಕಾರಿಗಳಾದ ಕೆ. ದೇವೇಂದ್ರಪ್ಪ, ಚೇತನ್, ಮೋಹನ್ ಮತ್ತಿತರರು ನೇತೃತ್ವ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಎನ್ಎಸ್ಯುಐ ಕುವೆಂಪು ವಿಶ್ವವಿದ್ಯಾಲಯ ಘಟಕದ ಕಾರ್ಯಕರ್ತರು ರಾಜ್ಯ ಘಟಕದ ಅಧ್ಯಕ್ಷ ಮಹೇಶ್ ರಾವಣಿಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. <br /> <br /> ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ತರಬೇತಿ ಕೇಂದ್ರಗಳು ಹೆಚ್ಚಾಗುತ್ತಲೇ ಇವೆ. ಇದರಿಂದ ಪ್ರತಿ ಬಾರಿ ಲಕ್ಷಾಂತರ ವಿದ್ಯಾರ್ಥಿಗಳು ತರಬೇತಿ ಮುಗಿಸಿಕೊಂಡು ಹೊರಬರುತ್ತಿದ್ದಾರೆ. ಆದರೆ, ಸರ್ಕಾರ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. <br /> <br /> ಮುಖ್ಯಮಂತ್ರಿಗಳು 2010ರ ಒಳಗೆ ರಾಜ್ಯದಲ್ಲಿ 25 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದರು. ಆದರೆ, ನೇಮಕಾತಿ ಪ್ರಕ್ರಿಯೆ ಇನ್ನೂ ಆರಂಭಿಸಿಲ್ಲ ಎಂದು ಆರೋಪಿಸಿದರು. ಈ ಸಂಬಂಧ ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಿದರು. <br /> <br /> ಎನ್ಎಸ್ಯುಐ ಕುವೆಂಪು ವಿವಿ ಘಟಕದ ಅಧ್ಯಕ್ಷ ಸಿ.ಜಿ. ಮಧುಸೂದನ್, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎ. ರಮೇಶ್ ಹೆಗ್ಡೆ, ಪದಾಧಿಕಾರಿಗಳಾದ ಕೆ. ದೇವೇಂದ್ರಪ್ಪ, ಚೇತನ್, ಮೋಹನ್ ಮತ್ತಿತರರು ನೇತೃತ್ವ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>