<p>ಬೆಂಗಳೂರು: `ಶಿಕ್ಷಣ ಮತ್ತು ಜೀವನ ಒಂದೇ ನಾಣ್ಯದ ಎರಡು ಮುಖಗಳು. ಮನುಷ್ಯ ಶಿಕ್ಷಣದಿಂದ ಸುಸಂಸ್ಕೃತ ವ್ಯಕ್ತಿಯಾಗುತ್ತಾನೆ' ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.<br /> <br /> ಬನಶಂಕರಿ 3 ನೇ ಹಂತದ ಶ್ರೀಕೃಷ್ಣ ಪಿಯು ಮತ್ತು ಪದವಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2013-14 ನೇ ಸಾಲಿನ ಮೊದಲ ವರ್ಷದ ಪದವಿ ತರಗತಿ ಆರಂಭ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> `ಉತ್ತಮ ಶಿಕ್ಷಣವು ಒಂದು ದೇಶವನ್ನು ಬಲಗೊಳಿಸುತ್ತದೆ. ಹೀಗಾಗಿ ಛಲ ಬಿಡದೆ ಓದಿ ಸಾಧನೆಯ ಮಾರ್ಗವನ್ನು ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ಪರಿಶ್ರಮದಿಂದ ಓದಿ ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಬೇಕು' ಎಂದರು.<br /> <br /> `ವಿದ್ಯಾರ್ಥಿ ದೆಸೆಯಲ್ಲಿ ಶಿಕ್ಷಣವನ್ನು ನಿರ್ಲಕ್ಷಿಸಬಾರದು. ಕಷ್ಟಪಟ್ಟು ಓದಿದರೆ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಮೆದುಳನ್ನು ಖಾಲಿ ಬಿಡದೆ, ಅದಕ್ಕೆ ಜ್ಞಾನವನ್ನು ತುಂಬಬೇಕು' ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.<br /> <br /> ಶ್ರೀ ಕೃಷ್ಣ ಇಂಟರ್ನ್ಯಾಷನಲ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಎಂ.ರುಕ್ಮಾಂಗದ ನಾಯ್ಡು ಮಾತನಾಡಿ, `ಮನುಷ್ಯನಿಗೆ ಶಿಕ್ಷಣದ ಜತೆಗೆ ಸಾಮಾನ್ಯ ಜ್ಞಾನವೂ ಮುಖ್ಯವಾಗುತ್ತದೆ. ಕಾಲೇಜು ಜೀವನ ಮುಗಿದ ನಂತರ ನಿಜವಾದ ಜೀವನ ಆರಂಭವಾಗುತ್ತದೆ. ಮುಂದಿನ ಜೀವನ ರೂಪಿಸಿಕೊಳ್ಳಲು ಈಗಿನಿಂದಲೇ ಪರಿಶ್ರಮ ಪಡಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಶಿಕ್ಷಣ ಮತ್ತು ಜೀವನ ಒಂದೇ ನಾಣ್ಯದ ಎರಡು ಮುಖಗಳು. ಮನುಷ್ಯ ಶಿಕ್ಷಣದಿಂದ ಸುಸಂಸ್ಕೃತ ವ್ಯಕ್ತಿಯಾಗುತ್ತಾನೆ' ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.<br /> <br /> ಬನಶಂಕರಿ 3 ನೇ ಹಂತದ ಶ್ರೀಕೃಷ್ಣ ಪಿಯು ಮತ್ತು ಪದವಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2013-14 ನೇ ಸಾಲಿನ ಮೊದಲ ವರ್ಷದ ಪದವಿ ತರಗತಿ ಆರಂಭ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> `ಉತ್ತಮ ಶಿಕ್ಷಣವು ಒಂದು ದೇಶವನ್ನು ಬಲಗೊಳಿಸುತ್ತದೆ. ಹೀಗಾಗಿ ಛಲ ಬಿಡದೆ ಓದಿ ಸಾಧನೆಯ ಮಾರ್ಗವನ್ನು ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ಪರಿಶ್ರಮದಿಂದ ಓದಿ ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಬೇಕು' ಎಂದರು.<br /> <br /> `ವಿದ್ಯಾರ್ಥಿ ದೆಸೆಯಲ್ಲಿ ಶಿಕ್ಷಣವನ್ನು ನಿರ್ಲಕ್ಷಿಸಬಾರದು. ಕಷ್ಟಪಟ್ಟು ಓದಿದರೆ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಮೆದುಳನ್ನು ಖಾಲಿ ಬಿಡದೆ, ಅದಕ್ಕೆ ಜ್ಞಾನವನ್ನು ತುಂಬಬೇಕು' ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.<br /> <br /> ಶ್ರೀ ಕೃಷ್ಣ ಇಂಟರ್ನ್ಯಾಷನಲ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಎಂ.ರುಕ್ಮಾಂಗದ ನಾಯ್ಡು ಮಾತನಾಡಿ, `ಮನುಷ್ಯನಿಗೆ ಶಿಕ್ಷಣದ ಜತೆಗೆ ಸಾಮಾನ್ಯ ಜ್ಞಾನವೂ ಮುಖ್ಯವಾಗುತ್ತದೆ. ಕಾಲೇಜು ಜೀವನ ಮುಗಿದ ನಂತರ ನಿಜವಾದ ಜೀವನ ಆರಂಭವಾಗುತ್ತದೆ. ಮುಂದಿನ ಜೀವನ ರೂಪಿಸಿಕೊಳ್ಳಲು ಈಗಿನಿಂದಲೇ ಪರಿಶ್ರಮ ಪಡಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>