<p><strong>ಮಂಡ್ಯ:</strong> ಆರರಿಂದ ಹದಿನಾಲ್ಕು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸಲು ಜಾರಿಗೆ ತಂದಿರುವ ಕಾಯಿದೆಯ ಫಲ ಪ್ರತಿಯೊಬ್ಬರಿಗೂ ದೊರಕಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ವಾಸುದೇವ ಶರ್ಮ ಅವರು ಹೇಳಿದರು.<br /> <br /> ನಗರದಲ್ಲಿ ಶುಕ್ರವಾರ ಬೆಂಗಳೂರಿನ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಮತ್ತು ಭೀಮ್ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ `ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ-2009~ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ಶಿಕ್ಷಣ ವಂಚಿತ ಮಕ್ಕಳಿಗೆ ಈ ಕಾಯಿದೆ ನೆರವಾಗಿದೆ. ಶಿಕ್ಷಣ ಎಲ್ಲ ತಾರತಮ್ಯವನ್ನು ನಿವಾರಿಸುವ ಸಾಧನವಾಗಿದ್ದು, ಮಕ್ಕಳ ಮೇಲಿನ ಅನ್ಯಾಯ ಮತ್ತು ಶೋಷಣೆಯನ್ನು ತಪ್ಪಿಸಬಹುದಾಗಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ, ಅವರ ಹಕ್ಕುಗಳನ್ನು ರಕ್ಷಿಸಬೇಕಿದೆ ಎಂದರು.<br /> <br /> ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಮಾತನಾಡಿ, `ಶೇ 10ಕ್ಕಿಂತ ಕಡಿಮೆ ಮಕ್ಕಳನ್ನು ಹೊಂಡಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಉದ್ದೇಶಿಸಿರುವುದು ಸರಿಯಲ್ಲ. ಈ ಬಗೆಗೆ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು~ ಎಂದು ಹೇಳಿದರು.<br /> <br /> ಶಿಕ್ಷಕರು ವಿದ್ಯಾರ್ಥಿಗಳ ಬಗೆಗೆ ದ್ವೇಷ ಅಥವಾ ಅಸೂಯೆ ಹೊಂದಿರುವುದಿಲ್ಲ. ದಾರಿ ತಪ್ಪಿದಾಗ ಅಥವಾ ಕಲಿಕೆಯತ್ತ ಆಸಕ್ತಿ ವಹಿಸಲಿ ಎಂಬ ಉದ್ದೇಶದಿಂದ ಒಂದೆರಡು ಏಟು ನೀಡಬಹುದು. ಆದರೆ, ಈ ವಿಚಾರವನ್ನೇ ದೊಡ್ಡದ್ದು ಮಾಡಿ ಶಿಕ್ಷಕರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಾದ ಕ್ರಮವಲ್ಲ~ ಎಂದರು.<br /> <br /> ಮಂಡ್ಯ ಉತ್ತರ ವಲಯ ಬಿಇಒ ಕೆ.ಕೋದಂಡರಾಮ್, ಸರ್ವ ಶಿಕ್ಷಣ ಅಭಿಯಾನದ ಉಪ ಯೋಜನಾ ಸಮನ್ವಯಾಧಿಕಾರಿ ಧನಂಜಯ, ಭೀಮ್ ಸಂಸ್ಥೆಯ ಮಿಕ್ಕೆರೆ ವೆಂಕಟೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಆರರಿಂದ ಹದಿನಾಲ್ಕು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸಲು ಜಾರಿಗೆ ತಂದಿರುವ ಕಾಯಿದೆಯ ಫಲ ಪ್ರತಿಯೊಬ್ಬರಿಗೂ ದೊರಕಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ವಾಸುದೇವ ಶರ್ಮ ಅವರು ಹೇಳಿದರು.<br /> <br /> ನಗರದಲ್ಲಿ ಶುಕ್ರವಾರ ಬೆಂಗಳೂರಿನ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಮತ್ತು ಭೀಮ್ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ `ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ-2009~ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ಶಿಕ್ಷಣ ವಂಚಿತ ಮಕ್ಕಳಿಗೆ ಈ ಕಾಯಿದೆ ನೆರವಾಗಿದೆ. ಶಿಕ್ಷಣ ಎಲ್ಲ ತಾರತಮ್ಯವನ್ನು ನಿವಾರಿಸುವ ಸಾಧನವಾಗಿದ್ದು, ಮಕ್ಕಳ ಮೇಲಿನ ಅನ್ಯಾಯ ಮತ್ತು ಶೋಷಣೆಯನ್ನು ತಪ್ಪಿಸಬಹುದಾಗಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ, ಅವರ ಹಕ್ಕುಗಳನ್ನು ರಕ್ಷಿಸಬೇಕಿದೆ ಎಂದರು.<br /> <br /> ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಮಾತನಾಡಿ, `ಶೇ 10ಕ್ಕಿಂತ ಕಡಿಮೆ ಮಕ್ಕಳನ್ನು ಹೊಂಡಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಉದ್ದೇಶಿಸಿರುವುದು ಸರಿಯಲ್ಲ. ಈ ಬಗೆಗೆ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು~ ಎಂದು ಹೇಳಿದರು.<br /> <br /> ಶಿಕ್ಷಕರು ವಿದ್ಯಾರ್ಥಿಗಳ ಬಗೆಗೆ ದ್ವೇಷ ಅಥವಾ ಅಸೂಯೆ ಹೊಂದಿರುವುದಿಲ್ಲ. ದಾರಿ ತಪ್ಪಿದಾಗ ಅಥವಾ ಕಲಿಕೆಯತ್ತ ಆಸಕ್ತಿ ವಹಿಸಲಿ ಎಂಬ ಉದ್ದೇಶದಿಂದ ಒಂದೆರಡು ಏಟು ನೀಡಬಹುದು. ಆದರೆ, ಈ ವಿಚಾರವನ್ನೇ ದೊಡ್ಡದ್ದು ಮಾಡಿ ಶಿಕ್ಷಕರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಾದ ಕ್ರಮವಲ್ಲ~ ಎಂದರು.<br /> <br /> ಮಂಡ್ಯ ಉತ್ತರ ವಲಯ ಬಿಇಒ ಕೆ.ಕೋದಂಡರಾಮ್, ಸರ್ವ ಶಿಕ್ಷಣ ಅಭಿಯಾನದ ಉಪ ಯೋಜನಾ ಸಮನ್ವಯಾಧಿಕಾರಿ ಧನಂಜಯ, ಭೀಮ್ ಸಂಸ್ಥೆಯ ಮಿಕ್ಕೆರೆ ವೆಂಕಟೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>