<p>ರಾಜರಾಜೇಶ್ವರಿನಗರ: `ಶಿಕ್ಷಣ ಎಂದರೆ ಕೇವಲ ಓದು ಬರಹಗಳಷ್ಟೇ ಅಲ್ಲ; ಅದು ಒಬ್ಬ ವ್ಯಕ್ತಿಯ ವಿಕಸನದ ದಾರಿಯಾಗಬೇಕು~ ಎಂದು ಕಲಾವಿದ ಬಿ.ಕೆ.ಎಸ್.ವರ್ಮ ಅಭಿಪ್ರಾಯ ಪಟ್ಟರು.<br /> <br /> ಕೊಬಾಲ್ಟ್ ಕಲಾ ಸಂಸ್ಥೆಯ 5ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> `ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಣದ ಜತೆ ಕಲೆ ಸಂಸ್ಕೃತಿಗಳೂ ಅವಶ್ಯ~ ಎಂದು ಅವರು ಈಸಂದರ್ಭದಲ್ಲಿ ಹೇಳಿದರು.<br /> <br /> ಚಿತ್ರನಟ ರಾಮಕೃಷ್ಣ ಬಹುಮಾನ ವಿತರಿಸಿ ಮಾತನಾಡಿದರು. ಕಾಂಗ್ರೆಸ್ನ ರಾಜರಾಜೇಶ್ವರಿನಗರ ಬ್ಲಾಕ್ ಅಧ್ಯಕ್ಷ ಎಂ.ರಾಜಕುಮಾರ್ ಅಧ್ಯಕ್ಷತೆ ವಹಿಸಿದ್ದರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಎಸ್.ಐ.ಬಾವಿಕಟ್ಟಿ, ಸಂಸ್ಥೆಯ ಸ್ಥಾಪಕ ಗಣಪತಿ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಐದು ಮಕ್ಕಳಿಗೆ ಕೊಬಾಲ್ಟ್ ಪ್ರಶಸ್ತಿ ಗಳನ್ನು ನೀಡಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜರಾಜೇಶ್ವರಿನಗರ: `ಶಿಕ್ಷಣ ಎಂದರೆ ಕೇವಲ ಓದು ಬರಹಗಳಷ್ಟೇ ಅಲ್ಲ; ಅದು ಒಬ್ಬ ವ್ಯಕ್ತಿಯ ವಿಕಸನದ ದಾರಿಯಾಗಬೇಕು~ ಎಂದು ಕಲಾವಿದ ಬಿ.ಕೆ.ಎಸ್.ವರ್ಮ ಅಭಿಪ್ರಾಯ ಪಟ್ಟರು.<br /> <br /> ಕೊಬಾಲ್ಟ್ ಕಲಾ ಸಂಸ್ಥೆಯ 5ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> `ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಣದ ಜತೆ ಕಲೆ ಸಂಸ್ಕೃತಿಗಳೂ ಅವಶ್ಯ~ ಎಂದು ಅವರು ಈಸಂದರ್ಭದಲ್ಲಿ ಹೇಳಿದರು.<br /> <br /> ಚಿತ್ರನಟ ರಾಮಕೃಷ್ಣ ಬಹುಮಾನ ವಿತರಿಸಿ ಮಾತನಾಡಿದರು. ಕಾಂಗ್ರೆಸ್ನ ರಾಜರಾಜೇಶ್ವರಿನಗರ ಬ್ಲಾಕ್ ಅಧ್ಯಕ್ಷ ಎಂ.ರಾಜಕುಮಾರ್ ಅಧ್ಯಕ್ಷತೆ ವಹಿಸಿದ್ದರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಎಸ್.ಐ.ಬಾವಿಕಟ್ಟಿ, ಸಂಸ್ಥೆಯ ಸ್ಥಾಪಕ ಗಣಪತಿ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಐದು ಮಕ್ಕಳಿಗೆ ಕೊಬಾಲ್ಟ್ ಪ್ರಶಸ್ತಿ ಗಳನ್ನು ನೀಡಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>