<p><strong>ಚಿಕ್ಕಬಳ್ಳಾಪುರ</strong>: ನಗರದ ವಿವಿಧ ಬಡಾವಣೆಗಳಲ್ಲಿ ಅಗಾಗ್ಗೆ ಅನಾಥ ಶಿಶುಗಳ ಶವ ಪತ್ತೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೆಳಗಿನತೋಟ ಬಡಾವಣೆಯ ಶಿರಡಿ ಸಾಯಿಬಾಬಾ ದೇವಾಲಯದ ಬಳಿ ಮೂರು ತಿಂಗಳ ಶಿಶುವಿನ ಶವ ಭಾನುವಾರ ಬೆಳಿಗ್ಗೆ ಪತ್ತೆಯಾಗಿದ್ದು, ಇನ್ನಷ್ಟು ಆತಂಕ ಹೆಚ್ಚಿಸಿದೆ.<br /> <br /> ನಾಲ್ಕು ದಿನಗಳ ಹಿಂದೆಯಷ್ಟೇ ನವಜಾತ ಶಿಶುವಿನ ಶವವೊಂದು ಕಂದವಾರದ ಬಾಗಿಲು ಬಳಿ ಪತ್ತೆಯಾಗಿತ್ತು. ಕಂದವಾರ ಬಡಾವಣೆಯ ನಿವಾಸಿಗಳು ಶಿಶುವಿನ ಕುರಿತು ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಿದರು. ಆದರೆ ಯಾವುದೇ ರೀತಿಯ ಪ್ರಯೋಜನವಾಗಿರಲಿಲ್ಲ.<br /> <br /> ಈ ಎರಡೂ ಶಿಶುಗಳ ಶವಗಳನ್ನು ತ್ಯಾಜ್ಯದ ರೂಪದಲ್ಲಿ ರಸ್ತೆ ಬದಿಯ ಹುಲ್ಲುಗಾವಲಿನಲ್ಲಿ ಎಸೆಯಲಾಗಿದ್ದ ಕಾರಣ ಅವುಗಳನ್ನು ನಾಯಿಗಳು ಮನ ಬಂದಂತೆ ತಿಂದು ಹಾಕಿವೆ. ಮುಖ ಸೇರಿದಂತೆ ಇತರೆ ಅಂಗಾಂಗಗಳನ್ನು ತಿಂದು ಹಾಕಿವೆ. ಶವಗಳು ನೋಡಲಾಗದ ಸ್ಥಿತಿಯಲ್ಲಿವೆ. ನೋಡಲು ಭಯವಾಗುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.<br /> <br /> ಶವ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಶಿಶು ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಇಲ್ಲಿ ಎಸೆಯಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನವಜಾಥ ಶಿಶುಗಳ ಶವಗಳನ್ನು ಶಿಶುವನ್ನು ಮನ ಬಂದ ಕಡೆ ಎಸೆಯುವುದನ್ನು ನಿಯಂತ್ರಿಸುವಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಪೊಲೀಸರು ನಿಗಾ ವಹಿಸಬೇಕು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ವಿವಿಧ ಬಡಾವಣೆಗಳಲ್ಲಿ ಅಗಾಗ್ಗೆ ಅನಾಥ ಶಿಶುಗಳ ಶವ ಪತ್ತೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೆಳಗಿನತೋಟ ಬಡಾವಣೆಯ ಶಿರಡಿ ಸಾಯಿಬಾಬಾ ದೇವಾಲಯದ ಬಳಿ ಮೂರು ತಿಂಗಳ ಶಿಶುವಿನ ಶವ ಭಾನುವಾರ ಬೆಳಿಗ್ಗೆ ಪತ್ತೆಯಾಗಿದ್ದು, ಇನ್ನಷ್ಟು ಆತಂಕ ಹೆಚ್ಚಿಸಿದೆ.<br /> <br /> ನಾಲ್ಕು ದಿನಗಳ ಹಿಂದೆಯಷ್ಟೇ ನವಜಾತ ಶಿಶುವಿನ ಶವವೊಂದು ಕಂದವಾರದ ಬಾಗಿಲು ಬಳಿ ಪತ್ತೆಯಾಗಿತ್ತು. ಕಂದವಾರ ಬಡಾವಣೆಯ ನಿವಾಸಿಗಳು ಶಿಶುವಿನ ಕುರಿತು ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಿದರು. ಆದರೆ ಯಾವುದೇ ರೀತಿಯ ಪ್ರಯೋಜನವಾಗಿರಲಿಲ್ಲ.<br /> <br /> ಈ ಎರಡೂ ಶಿಶುಗಳ ಶವಗಳನ್ನು ತ್ಯಾಜ್ಯದ ರೂಪದಲ್ಲಿ ರಸ್ತೆ ಬದಿಯ ಹುಲ್ಲುಗಾವಲಿನಲ್ಲಿ ಎಸೆಯಲಾಗಿದ್ದ ಕಾರಣ ಅವುಗಳನ್ನು ನಾಯಿಗಳು ಮನ ಬಂದಂತೆ ತಿಂದು ಹಾಕಿವೆ. ಮುಖ ಸೇರಿದಂತೆ ಇತರೆ ಅಂಗಾಂಗಗಳನ್ನು ತಿಂದು ಹಾಕಿವೆ. ಶವಗಳು ನೋಡಲಾಗದ ಸ್ಥಿತಿಯಲ್ಲಿವೆ. ನೋಡಲು ಭಯವಾಗುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.<br /> <br /> ಶವ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಶಿಶು ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಇಲ್ಲಿ ಎಸೆಯಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನವಜಾಥ ಶಿಶುಗಳ ಶವಗಳನ್ನು ಶಿಶುವನ್ನು ಮನ ಬಂದ ಕಡೆ ಎಸೆಯುವುದನ್ನು ನಿಯಂತ್ರಿಸುವಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಪೊಲೀಸರು ನಿಗಾ ವಹಿಸಬೇಕು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>