<p><strong>ಹೂವಿನಹಡಗಲಿ: </strong>ಪ್ರತಿಯೊಂದು ಮಗು ಶಿಕ್ಷಣವನ್ನು ಪಡೆದಾಗ ಅಭಿವೃದ್ಧಿ ಸಾಧ್ಯವಾಗುವುದು. ಆಸ್ತಿಯನ್ನು ಕಳೆದುಕೊಳ್ಳಬಹುದು ಆದರೆ ಕಲಿತ ವಿದ್ಯೆಯನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಚಂದ್ರಾನಾಯ್ಕ ಹೇಳಿದರು.<br /> <br /> ತಾಲ್ಲೂಕಿನ ಮಿರಾಕೊರ್ನಹಳ್ಳಿಯಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಬಡ ಪ್ರತಿಭಾವಂತ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣವನ್ನು ಕೊಡುವ ಉದ್ದೇಶದಿಂದ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಸುಮಾರು 5 ಕೋಟಿ ರೂಗಳ ವೆಚ್ಚದಲ್ಲಿ ಅದ್ಭುತ ಕಟ್ಟಡ ರೂಪುಗೊಳ್ಳಲಿದೆ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯಪಡೆದುಕೊಳ್ಳಬೇಕು ಎಂದರು.<br /> <br /> ಮಾಜಿ ಉಪಮುಖ್ಯಮಂತ್ರಿ ದಿ. ಎಂ.ಪಿ.ಪ್ರಕಾಶ್ ಅವರ ಕಾಲದಲ್ಲಿ ಈ ಶಾಲೆ ಮಂಜೂರಾಗಿದ್ದು, ಇದೀಗ ಅದರ ಕಟ್ಟಡ ಕಾಮಗಾರಿ ಆರಂಭಗೊಳ್ಳುತ್ತಿದ ಎಂದರು.ಮುಂಬರುವ ದಿನಗಳಲ್ಲಿ ಮುಖ್ಯ ಮಂತ್ರಿಗಳನ್ನು ಕರೆಯಿಸಿ ಅನೇಕ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ ಎಂದರು.<br /> <br /> ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ತಾ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಐಗೋಳ್ ಚಿದಾನಂದ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜ್ಯೋತಿ ಮಹೇಂದ್ರ ಮಾತನಾಡಿದರು.<br /> <br /> ಗ್ರಾ.ಪಂ.ಅಧ್ಯಕ್ಷ ಭೋವಿ ತಿಪ್ಪೇಶ ಅಧ್ಯಕ್ಷತೆ ವಹಿಸಿದ್ದರು. ಸೋಗಿ ಜಿ.ಪಂ.ಸದಸ್ಯೆ ನಳಿನಾ ವೀರಭದ್ರಪ್ಪ, ತಾ.ಪಂ. ಉಪಾಧ್ಯಕ್ಷೆ ಸಾವಿತ್ರಮ್ಮ ಮಂಜುನಾಥ, ತಾ.ಪಂ.ಸದಸ್ಯೆ ಪ್ರೇಮಾರಾಜೇಂದ್ರಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೂಜಪ್ಪ, ತಾ.ಪಂ. ಕಾರ್ಯ ನಿರ್ವಾಹಕಾಧಿಕಾರಿ ಮೇಘಾನಾಯ್ಕ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ದ್ಯಾಮಪ್ಪ ಉಪಸ್ಥಿತರಿದ್ದರು.<br /> <br /> ಎ.ಸೋಮಶೇಖರಪ್ಪ ಪ್ರಾರ್ಥನೆ ಹಾಡಿದರು. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ದ್ಯಾಮಪ್ಪ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ: </strong>ಪ್ರತಿಯೊಂದು ಮಗು ಶಿಕ್ಷಣವನ್ನು ಪಡೆದಾಗ ಅಭಿವೃದ್ಧಿ ಸಾಧ್ಯವಾಗುವುದು. ಆಸ್ತಿಯನ್ನು ಕಳೆದುಕೊಳ್ಳಬಹುದು ಆದರೆ ಕಲಿತ ವಿದ್ಯೆಯನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಚಂದ್ರಾನಾಯ್ಕ ಹೇಳಿದರು.<br /> <br /> ತಾಲ್ಲೂಕಿನ ಮಿರಾಕೊರ್ನಹಳ್ಳಿಯಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಬಡ ಪ್ರತಿಭಾವಂತ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣವನ್ನು ಕೊಡುವ ಉದ್ದೇಶದಿಂದ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಸುಮಾರು 5 ಕೋಟಿ ರೂಗಳ ವೆಚ್ಚದಲ್ಲಿ ಅದ್ಭುತ ಕಟ್ಟಡ ರೂಪುಗೊಳ್ಳಲಿದೆ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯಪಡೆದುಕೊಳ್ಳಬೇಕು ಎಂದರು.<br /> <br /> ಮಾಜಿ ಉಪಮುಖ್ಯಮಂತ್ರಿ ದಿ. ಎಂ.ಪಿ.ಪ್ರಕಾಶ್ ಅವರ ಕಾಲದಲ್ಲಿ ಈ ಶಾಲೆ ಮಂಜೂರಾಗಿದ್ದು, ಇದೀಗ ಅದರ ಕಟ್ಟಡ ಕಾಮಗಾರಿ ಆರಂಭಗೊಳ್ಳುತ್ತಿದ ಎಂದರು.ಮುಂಬರುವ ದಿನಗಳಲ್ಲಿ ಮುಖ್ಯ ಮಂತ್ರಿಗಳನ್ನು ಕರೆಯಿಸಿ ಅನೇಕ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ ಎಂದರು.<br /> <br /> ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ತಾ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಐಗೋಳ್ ಚಿದಾನಂದ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜ್ಯೋತಿ ಮಹೇಂದ್ರ ಮಾತನಾಡಿದರು.<br /> <br /> ಗ್ರಾ.ಪಂ.ಅಧ್ಯಕ್ಷ ಭೋವಿ ತಿಪ್ಪೇಶ ಅಧ್ಯಕ್ಷತೆ ವಹಿಸಿದ್ದರು. ಸೋಗಿ ಜಿ.ಪಂ.ಸದಸ್ಯೆ ನಳಿನಾ ವೀರಭದ್ರಪ್ಪ, ತಾ.ಪಂ. ಉಪಾಧ್ಯಕ್ಷೆ ಸಾವಿತ್ರಮ್ಮ ಮಂಜುನಾಥ, ತಾ.ಪಂ.ಸದಸ್ಯೆ ಪ್ರೇಮಾರಾಜೇಂದ್ರಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೂಜಪ್ಪ, ತಾ.ಪಂ. ಕಾರ್ಯ ನಿರ್ವಾಹಕಾಧಿಕಾರಿ ಮೇಘಾನಾಯ್ಕ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ದ್ಯಾಮಪ್ಪ ಉಪಸ್ಥಿತರಿದ್ದರು.<br /> <br /> ಎ.ಸೋಮಶೇಖರಪ್ಪ ಪ್ರಾರ್ಥನೆ ಹಾಡಿದರು. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ದ್ಯಾಮಪ್ಪ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>