<p>ನರೇಗಲ್: ಶಿಕ್ಷಣದಿಂದ ಮಹಿಳಾ ಸಮಾಜದ ಸಬಲೀಕರಣ ಸಾಧ್ಯ ಎಂದು ಗಜೇಂದ್ರಗಡದ ಸ್ನೇಹಾ ಮಹಿಳಾ ಮಂಡಳದ ಗೌರವಾಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು. <br /> <br /> ನರೇಗಲ್ ಸಮೀಪದ ಜಕ್ಕಲಿ ಗ್ರಾಮದ ಹಾಲಕೇರಿ ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಶಿವಶರಣಿ ಹೇಮರಡ್ಡಿ ಮಲ್ಲಮ್ಮ ಟ್ರಸ್ಟ್ ಕಮಿಟಿ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳು ಹಮ್ಮಿಕೊಂಡಿದ್ದ ಮುತ್ತೈ ದೆಯರಿಗೆ ಉಡಿ ತುಂಬುವ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಪಾಲಕರು ತಪ್ಪದೇ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಮಹಿಳೆ ಯರು ಸ್ವಸಹಾಯ ಗುಂಪುಗಳ ಮೂಲಕ ಹಣ ಉಳಿತಾಯ ಮಾಡಿ, ಆರ್ಥಿಕವಾಗಿ ಸಬಲರಾಗಬೇಕು. ನಮ್ಮಲ್ಲಿರುವ ಕೀಳರೀಮೆಯನ್ನು ಬಿಟ್ಟು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕಿವಿ ಮಾತು ಹೇಳಿದರು.<br /> <br /> ಸಾನ್ನಿಧ್ಯ ವಹಿಸಿದ್ದ ಶಿವಶರಣೆ ನೀಲಮ್ಮತಾಯಿ ಅಸುಂಡಿ ಮಾತನಾಡಿ, ಮಹಿಳಾ ಸಂಘಗಳ ಸ್ವಾವಲಂಬಿ ಸಂಕಲ್ಪ ಮಹಿಳಾ ಸಮಾಜಕ್ಕೆ ದಾರಿ ದೀಪವಾಗಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮಹಿಳೆ ಕ್ರೀಯಾಶೀಲ ಳಾಗಿ ಧರ್ಮ ಮಾರ್ಗ ದಲ್ಲಿ ನಡೆಯಬೇಕು ಎಂದು ಹೇಳಿದರು.<br /> <br /> ಹಾಲವ್ವ ಮುಗಳಿ ಅಧ್ಯಕ್ಷತೆ ವಹಿಸಿದ್ದರು. ರತ್ನವ್ವ ಮುಗಳಿ, ಅನ್ನಪೂರ್ಣಾ ಮೇಟಿ, ಸರೋಜಾ ಕಡಗದ, ಶಿವಶರಣಿ ಹೇಮರಡ್ಡಿ ಮಲ್ಲಮ್ಮ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು, ಮಹಿಳೆಯರು ಭಾಗವಹಿಸಿದ್ದರು.<br /> <br /> ಕಳಕಪ್ಪ ಮುಗಳಿ ಸ್ವಾಗತಿಸಿದರು. ಶೇಖವ್ವ ಹೊಸಮನಿ ನಿರೂಪಿಸಿದರು. ಸಂಗಮೇಶ ಮೆಣಸಗಿ ವಂದಿಸಿದರು.<br /> <br /> ಕಾರ್ಯಕ್ರಮದಲ್ಲಿ ಮಲ್ಲಮ್ಮನ ಭಾವಚಿತ್ರದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂದೀಶ್ವರ ಹೋರಿ, ಜಲ ಕುಂಭ, ಕರಡಿ ಮಜಲು ಹಾಗೂ ಡೊಳ್ಳಿನ ಮೇಳ ದವರು ಮೆರವಣಿಗೆಯಲ್ಲಿ ಭಾಗವ ಹಿಸಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರೇಗಲ್: ಶಿಕ್ಷಣದಿಂದ ಮಹಿಳಾ ಸಮಾಜದ ಸಬಲೀಕರಣ ಸಾಧ್ಯ ಎಂದು ಗಜೇಂದ್ರಗಡದ ಸ್ನೇಹಾ ಮಹಿಳಾ ಮಂಡಳದ ಗೌರವಾಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು. <br /> <br /> ನರೇಗಲ್ ಸಮೀಪದ ಜಕ್ಕಲಿ ಗ್ರಾಮದ ಹಾಲಕೇರಿ ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಶಿವಶರಣಿ ಹೇಮರಡ್ಡಿ ಮಲ್ಲಮ್ಮ ಟ್ರಸ್ಟ್ ಕಮಿಟಿ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳು ಹಮ್ಮಿಕೊಂಡಿದ್ದ ಮುತ್ತೈ ದೆಯರಿಗೆ ಉಡಿ ತುಂಬುವ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಪಾಲಕರು ತಪ್ಪದೇ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಮಹಿಳೆ ಯರು ಸ್ವಸಹಾಯ ಗುಂಪುಗಳ ಮೂಲಕ ಹಣ ಉಳಿತಾಯ ಮಾಡಿ, ಆರ್ಥಿಕವಾಗಿ ಸಬಲರಾಗಬೇಕು. ನಮ್ಮಲ್ಲಿರುವ ಕೀಳರೀಮೆಯನ್ನು ಬಿಟ್ಟು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕಿವಿ ಮಾತು ಹೇಳಿದರು.<br /> <br /> ಸಾನ್ನಿಧ್ಯ ವಹಿಸಿದ್ದ ಶಿವಶರಣೆ ನೀಲಮ್ಮತಾಯಿ ಅಸುಂಡಿ ಮಾತನಾಡಿ, ಮಹಿಳಾ ಸಂಘಗಳ ಸ್ವಾವಲಂಬಿ ಸಂಕಲ್ಪ ಮಹಿಳಾ ಸಮಾಜಕ್ಕೆ ದಾರಿ ದೀಪವಾಗಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮಹಿಳೆ ಕ್ರೀಯಾಶೀಲ ಳಾಗಿ ಧರ್ಮ ಮಾರ್ಗ ದಲ್ಲಿ ನಡೆಯಬೇಕು ಎಂದು ಹೇಳಿದರು.<br /> <br /> ಹಾಲವ್ವ ಮುಗಳಿ ಅಧ್ಯಕ್ಷತೆ ವಹಿಸಿದ್ದರು. ರತ್ನವ್ವ ಮುಗಳಿ, ಅನ್ನಪೂರ್ಣಾ ಮೇಟಿ, ಸರೋಜಾ ಕಡಗದ, ಶಿವಶರಣಿ ಹೇಮರಡ್ಡಿ ಮಲ್ಲಮ್ಮ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು, ಮಹಿಳೆಯರು ಭಾಗವಹಿಸಿದ್ದರು.<br /> <br /> ಕಳಕಪ್ಪ ಮುಗಳಿ ಸ್ವಾಗತಿಸಿದರು. ಶೇಖವ್ವ ಹೊಸಮನಿ ನಿರೂಪಿಸಿದರು. ಸಂಗಮೇಶ ಮೆಣಸಗಿ ವಂದಿಸಿದರು.<br /> <br /> ಕಾರ್ಯಕ್ರಮದಲ್ಲಿ ಮಲ್ಲಮ್ಮನ ಭಾವಚಿತ್ರದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂದೀಶ್ವರ ಹೋರಿ, ಜಲ ಕುಂಭ, ಕರಡಿ ಮಜಲು ಹಾಗೂ ಡೊಳ್ಳಿನ ಮೇಳ ದವರು ಮೆರವಣಿಗೆಯಲ್ಲಿ ಭಾಗವ ಹಿಸಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>