<p><strong>ಬಳ್ಳಾರಿ: </strong>ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ 2006ರ ವೃತ್ತಿ ಶಿಕ್ಷಣ ಕಾಯ್ದೆಯನ್ನು ವಿರೋಧಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.<br /> <br /> ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಶಿಕ್ಷಣ ಪಡೆಯಲು ಇರುವ ಮೆರಿಟ್ ಹಾಗೂ ಸರ್ಕಾರಿ ಕೋಟಾ ರದ್ದುಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆತಡೆ ನಡೆಸಿದ ವಿವಿಧ ಕಾಲೇಜುಗಳ ಪದವಿಪೂರ್ವ ವಿಭಾಗದ ನೂರಾರು ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿ ವಿರೋಧಿಯಾಗಿರುವ ಕಾಯ್ದೆ ಜಾರಿಗೊಳಿಸಬಾರದು ಎಂದು ಕೋರಿ ಕಾಯ್ದೆಯ ಪ್ರತಿಕೃತಿ ದಹಿಸಿದರು.<br /> <br /> ಈ ಕಾಯ್ದೆ ಜಾರಿಯಾದಲ್ಲಿ ಬಡ, ಮಧ್ಯಮ ವರ್ಗಗಳ ವಿದ್ಯಾರ್ಥಿಗಳು ವೈದ್ಯಕೀಯ, ಎಂಜಿನಿಯರಿಂಗ್, ದಂತ ವೈದ್ಯಕೀಯ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವುದೇ ದುಸ್ತರವಾಗಲಿದೆ. ಇದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗಲಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ.ಪ್ರಮೋದ್ ತಿಳಿಸಿದರು.<br /> <br /> ವೃತ್ತಿ ಶಿಕ್ಷಣ ಕೋರ್ಸ್ಗೆ ಸಂಬಂಧಿಸಿದಂತೆ ದೇಶದಲ್ಲೇ ಮಾದರಿಯಾಗರುವ ಕರ್ನಾಟಕದಲ್ಲಿ, ಸಿಇಟಿ ಪದ್ಧತಿ ಮೂಲಕ ಮೆರಿಟ್ ಹಾಗೂ ಸರ್ಕಾರಿ ಕೋಟಾ ಇರುವುದು ಅನೇಕರಿಗೆ ಸಹಕಾರಯಾಗಿದೆ. ನೂತನ ಕಾಯ್ದೆ ಜಾರಿಯಾದಲ್ಲಿ ಬಡವರು ವೃತ್ತಿ ಶಿಕ್ಷಣದಿಂದ ವಂಚಿತರಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಪದ್ಧತಿಯನ್ನೇ ಮುಂದುವರಿಸಬೇಕು ಎಂದು ಕೋರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.<br /> <br /> ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ್, ಕಾರ್ಯದರ್ಶಿ ಸುರೇಶ್, ಸೇತುಮಾಧವ, ರಘು, ರಫಿಕ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ 2006ರ ವೃತ್ತಿ ಶಿಕ್ಷಣ ಕಾಯ್ದೆಯನ್ನು ವಿರೋಧಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.<br /> <br /> ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಶಿಕ್ಷಣ ಪಡೆಯಲು ಇರುವ ಮೆರಿಟ್ ಹಾಗೂ ಸರ್ಕಾರಿ ಕೋಟಾ ರದ್ದುಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆತಡೆ ನಡೆಸಿದ ವಿವಿಧ ಕಾಲೇಜುಗಳ ಪದವಿಪೂರ್ವ ವಿಭಾಗದ ನೂರಾರು ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿ ವಿರೋಧಿಯಾಗಿರುವ ಕಾಯ್ದೆ ಜಾರಿಗೊಳಿಸಬಾರದು ಎಂದು ಕೋರಿ ಕಾಯ್ದೆಯ ಪ್ರತಿಕೃತಿ ದಹಿಸಿದರು.<br /> <br /> ಈ ಕಾಯ್ದೆ ಜಾರಿಯಾದಲ್ಲಿ ಬಡ, ಮಧ್ಯಮ ವರ್ಗಗಳ ವಿದ್ಯಾರ್ಥಿಗಳು ವೈದ್ಯಕೀಯ, ಎಂಜಿನಿಯರಿಂಗ್, ದಂತ ವೈದ್ಯಕೀಯ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವುದೇ ದುಸ್ತರವಾಗಲಿದೆ. ಇದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗಲಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ.ಪ್ರಮೋದ್ ತಿಳಿಸಿದರು.<br /> <br /> ವೃತ್ತಿ ಶಿಕ್ಷಣ ಕೋರ್ಸ್ಗೆ ಸಂಬಂಧಿಸಿದಂತೆ ದೇಶದಲ್ಲೇ ಮಾದರಿಯಾಗರುವ ಕರ್ನಾಟಕದಲ್ಲಿ, ಸಿಇಟಿ ಪದ್ಧತಿ ಮೂಲಕ ಮೆರಿಟ್ ಹಾಗೂ ಸರ್ಕಾರಿ ಕೋಟಾ ಇರುವುದು ಅನೇಕರಿಗೆ ಸಹಕಾರಯಾಗಿದೆ. ನೂತನ ಕಾಯ್ದೆ ಜಾರಿಯಾದಲ್ಲಿ ಬಡವರು ವೃತ್ತಿ ಶಿಕ್ಷಣದಿಂದ ವಂಚಿತರಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಪದ್ಧತಿಯನ್ನೇ ಮುಂದುವರಿಸಬೇಕು ಎಂದು ಕೋರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.<br /> <br /> ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ್, ಕಾರ್ಯದರ್ಶಿ ಸುರೇಶ್, ಸೇತುಮಾಧವ, ರಘು, ರಫಿಕ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>