<p><strong>ಮೊಳಕಾಲ್ಮುರು:</strong> ಪ್ರಸಕ್ತ ಶೈಕ್ಷಣಿಕ ಸಾಲಿಗೆ ತಾಲ್ಲೂಕಿನಲ್ಲಿ ಶಾಲೆಗಳು ಶುಕ್ರವಾರ ಪುನರಾರಂಭವಾಗಿದ್ದು, ಎಲ್ಲಾ ಶಾಲೆಗಳನ್ನು ತಳಿರು- ತೋರಣಗಳಿಂದ ಅಲಂಕಾರ ಮಾಡಿ ಮಧ್ಯಾಹ್ನ ಬಿಸಿಯೂಟ ಜತೆ ಸಿಹಿ ನೀಡಲಾಯಿತು.<br /> <br /> ಶಿಕ್ಷಕರ ತೀವ್ರ ಸಮಸ್ಯೆ ಮಧ್ಯೆಯೂ ಸಮಸ್ಯೆ ಇರುವ ಶಾಲೆಗಳಿಗೆ ಶಿಕ್ಷಕರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದ ಪರಿಣಾಮ ಯಾವುದೇ ಗೊಂದಲಗಳು, ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.<br /> <br /> ಶಾಲೆಯ ಬಿಸಿಯೂಟ ಸೌಲಭ್ಯ, ಶಿಕ್ಷಕರ ಕಾರ್ಯವೈಖರಿ, ಶಾಲೆಗಳ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಹಾಜರಾತಿ ಸೇರಿದಂತೆ ಶಾಲೆಗೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಅರಿಯಲು ಶಿಕ್ಷಣ ಇಲಾಖೆ ಶುಕ್ರವಾರದಿಂದ ಜೂನ್ 8ರ ವರೆಗೆ `ಮಿಂಚಿನ ಸಂಚಾರ' ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಉಮಾದೇವಿ ತಿಳಿಸಿದರು.<br /> <br /> ಜೂನ್ 8ರ ಒಳಗೆ ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ ತಂಡ ಭೇಟಿ ನೀಡಲಿದೆ. ಅದಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿ, ಸಮನ್ವಯ ಶಿಕ್ಷಣಾಧಿಕಾರಿ, ಶಿಕ್ಷಣ ಸಂಯೋಜಕರ ನೇತೃತ್ವದಲ್ಲಿ ಒಟ್ಟು 8 ತಂಡಗಳನ್ನು ರಚಿಸಲಾಗಿದೆ. ಭೇಟಿ ನಂತರ ತಂಡದ ಮುಖ್ಯಸ್ಥರು ನೀಡುವ ವರದಿ ಆಧರಿಸಿ, ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಪ್ರಸಕ್ತ ಶೈಕ್ಷಣಿಕ ಸಾಲಿಗೆ ತಾಲ್ಲೂಕಿನಲ್ಲಿ ಶಾಲೆಗಳು ಶುಕ್ರವಾರ ಪುನರಾರಂಭವಾಗಿದ್ದು, ಎಲ್ಲಾ ಶಾಲೆಗಳನ್ನು ತಳಿರು- ತೋರಣಗಳಿಂದ ಅಲಂಕಾರ ಮಾಡಿ ಮಧ್ಯಾಹ್ನ ಬಿಸಿಯೂಟ ಜತೆ ಸಿಹಿ ನೀಡಲಾಯಿತು.<br /> <br /> ಶಿಕ್ಷಕರ ತೀವ್ರ ಸಮಸ್ಯೆ ಮಧ್ಯೆಯೂ ಸಮಸ್ಯೆ ಇರುವ ಶಾಲೆಗಳಿಗೆ ಶಿಕ್ಷಕರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದ ಪರಿಣಾಮ ಯಾವುದೇ ಗೊಂದಲಗಳು, ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.<br /> <br /> ಶಾಲೆಯ ಬಿಸಿಯೂಟ ಸೌಲಭ್ಯ, ಶಿಕ್ಷಕರ ಕಾರ್ಯವೈಖರಿ, ಶಾಲೆಗಳ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಹಾಜರಾತಿ ಸೇರಿದಂತೆ ಶಾಲೆಗೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಅರಿಯಲು ಶಿಕ್ಷಣ ಇಲಾಖೆ ಶುಕ್ರವಾರದಿಂದ ಜೂನ್ 8ರ ವರೆಗೆ `ಮಿಂಚಿನ ಸಂಚಾರ' ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಉಮಾದೇವಿ ತಿಳಿಸಿದರು.<br /> <br /> ಜೂನ್ 8ರ ಒಳಗೆ ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ ತಂಡ ಭೇಟಿ ನೀಡಲಿದೆ. ಅದಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿ, ಸಮನ್ವಯ ಶಿಕ್ಷಣಾಧಿಕಾರಿ, ಶಿಕ್ಷಣ ಸಂಯೋಜಕರ ನೇತೃತ್ವದಲ್ಲಿ ಒಟ್ಟು 8 ತಂಡಗಳನ್ನು ರಚಿಸಲಾಗಿದೆ. ಭೇಟಿ ನಂತರ ತಂಡದ ಮುಖ್ಯಸ್ಥರು ನೀಡುವ ವರದಿ ಆಧರಿಸಿ, ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>