<p><strong>ನವದೆಹಲಿ (ಪಿಟಿಐ): </strong> ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಲ್ಲಿ ಸುತ್ತಲಿನ ಪರಿಸರದ ಬಡಮಕ್ಕಳಿಗೆ ಕಡ್ಡಾಯವಾಗಿ ಶೇ 25ರಷ್ಟು ಸೀಟು ಮೀಸಲಿಡುವ ಶಿಕ್ಷಣ ಹಕ್ಕು ಕಾಯ್ದೆ (ಆರ್ಇಟಿ)ಯ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.<br /> <br /> ಈ ಕಾಯ್ದೆ ದೇಶದಾದ್ಯಂತ ಅನುದಾನರಹಿತ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಸರ್ಕಾರಿ ಶಾಲೆಗಳು, ಅನುದಾನರಹಿತ ಖಾಸಗಿ ಶಾಲೆಗಳಿಗೆ ಏಕರೂಪದಲ್ಲಿ ಅನ್ವಯವಾಗುತ್ತದೆ ಎಂದು ಹೇಳಿದೆ.<br /> <br /> `ಶಿಕ್ಷಣ ಹಕ್ಕು ಕಾಯ್ದೆ-2009~ರ ಸಿಂಧುತ್ವ ಎತ್ತಿಹಿಡಿದು, ಸುಪ್ರೀಂಕೋಟ್ ಮುಖ್ಯ ನ್ಯಾಯಮೂರ್ತಿ ಎಸ್. ಎಚ್. ಕಪಾಡಿಯಾ ನೇತೃತ್ವದ ನ್ಯಾಯಪೀಠ ಗುರುವಾರ ಬಹುಮತದ ತೀರ್ಪು ನೀಡಿದೆ.<br /> <br /> ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ಮತ್ತು ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ಈ ಕಾಯ್ದೆಯಿಂದ ಅನುದಾನರಹಿತ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಮಾತ್ರ ಹೊರಗಿಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. <br /> <br /> ಆದರೆ, ನ್ಯಾಯಮೂರ್ತಿ ಕೆ. ಎಸ್. ರಾಧಾಕೃಷ್ಣನ್ ಖಾಸಗಿ ಅನುದಾನರಹಿತ ಶಾಲೆಗಳನ್ನು ಸಹ ಕಾಯ್ದೆ ವ್ಯಾಪ್ತಿಯಿಂದ ಹೊರಗೆ ಇಡಬೇಕು ಎಂದು ಹೇಳಿದರು. ಅಂತಿಮವಾಗಿ ನ್ಯಾಯಪೀಠ ಬಹುಮತದ ತೀರ್ಪು ಪ್ರಕಟಿಸಿತು.<br /> <br /> ಈ ತೀರ್ಪು ಗುರುವಾರದಿಂದಲೇ ಜಾರಿಯಲ್ಲಿ ಬರಲಿದೆ. ಶಿಕ್ಷಣ ಹಕ್ಕು ಕಾಯ್ದೆ ರೂಪುಗೊಂಡ ದಿನದಿಂದ ಪೂರ್ವಾನ್ವಯವಾಗುವುದಿಲ್ಲ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿತು.<br /> <br /> ಶಿಕ್ಷಣ ಹಕ್ಕು ಕಾಯ್ದೆಯಲ್ಲಿನ ಕೆಲ ಅಂಶಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾಲುಸಾಲು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಪೀಠ, ಕಳೆದ ವರ್ಷದ ಆಗಸ್ಟ್ 3ರಂದು ತೀರ್ಪು ಕಾಯ್ದಿರಿಸಿತ್ತು.<br /> <br /> ಶಿಕ್ಷಣ ಹಕ್ಕು ಕಾಯ್ದೆಯ 3ನೇ ಕಲಂ ಅನ್ವಯ, ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಹಾಗೂ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಶಾಲೆಗಳು, ಆಯಾ ಶಾಲೆಗಳಲ್ಲಿ ದಾಖಲಾತಿ ಬಯಸುವ ತಮ್ಮ ನೆರೆಹೊರೆಯ ಪ್ರದೇಶದ ಮಕ್ಕಳಿಗೆ ಕಡ್ಡಾಯವಾಗಿ ಪ್ರವೇಶ ನೀಡಬೇಕಿತ್ತು. <br /> <br /> `ಸಂವಿಧಾನದ 19 (1) (ಜಿ) ವಿಧಿಯಡಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೀಡಲಾದ ಸ್ವಾಯತ್ತತೆಗೆ `ಆರ್ಇಟಿ~ ಅಡ್ಡಿಯಾಗುತ್ತದೆ. `ಆರ್ಇಟಿ~ ಅಸಾಂವಿಧಾನಿಕವಾಗಿದ್ದು, ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ~ ಎಂದು ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ವಾದಿಸಿದ್ದವು.<br /> <br /> ಕಾಯ್ದೆ ಪರವಾಗಿ ವಾದಿಸಿದ್ದ ಕೇಂದ್ರ ಸರ್ಕಾರ, `ಸಮಾಜದ ವಿವಿಧ ವರ್ಗಗಳ ನಡುವೆ ಇರುವ ಪ್ರತಿಭೆ ಮತ್ತು ಅರ್ಹತೆಯ ಅಂತರವನ್ನು ಅಳಿಸಿಹಾಕಬೇಕಿದೆ. ಒಂದೇ ಹಿನ್ನೆಲೆಯಿಂದ ಬಂದ ಮಕ್ಕಳು ಕಲಿಯುವ ಪ್ರತ್ಯೇಕ ಶಾಲೆಗಳ ಬದಲಾಗಿ ವಿಭಿನ್ನ ಹಿನ್ನೆಲೆಯ ಮಕ್ಕಳನ್ನು ಒಳಗೊಂಡ ವೈವಿಧ್ಯಮಯ ತರಗತಿಗಳನ್ನು ಹೊಂದಬೇಕಾಗಿದೆ~ ಎಂದು ಹೇಳಿತ್ತು.</p>.<p><strong>ರಾಜ್ಯದಲ್ಲಿ ಜಾರಿಗೆ ಸಂಪುಟ ಅಸ್ತು<br /> ಬೆಂಗಳೂರು:</strong> ಕೇಂದ್ರ ಸರ್ಕಾರ ಎರಡು ವರ್ಷಗಳ ಹಿಂದೆ ಜಾರಿ ಮಾಡಿರುವ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೊಳಿಸುವ ಸಂಬಂಧ ರೂಪಿಸಿರುವ ನಿಯಮಗಳಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ವರ್ಷದಿಂದಲೇ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ.<br /> <br /> ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಸಭೆ ಶಿಕ್ಷಣ ಇಲಾಖೆ ರೂಪಿಸಿರುವ ನಿಯಮಗಳಿಗೆ ಅನುಮೋದನೆ ನೀಡಿದೆ. `ಇನ್ನು ಮುಂದೆ ಗುಣಮಟ್ಟದ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕುಗಳಲ್ಲಿ ಒಂದಾಗಲಿದೆ~ ಎಂದು ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong> ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಲ್ಲಿ ಸುತ್ತಲಿನ ಪರಿಸರದ ಬಡಮಕ್ಕಳಿಗೆ ಕಡ್ಡಾಯವಾಗಿ ಶೇ 25ರಷ್ಟು ಸೀಟು ಮೀಸಲಿಡುವ ಶಿಕ್ಷಣ ಹಕ್ಕು ಕಾಯ್ದೆ (ಆರ್ಇಟಿ)ಯ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.<br /> <br /> ಈ ಕಾಯ್ದೆ ದೇಶದಾದ್ಯಂತ ಅನುದಾನರಹಿತ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಸರ್ಕಾರಿ ಶಾಲೆಗಳು, ಅನುದಾನರಹಿತ ಖಾಸಗಿ ಶಾಲೆಗಳಿಗೆ ಏಕರೂಪದಲ್ಲಿ ಅನ್ವಯವಾಗುತ್ತದೆ ಎಂದು ಹೇಳಿದೆ.<br /> <br /> `ಶಿಕ್ಷಣ ಹಕ್ಕು ಕಾಯ್ದೆ-2009~ರ ಸಿಂಧುತ್ವ ಎತ್ತಿಹಿಡಿದು, ಸುಪ್ರೀಂಕೋಟ್ ಮುಖ್ಯ ನ್ಯಾಯಮೂರ್ತಿ ಎಸ್. ಎಚ್. ಕಪಾಡಿಯಾ ನೇತೃತ್ವದ ನ್ಯಾಯಪೀಠ ಗುರುವಾರ ಬಹುಮತದ ತೀರ್ಪು ನೀಡಿದೆ.<br /> <br /> ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ಮತ್ತು ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ಈ ಕಾಯ್ದೆಯಿಂದ ಅನುದಾನರಹಿತ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಮಾತ್ರ ಹೊರಗಿಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. <br /> <br /> ಆದರೆ, ನ್ಯಾಯಮೂರ್ತಿ ಕೆ. ಎಸ್. ರಾಧಾಕೃಷ್ಣನ್ ಖಾಸಗಿ ಅನುದಾನರಹಿತ ಶಾಲೆಗಳನ್ನು ಸಹ ಕಾಯ್ದೆ ವ್ಯಾಪ್ತಿಯಿಂದ ಹೊರಗೆ ಇಡಬೇಕು ಎಂದು ಹೇಳಿದರು. ಅಂತಿಮವಾಗಿ ನ್ಯಾಯಪೀಠ ಬಹುಮತದ ತೀರ್ಪು ಪ್ರಕಟಿಸಿತು.<br /> <br /> ಈ ತೀರ್ಪು ಗುರುವಾರದಿಂದಲೇ ಜಾರಿಯಲ್ಲಿ ಬರಲಿದೆ. ಶಿಕ್ಷಣ ಹಕ್ಕು ಕಾಯ್ದೆ ರೂಪುಗೊಂಡ ದಿನದಿಂದ ಪೂರ್ವಾನ್ವಯವಾಗುವುದಿಲ್ಲ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿತು.<br /> <br /> ಶಿಕ್ಷಣ ಹಕ್ಕು ಕಾಯ್ದೆಯಲ್ಲಿನ ಕೆಲ ಅಂಶಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾಲುಸಾಲು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಪೀಠ, ಕಳೆದ ವರ್ಷದ ಆಗಸ್ಟ್ 3ರಂದು ತೀರ್ಪು ಕಾಯ್ದಿರಿಸಿತ್ತು.<br /> <br /> ಶಿಕ್ಷಣ ಹಕ್ಕು ಕಾಯ್ದೆಯ 3ನೇ ಕಲಂ ಅನ್ವಯ, ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಹಾಗೂ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಶಾಲೆಗಳು, ಆಯಾ ಶಾಲೆಗಳಲ್ಲಿ ದಾಖಲಾತಿ ಬಯಸುವ ತಮ್ಮ ನೆರೆಹೊರೆಯ ಪ್ರದೇಶದ ಮಕ್ಕಳಿಗೆ ಕಡ್ಡಾಯವಾಗಿ ಪ್ರವೇಶ ನೀಡಬೇಕಿತ್ತು. <br /> <br /> `ಸಂವಿಧಾನದ 19 (1) (ಜಿ) ವಿಧಿಯಡಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೀಡಲಾದ ಸ್ವಾಯತ್ತತೆಗೆ `ಆರ್ಇಟಿ~ ಅಡ್ಡಿಯಾಗುತ್ತದೆ. `ಆರ್ಇಟಿ~ ಅಸಾಂವಿಧಾನಿಕವಾಗಿದ್ದು, ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ~ ಎಂದು ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ವಾದಿಸಿದ್ದವು.<br /> <br /> ಕಾಯ್ದೆ ಪರವಾಗಿ ವಾದಿಸಿದ್ದ ಕೇಂದ್ರ ಸರ್ಕಾರ, `ಸಮಾಜದ ವಿವಿಧ ವರ್ಗಗಳ ನಡುವೆ ಇರುವ ಪ್ರತಿಭೆ ಮತ್ತು ಅರ್ಹತೆಯ ಅಂತರವನ್ನು ಅಳಿಸಿಹಾಕಬೇಕಿದೆ. ಒಂದೇ ಹಿನ್ನೆಲೆಯಿಂದ ಬಂದ ಮಕ್ಕಳು ಕಲಿಯುವ ಪ್ರತ್ಯೇಕ ಶಾಲೆಗಳ ಬದಲಾಗಿ ವಿಭಿನ್ನ ಹಿನ್ನೆಲೆಯ ಮಕ್ಕಳನ್ನು ಒಳಗೊಂಡ ವೈವಿಧ್ಯಮಯ ತರಗತಿಗಳನ್ನು ಹೊಂದಬೇಕಾಗಿದೆ~ ಎಂದು ಹೇಳಿತ್ತು.</p>.<p><strong>ರಾಜ್ಯದಲ್ಲಿ ಜಾರಿಗೆ ಸಂಪುಟ ಅಸ್ತು<br /> ಬೆಂಗಳೂರು:</strong> ಕೇಂದ್ರ ಸರ್ಕಾರ ಎರಡು ವರ್ಷಗಳ ಹಿಂದೆ ಜಾರಿ ಮಾಡಿರುವ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೊಳಿಸುವ ಸಂಬಂಧ ರೂಪಿಸಿರುವ ನಿಯಮಗಳಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ವರ್ಷದಿಂದಲೇ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ.<br /> <br /> ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಸಭೆ ಶಿಕ್ಷಣ ಇಲಾಖೆ ರೂಪಿಸಿರುವ ನಿಯಮಗಳಿಗೆ ಅನುಮೋದನೆ ನೀಡಿದೆ. `ಇನ್ನು ಮುಂದೆ ಗುಣಮಟ್ಟದ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕುಗಳಲ್ಲಿ ಒಂದಾಗಲಿದೆ~ ಎಂದು ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>