<p><strong>ಶಿವಮೊಗ್ಗ:</strong> ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಭಾಗಶಃ ಬದಲಾವಣೆಗೆ ಆಗ್ರಹಿಸಿ ಸೋಮವಾರ ಜನಶಕ್ತಿ- ಜನಪರ ಹೋರಾಟ ವೇದಿಕೆ ನೇತೃತ್ವದಲ್ಲಿ ರೈತರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.<br /> <br /> 2010-11ನೇ ಸಾಲಿನ ರೈಲ್ವೆ ಬಜೆಟ್ನಲ್ಲಿ ಶಿವಮೊಗ್ಗ - ಹರಿಹರ ನೂತನ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ಈ ಯೋಜನೆಯಿಂದ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಲಿದೆ. ಈ ಯೋಜನೆಗೆ ತಮ್ಮ ವಿರೋಧವಿಲ್ಲ. ಆದರೆ, ಉದ್ದೇಶಿತ ರೈಲ್ವೆ ಮಾರ್ಗ ಭಾಗಶಃ ಬದಲಾಯಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಶಿವಮೊಗ್ಗ-ಹೊಳಲೂರು - ಹೊನ್ನಾಳಿ ಮೂಲಕ ಹರಿಹರಕ್ಕೆ ರೈಲ್ವೆ ಮಾರ್ಗ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಆದರೆ, ಈ ಭಾಗದಲ್ಲಿ ನೀರಾವರಿ ಕೃಷಿ ಭೂಮಿಯಿದೆ. ಕಬ್ಬು, ಅಡಿಕೆ, ತೆಂಗು ಸೇರಿದಂತೆ ಹತ್ತು ಹಲವು ಬೆಳೆಗಳನ್ನು ಬೆಳೆಯಲಾಗುತ್ತಿದೆ. ಮಾರ್ಗ ನಿರ್ಮಾಣದಿಂದ ರೈತರಿಗೆ ಸಾಕಷ್ಟು ನಷ್ಟ ಉಂಟಾಗಲಿದೆ ಎಂದು ಪ್ರತಿಭಟನಾಕಾರರು ಮನವಿಯಲ್ಲಿ ತಿಳಿಸಿದರು. <br /> <br /> ಈಗಾಗಲೇ ಈ ಭಾಗದಲ್ಲಿ ತುಂಗಾ ನಾಲೆ ಹಾಗೂ ಮೇಲ್ದಂಡೆ ಯೋಜನೆಗೆ ಶಿವಮೊಗ್ಗ-ಹೊನ್ನಾಳಿ ರಸ್ತೆ ವಿಸ್ತರಣೆಗೆ, ಹೈಟೆನ್ಷನ್ ವಿದ್ಯುತ್ ಮಾರ್ಗ ನಿರ್ಮಾಣಕ್ಕೆ ಅಪಾರ ಪ್ರಮಾಣದ ಫಲವತ್ತಾದ ಕೃಷಿ ಭೂಮಿಯನ್ನು ರೈತರು ಕಳೆದುಕೊಂಡಿದ್ದಾರೆ. ಉದ್ದೇಶಿತ ರೈಲ್ವೆ ಮಾರ್ಗದಿಂದ ರೈತರು ಮತ್ತಷ್ಟು ಕೃಷಿ ಭೂಮಿ, ಮನೆ ಕಳೆದು ಕೊಳ್ಳಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು. <br /> <br /> ಈ ದೃಷ್ಟಿಯಿಂದ ಶಿವಮೊಗ್ಗದಿಂದ ಕೋಟೆಗಂಗೂರು, ಸೋಮಿನಕೊಪ್ಪ, ಹುಣಸೋಡು, ಕೊಮ್ಮನಾಳು, ಸುತ್ತುಕೋಟೆ ಹಾಗೂ ಹೊನ್ನಾಳ್ಳಿಯ ಗಂಗನಕೋಟೆ, ದಿಡಗೂರು ಮೂಲಕ ರೈಲ್ವೆಮಾರ್ಗ ನಿರ್ಮಿಸಬೇಕು. ಈ ಮಾರ್ಗದ ಸರ್ವೇ ಕೂಡ ನಡೆದಿದೆ. ಈ ಮಾರ್ಗದಿಂದ ಯಾವುದೇ ನಷ್ಟ ಆಗುವುದಿಲ್ಲ ಎಂದು ಪ್ರತಿಭಟನಾಕಾರರು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ರೈಲ್ವೆ ಇಲಾಖೆ ಅಧಿಕಾರಿಗಳು ಈ ಸಂಬಂಧ ಕೂಡಲೇ ಸಭೆ ಕರೆದು, ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಪ್ರಸ್ತುತ ನಿರ್ಧರಿಸಿರುವ ಪ್ರದೇಶದಲ್ಲಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. <br /> <br /> ಪ್ರತಿಭಟನೆಯ ನೇತೃತ್ವವನ್ನು ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಸಿ. ಬಸವರಾಜಪ್ಪ, ಬಿ.ಜಿ. ರಾಜಪ್ಪ, ಎಚ್.ಎಂ. ಪ್ರವೀಣ್, ಹಾಲೇಶಪ್ಪ ದೊಡ್ಡೇರಿ, ಪರಮೇಶ್ವರಪ್ಪ ಕುರುವ, ಈಶ್ವರಪ್ಪಗೌಡ್ರು ಮಳಲಿ, ಎಸ್. ಮುರುಡಪ್ಪ ಮಾಸ್ಟರ್ ಮತ್ತಿತರರು ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಭಾಗಶಃ ಬದಲಾವಣೆಗೆ ಆಗ್ರಹಿಸಿ ಸೋಮವಾರ ಜನಶಕ್ತಿ- ಜನಪರ ಹೋರಾಟ ವೇದಿಕೆ ನೇತೃತ್ವದಲ್ಲಿ ರೈತರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.<br /> <br /> 2010-11ನೇ ಸಾಲಿನ ರೈಲ್ವೆ ಬಜೆಟ್ನಲ್ಲಿ ಶಿವಮೊಗ್ಗ - ಹರಿಹರ ನೂತನ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ಈ ಯೋಜನೆಯಿಂದ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಲಿದೆ. ಈ ಯೋಜನೆಗೆ ತಮ್ಮ ವಿರೋಧವಿಲ್ಲ. ಆದರೆ, ಉದ್ದೇಶಿತ ರೈಲ್ವೆ ಮಾರ್ಗ ಭಾಗಶಃ ಬದಲಾಯಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಶಿವಮೊಗ್ಗ-ಹೊಳಲೂರು - ಹೊನ್ನಾಳಿ ಮೂಲಕ ಹರಿಹರಕ್ಕೆ ರೈಲ್ವೆ ಮಾರ್ಗ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಆದರೆ, ಈ ಭಾಗದಲ್ಲಿ ನೀರಾವರಿ ಕೃಷಿ ಭೂಮಿಯಿದೆ. ಕಬ್ಬು, ಅಡಿಕೆ, ತೆಂಗು ಸೇರಿದಂತೆ ಹತ್ತು ಹಲವು ಬೆಳೆಗಳನ್ನು ಬೆಳೆಯಲಾಗುತ್ತಿದೆ. ಮಾರ್ಗ ನಿರ್ಮಾಣದಿಂದ ರೈತರಿಗೆ ಸಾಕಷ್ಟು ನಷ್ಟ ಉಂಟಾಗಲಿದೆ ಎಂದು ಪ್ರತಿಭಟನಾಕಾರರು ಮನವಿಯಲ್ಲಿ ತಿಳಿಸಿದರು. <br /> <br /> ಈಗಾಗಲೇ ಈ ಭಾಗದಲ್ಲಿ ತುಂಗಾ ನಾಲೆ ಹಾಗೂ ಮೇಲ್ದಂಡೆ ಯೋಜನೆಗೆ ಶಿವಮೊಗ್ಗ-ಹೊನ್ನಾಳಿ ರಸ್ತೆ ವಿಸ್ತರಣೆಗೆ, ಹೈಟೆನ್ಷನ್ ವಿದ್ಯುತ್ ಮಾರ್ಗ ನಿರ್ಮಾಣಕ್ಕೆ ಅಪಾರ ಪ್ರಮಾಣದ ಫಲವತ್ತಾದ ಕೃಷಿ ಭೂಮಿಯನ್ನು ರೈತರು ಕಳೆದುಕೊಂಡಿದ್ದಾರೆ. ಉದ್ದೇಶಿತ ರೈಲ್ವೆ ಮಾರ್ಗದಿಂದ ರೈತರು ಮತ್ತಷ್ಟು ಕೃಷಿ ಭೂಮಿ, ಮನೆ ಕಳೆದು ಕೊಳ್ಳಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು. <br /> <br /> ಈ ದೃಷ್ಟಿಯಿಂದ ಶಿವಮೊಗ್ಗದಿಂದ ಕೋಟೆಗಂಗೂರು, ಸೋಮಿನಕೊಪ್ಪ, ಹುಣಸೋಡು, ಕೊಮ್ಮನಾಳು, ಸುತ್ತುಕೋಟೆ ಹಾಗೂ ಹೊನ್ನಾಳ್ಳಿಯ ಗಂಗನಕೋಟೆ, ದಿಡಗೂರು ಮೂಲಕ ರೈಲ್ವೆಮಾರ್ಗ ನಿರ್ಮಿಸಬೇಕು. ಈ ಮಾರ್ಗದ ಸರ್ವೇ ಕೂಡ ನಡೆದಿದೆ. ಈ ಮಾರ್ಗದಿಂದ ಯಾವುದೇ ನಷ್ಟ ಆಗುವುದಿಲ್ಲ ಎಂದು ಪ್ರತಿಭಟನಾಕಾರರು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ರೈಲ್ವೆ ಇಲಾಖೆ ಅಧಿಕಾರಿಗಳು ಈ ಸಂಬಂಧ ಕೂಡಲೇ ಸಭೆ ಕರೆದು, ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಪ್ರಸ್ತುತ ನಿರ್ಧರಿಸಿರುವ ಪ್ರದೇಶದಲ್ಲಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. <br /> <br /> ಪ್ರತಿಭಟನೆಯ ನೇತೃತ್ವವನ್ನು ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಸಿ. ಬಸವರಾಜಪ್ಪ, ಬಿ.ಜಿ. ರಾಜಪ್ಪ, ಎಚ್.ಎಂ. ಪ್ರವೀಣ್, ಹಾಲೇಶಪ್ಪ ದೊಡ್ಡೇರಿ, ಪರಮೇಶ್ವರಪ್ಪ ಕುರುವ, ಈಶ್ವರಪ್ಪಗೌಡ್ರು ಮಳಲಿ, ಎಸ್. ಮುರುಡಪ್ಪ ಮಾಸ್ಟರ್ ಮತ್ತಿತರರು ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>