<p><strong>ತುರುವೇಕೆರೆ: </strong>ತಾಲ್ಲೂಕಿನ ಮಾಯಸಂದ್ರದ ಆದಿಚುಂಚನಗಿರಿ ಶಾಖಾ ಮಠ ಕಲ್ಪತರು ಆಶ್ರಮದ ಶಿವಕುಮಾರನಾಥ ಸ್ವಾಮೀಜಿ (56) ಭಾನುವಾರ ಹೃದಯಾಘಾತದಿಂದ ವಿಧಿವಶರಾದರು.<br /> <br /> ಭಾನುವಾರ ಮುಂಜಾನೆ ಸ್ವಾಮೀಜಿ ಆಶ್ರಮದಲ್ಲಿ ದೈನಂದಿನ ಧಾರ್ಮಿಕ ವಿಧಿವಿಧಾನ ಮುಗಿಸಿ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದರು.<br /> <br /> ಬೆಂಗಳೂರು ಜಾಲಹಳ್ಳಿ ಸಮೀಪ ಪ್ರಯಾಣಿಸುವಾಗ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಸ್ವಾಮೀಜಿ ಬೆಳಿಗ್ಗೆ 11 ಗಂಟೆಯಲ್ಲಿ ಇಹಲೋಕ ತ್ಯಜಿಸಿದರು. ಸಂಜೆ ಆದಿಚುಂಚನಗಿರಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.<br /> <br /> ನಾಗಮಂಗಲ ತಾಲ್ಲೂಕು ಬೆಟ್ಟದ ಮಲ್ಲೇನಹಳ್ಳಿಯಲ್ಲಿ 1957ರಲ್ಲಿ ಹಲಗೇಗೌಡ–ಸೀತಮ್ಮ ದಂಪತಿಯ ನಾಲ್ಕನೇ ಪುತ್ರನಾಗಿ ಶಿವಕುಮಾರನಾಥ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಬಿ.ಎಚ್.ಈರಣ್ಣಗೌಡ) ಜನಿಸಿದರು.<br /> <br /> ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಲ್ಲಿ, ಪ್ರೌಢಶಿಕ್ಷಣವನ್ನು ಆದಿಚುಂಚನಗಿರಿಯಲ್ಲಿ ಪಡೆದರು. ಮಠದ ಸಂಪರ್ಕದಲ್ಲಿದ್ದ ಅವರು, ಔಪಚಾರಿಕ ಶಿಕ್ಷಣದ ಜತೆಗೆ ವೇದ, ಸಂಸ್ಕೃತ ಅಧ್ಯಯನ ಮಾಡಿದರು. ಅಲ್ಲೇ ಸಂಸ್ಕತ ಶಿಕ್ಷಕರಾಗಿ ವೃತ್ತಿಜೀವನ ಆರಂಭಿಸಿದರು.<br /> <br /> ಆದಿಚುಂಚನಗಿರಿ ಮಠದ ಹಿಂದಿನ ಪೀಠಾಧ್ಯಕ್ಷ ಬಾಲಗಂಗಾಧರನಾಥ ಸ್ವಾಮಿಜಿ ಪ್ರಭಾವಕ್ಕೆ ಒಳಗಾಗಿ ತಮ್ಮ 23ನೇ ವಯಸ್ಸಿನಲ್ಲಿ ನಾಥಪಂಥ ದೀಕ್ಷೆ ಸ್ವೀಕರಿಸಿದರು. 1980ರಲ್ಲಿ ಚುಂಚನಗಿರಿ ಶಾಖಾ ಮಠವಾದ ಮಾಯಸಂದ್ರ ಕಲ್ಪತರು ಆಶ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ಹೊತ್ತರು. ಸಮರ್ಥ ನಿರ್ವಹಣೆಯೊಂದಿಗೆ ಆ ಶಾಖೆಯ ಮುಖ್ಯಸ್ಥರೂ ಆದರು. ಕೃಷಿ, ಶಿಕ್ಷಣ, ಸಮಾಜ ಸೇವೆಗೆ ಸ್ವಾಮೀಜಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇವರ ಸೇವೆ ಗುರುತಿಸಿ ರಾಜ್ಯ ಸರ್ಕಾರ 1991ರಲ್ಲೇ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ: </strong>ತಾಲ್ಲೂಕಿನ ಮಾಯಸಂದ್ರದ ಆದಿಚುಂಚನಗಿರಿ ಶಾಖಾ ಮಠ ಕಲ್ಪತರು ಆಶ್ರಮದ ಶಿವಕುಮಾರನಾಥ ಸ್ವಾಮೀಜಿ (56) ಭಾನುವಾರ ಹೃದಯಾಘಾತದಿಂದ ವಿಧಿವಶರಾದರು.<br /> <br /> ಭಾನುವಾರ ಮುಂಜಾನೆ ಸ್ವಾಮೀಜಿ ಆಶ್ರಮದಲ್ಲಿ ದೈನಂದಿನ ಧಾರ್ಮಿಕ ವಿಧಿವಿಧಾನ ಮುಗಿಸಿ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದರು.<br /> <br /> ಬೆಂಗಳೂರು ಜಾಲಹಳ್ಳಿ ಸಮೀಪ ಪ್ರಯಾಣಿಸುವಾಗ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಸ್ವಾಮೀಜಿ ಬೆಳಿಗ್ಗೆ 11 ಗಂಟೆಯಲ್ಲಿ ಇಹಲೋಕ ತ್ಯಜಿಸಿದರು. ಸಂಜೆ ಆದಿಚುಂಚನಗಿರಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.<br /> <br /> ನಾಗಮಂಗಲ ತಾಲ್ಲೂಕು ಬೆಟ್ಟದ ಮಲ್ಲೇನಹಳ್ಳಿಯಲ್ಲಿ 1957ರಲ್ಲಿ ಹಲಗೇಗೌಡ–ಸೀತಮ್ಮ ದಂಪತಿಯ ನಾಲ್ಕನೇ ಪುತ್ರನಾಗಿ ಶಿವಕುಮಾರನಾಥ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಬಿ.ಎಚ್.ಈರಣ್ಣಗೌಡ) ಜನಿಸಿದರು.<br /> <br /> ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಲ್ಲಿ, ಪ್ರೌಢಶಿಕ್ಷಣವನ್ನು ಆದಿಚುಂಚನಗಿರಿಯಲ್ಲಿ ಪಡೆದರು. ಮಠದ ಸಂಪರ್ಕದಲ್ಲಿದ್ದ ಅವರು, ಔಪಚಾರಿಕ ಶಿಕ್ಷಣದ ಜತೆಗೆ ವೇದ, ಸಂಸ್ಕೃತ ಅಧ್ಯಯನ ಮಾಡಿದರು. ಅಲ್ಲೇ ಸಂಸ್ಕತ ಶಿಕ್ಷಕರಾಗಿ ವೃತ್ತಿಜೀವನ ಆರಂಭಿಸಿದರು.<br /> <br /> ಆದಿಚುಂಚನಗಿರಿ ಮಠದ ಹಿಂದಿನ ಪೀಠಾಧ್ಯಕ್ಷ ಬಾಲಗಂಗಾಧರನಾಥ ಸ್ವಾಮಿಜಿ ಪ್ರಭಾವಕ್ಕೆ ಒಳಗಾಗಿ ತಮ್ಮ 23ನೇ ವಯಸ್ಸಿನಲ್ಲಿ ನಾಥಪಂಥ ದೀಕ್ಷೆ ಸ್ವೀಕರಿಸಿದರು. 1980ರಲ್ಲಿ ಚುಂಚನಗಿರಿ ಶಾಖಾ ಮಠವಾದ ಮಾಯಸಂದ್ರ ಕಲ್ಪತರು ಆಶ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ಹೊತ್ತರು. ಸಮರ್ಥ ನಿರ್ವಹಣೆಯೊಂದಿಗೆ ಆ ಶಾಖೆಯ ಮುಖ್ಯಸ್ಥರೂ ಆದರು. ಕೃಷಿ, ಶಿಕ್ಷಣ, ಸಮಾಜ ಸೇವೆಗೆ ಸ್ವಾಮೀಜಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇವರ ಸೇವೆ ಗುರುತಿಸಿ ರಾಜ್ಯ ಸರ್ಕಾರ 1991ರಲ್ಲೇ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>