<p>ರಾಯಚೂರು: ಶಿಕ್ಷಣ ವೃತ್ತಿಯನ್ನು ಇಷ್ಟಪಡುವುದರೊಂದಿಗೆ ಅದನ್ನು ಆರಾಧಿಸಿ ಭಕ್ತಿಯಿಂದ ಪೂಜಿಸುವವರೇ ಉತ್ತಮ ಶಿಕ್ಷಕರು. ಶಿಕ್ಷಕರ ನಡೆ ನುಡಿ ಶುದ್ಧವಾಗಿರಬೇಕು ಅಂದಾಗ ಮಾತ್ರ ಆದರ್ಶ ಶಿಕ್ಷಕನಾಗಲು ಸಾಧ್ಯ ಎಂದು ಸಿಂಧನೂರಿನ ಆರ್.ಜಿ.ಎಂ. ಮಹಾವಿದ್ಯಾಲಯದ ಉಪನ್ಯಾಸಕಿ ಡಾ. ಮಧುಮತಿ ದೇಶಪಾಂಡೆ ಹೇಳಿದರು.<br /> <br /> ಇಲ್ಲಿನ ಟ್ಯಾಗೋರ ಶಿಕ್ಷಣ ಸಂಸ್ಥೆಯ ಎಸ್.ಆರ್.ಕೆ. ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಸಮಾರಂಭ ಉದ್ಘಾಟಿಸಿ ಮಾತನಾಡಿದರು.<br /> <br /> ಸಮುದಾಯಕ್ಕೆ ಸಂಸ್ಕಾರ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಯುವ ಶಿಕ್ಷಕ ವೃಂದದಲ್ಲಿ ಓದು ಬರಹ ಹವ್ಯಾಸ ಕಡಿಮೆ ಆಗುತ್ತಿದೆ. ಇದಕ್ಕೆ ಏನೇ ಕಾರಣಗಳಿದ್ದರೂ ಓದುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.<br /> <br /> ಭಾರತೀಯ ಗುರುವಿನ ಕಣ್ಣಲ್ಲಿ ಮ್ಯಾಜಿಕ್ ಇದೆ. ಆ ಗುರುವಿನ ಕಂಠದಲ್ಲಿ ಮಧುರತೆ ಇದೆ ಎಂದು ಪಾಶ್ಚಿಮಾತ್ಯ ಶಿಕ್ಷಣ ತಜ್ಞರೇ ಹೇಳಿದ್ದಾರೆ. ಈ ಮಾತು ಶಿಕ್ಷಕ ಸಮುದಾಯದ ಜವಾಬ್ದಾರಿ ಹೆಚ್ಚಿಸಿದೆ ಎಂದು ಹೇಳಿದರು.<br /> <br /> ಆಳವಾದ ಅಧ್ಯಯನ, ಸೂಕ್ತ ಉದಾಹರಣೆಗಳೊಂದಿಗೆ ಬೋಧನೆ ಮಾಡಿದಾಗ ಮಕ್ಕಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದು ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಪಾಪರೆಡ್ಡಿ ಹೇಳಿದರು.<br /> <br /> ಸಂಸ್ಥೆಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಮಾಚನೂರು, ಬಿ.ಗೋಪಾಲರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್.ಕೆ ಅಮರೇಶ, ಖಜಾಂಚಿ ಸಂಜಯಕುಮಾರ ಜೈನ್, ಸದಸ್ಯ ಭೀಮನಗೌಡ ಇಟಗಿ, ಪ್ರಾಚಾರ್ಯರಾದ ಆಶಾ ಪ್ರೇಮಲತಾ, ಬಿಇಡಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ಎಸ್ ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಶಿಕ್ಷಣ ವೃತ್ತಿಯನ್ನು ಇಷ್ಟಪಡುವುದರೊಂದಿಗೆ ಅದನ್ನು ಆರಾಧಿಸಿ ಭಕ್ತಿಯಿಂದ ಪೂಜಿಸುವವರೇ ಉತ್ತಮ ಶಿಕ್ಷಕರು. ಶಿಕ್ಷಕರ ನಡೆ ನುಡಿ ಶುದ್ಧವಾಗಿರಬೇಕು ಅಂದಾಗ ಮಾತ್ರ ಆದರ್ಶ ಶಿಕ್ಷಕನಾಗಲು ಸಾಧ್ಯ ಎಂದು ಸಿಂಧನೂರಿನ ಆರ್.ಜಿ.ಎಂ. ಮಹಾವಿದ್ಯಾಲಯದ ಉಪನ್ಯಾಸಕಿ ಡಾ. ಮಧುಮತಿ ದೇಶಪಾಂಡೆ ಹೇಳಿದರು.<br /> <br /> ಇಲ್ಲಿನ ಟ್ಯಾಗೋರ ಶಿಕ್ಷಣ ಸಂಸ್ಥೆಯ ಎಸ್.ಆರ್.ಕೆ. ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಸಮಾರಂಭ ಉದ್ಘಾಟಿಸಿ ಮಾತನಾಡಿದರು.<br /> <br /> ಸಮುದಾಯಕ್ಕೆ ಸಂಸ್ಕಾರ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಯುವ ಶಿಕ್ಷಕ ವೃಂದದಲ್ಲಿ ಓದು ಬರಹ ಹವ್ಯಾಸ ಕಡಿಮೆ ಆಗುತ್ತಿದೆ. ಇದಕ್ಕೆ ಏನೇ ಕಾರಣಗಳಿದ್ದರೂ ಓದುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.<br /> <br /> ಭಾರತೀಯ ಗುರುವಿನ ಕಣ್ಣಲ್ಲಿ ಮ್ಯಾಜಿಕ್ ಇದೆ. ಆ ಗುರುವಿನ ಕಂಠದಲ್ಲಿ ಮಧುರತೆ ಇದೆ ಎಂದು ಪಾಶ್ಚಿಮಾತ್ಯ ಶಿಕ್ಷಣ ತಜ್ಞರೇ ಹೇಳಿದ್ದಾರೆ. ಈ ಮಾತು ಶಿಕ್ಷಕ ಸಮುದಾಯದ ಜವಾಬ್ದಾರಿ ಹೆಚ್ಚಿಸಿದೆ ಎಂದು ಹೇಳಿದರು.<br /> <br /> ಆಳವಾದ ಅಧ್ಯಯನ, ಸೂಕ್ತ ಉದಾಹರಣೆಗಳೊಂದಿಗೆ ಬೋಧನೆ ಮಾಡಿದಾಗ ಮಕ್ಕಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದು ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಪಾಪರೆಡ್ಡಿ ಹೇಳಿದರು.<br /> <br /> ಸಂಸ್ಥೆಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಮಾಚನೂರು, ಬಿ.ಗೋಪಾಲರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್.ಕೆ ಅಮರೇಶ, ಖಜಾಂಚಿ ಸಂಜಯಕುಮಾರ ಜೈನ್, ಸದಸ್ಯ ಭೀಮನಗೌಡ ಇಟಗಿ, ಪ್ರಾಚಾರ್ಯರಾದ ಆಶಾ ಪ್ರೇಮಲತಾ, ಬಿಇಡಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ಎಸ್ ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>