<p><strong>ಶಿವಮೊಗ್ಗ: </strong>ಶಿವಾಜಿ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲು ಕ್ರಮ ಕೈಗೊಳ್ಳುವಂತೆ ಮಾಡುವಂತೆ, ಪ್ರಧಾನಮಂತ್ರಿ ಮನಮೋಹನ್ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಲಾಗುವುದು ಎಂದು ರಾಜ್ಯಸಭಾ ಸದಸ್ಯ ಅನಿಲ್ಲಾಡ್ ಹೇಳಿದರು.<br /> <br /> ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್, ಛತ್ರಪತಿ ಶಿವಾಜಿ ಮರಾಠ ಟ್ರಸ್ಟ್ ಸಂಯುಕ್ತವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂಬಾ ಭವಾನಿ ದೇವಸ್ಥಾನ, ಛತ್ರಪತಿ ಶಿವಾಜಿ ಸಮುದಾಯ ಭವನ, ಶಿವಾಜಿ ವಾಣಿಜ್ಯ ಸಂಕೀರ್ಣ ಹಾಗೂ ಮರಾಠ ಹಾಸ್ಟೆಲ್ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಪ್ರಸ್ತುತ ಅಧಿವೇಶನದಲ್ಲೇ ಈ ವಿಷಯ ಪ್ರಸ್ತಾಪಿಸಲಾಗುವುದು ಎಂದ ಅವರು, ತಾವು ಎಲ್ಲ ಪಕ್ಷದ ಜನಪ್ರತಿನಿಧಿಗಳ ಸಭೆ ಕರೆದು, ಎಲ್ಲರ ಬೆಂಬಲದೊಂದಿಗೆ ಕೇಂದ್ರ ಮನವಿ ಸಲ್ಲಿಸಲಾಗುವುದು ಎಂದರು.<br /> ಶಿವಾಜಿ ಜಯಂತಿಯನ್ನು ಸರ್ಕಾರಿ ದಿನಾಚರಣೆಯನ್ನಾಗಿ ಘೋಷಿಸಿರುವ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರ ಕ್ರಮವನ್ನು ಶ್ಲಾಘಿಸಿದರು.<br /> <br /> ಶಿವಾಜಿ ಜಯಂತಿ ಕೇವಲ ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಸೀಮಿತವಾಗಬಾರದು. ಈ ಜಯಂತ್ಯುತ್ಸವ ರಾಷ್ಟ್ರೀಯ ಹಬ್ಬವನ್ನಾಗಿ ಘೋಷಿಸಬೇಕು ಎಂದು ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್ ಆಗ್ರಹಿಸಿದರು.<br /> ಪ್ರಸ್ತುತ ಭಾರತದ ಸ್ಥಿತಿ ಗಮನಿಸಿದರೆ, ಶಿವಾಜಿ ಮತ್ತೊಮ್ಮೆ ಹುಟ್ಟಿ ಬರಬೇಕು ಎನಿಸುತ್ತದೆ. ಭಾರತದ ಸುತ್ತಮುತ್ತಲಿನ ಕೆಲ ರಾಷ್ಟ್ರಗಳು, ದೇಶದ ವಿರುದ್ಧ ಕುತಂತ್ರ ನಡೆಸುತ್ತಿವೆ. ಆಂತರಿಕವಾಗಿ ನಕ್ಸಲೀಯರು ಕ್ಷೋಭೆ ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಬೆಂಗಳೂರಿನ ಗವೀಪುರಂನ ಸುರೇಶ್ವಾರಾನಂದ ಸ್ವಾಮೀಜಿ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಅಧ್ಯಕ್ಷ ರಾಣೋಜಿರಾವ್ ಸಾಠೆ, ನಗರಸಭಾ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಸೂಡಾ ಅಧ್ಯಕ್ಷ ಎಸ್. ದತ್ತಾತ್ರಿ, ಆರ್. ಪ್ರಸನ್ನಕುಮಾರ್, ಎಂ. ಶ್ರೀಕಾಂತ್, ಮುಖಂಡರಾದ ಶಿವಾಜಿರಾವ್ ಸಿಂಧೆ, ರಮೇಶ್ಬಾಬು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಶಿವಾಜಿ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲು ಕ್ರಮ ಕೈಗೊಳ್ಳುವಂತೆ ಮಾಡುವಂತೆ, ಪ್ರಧಾನಮಂತ್ರಿ ಮನಮೋಹನ್ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಲಾಗುವುದು ಎಂದು ರಾಜ್ಯಸಭಾ ಸದಸ್ಯ ಅನಿಲ್ಲಾಡ್ ಹೇಳಿದರು.<br /> <br /> ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್, ಛತ್ರಪತಿ ಶಿವಾಜಿ ಮರಾಠ ಟ್ರಸ್ಟ್ ಸಂಯುಕ್ತವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂಬಾ ಭವಾನಿ ದೇವಸ್ಥಾನ, ಛತ್ರಪತಿ ಶಿವಾಜಿ ಸಮುದಾಯ ಭವನ, ಶಿವಾಜಿ ವಾಣಿಜ್ಯ ಸಂಕೀರ್ಣ ಹಾಗೂ ಮರಾಠ ಹಾಸ್ಟೆಲ್ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಪ್ರಸ್ತುತ ಅಧಿವೇಶನದಲ್ಲೇ ಈ ವಿಷಯ ಪ್ರಸ್ತಾಪಿಸಲಾಗುವುದು ಎಂದ ಅವರು, ತಾವು ಎಲ್ಲ ಪಕ್ಷದ ಜನಪ್ರತಿನಿಧಿಗಳ ಸಭೆ ಕರೆದು, ಎಲ್ಲರ ಬೆಂಬಲದೊಂದಿಗೆ ಕೇಂದ್ರ ಮನವಿ ಸಲ್ಲಿಸಲಾಗುವುದು ಎಂದರು.<br /> ಶಿವಾಜಿ ಜಯಂತಿಯನ್ನು ಸರ್ಕಾರಿ ದಿನಾಚರಣೆಯನ್ನಾಗಿ ಘೋಷಿಸಿರುವ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರ ಕ್ರಮವನ್ನು ಶ್ಲಾಘಿಸಿದರು.<br /> <br /> ಶಿವಾಜಿ ಜಯಂತಿ ಕೇವಲ ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಸೀಮಿತವಾಗಬಾರದು. ಈ ಜಯಂತ್ಯುತ್ಸವ ರಾಷ್ಟ್ರೀಯ ಹಬ್ಬವನ್ನಾಗಿ ಘೋಷಿಸಬೇಕು ಎಂದು ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್ ಆಗ್ರಹಿಸಿದರು.<br /> ಪ್ರಸ್ತುತ ಭಾರತದ ಸ್ಥಿತಿ ಗಮನಿಸಿದರೆ, ಶಿವಾಜಿ ಮತ್ತೊಮ್ಮೆ ಹುಟ್ಟಿ ಬರಬೇಕು ಎನಿಸುತ್ತದೆ. ಭಾರತದ ಸುತ್ತಮುತ್ತಲಿನ ಕೆಲ ರಾಷ್ಟ್ರಗಳು, ದೇಶದ ವಿರುದ್ಧ ಕುತಂತ್ರ ನಡೆಸುತ್ತಿವೆ. ಆಂತರಿಕವಾಗಿ ನಕ್ಸಲೀಯರು ಕ್ಷೋಭೆ ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಬೆಂಗಳೂರಿನ ಗವೀಪುರಂನ ಸುರೇಶ್ವಾರಾನಂದ ಸ್ವಾಮೀಜಿ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಅಧ್ಯಕ್ಷ ರಾಣೋಜಿರಾವ್ ಸಾಠೆ, ನಗರಸಭಾ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಸೂಡಾ ಅಧ್ಯಕ್ಷ ಎಸ್. ದತ್ತಾತ್ರಿ, ಆರ್. ಪ್ರಸನ್ನಕುಮಾರ್, ಎಂ. ಶ್ರೀಕಾಂತ್, ಮುಖಂಡರಾದ ಶಿವಾಜಿರಾವ್ ಸಿಂಧೆ, ರಮೇಶ್ಬಾಬು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>