<p><strong>ಬೆಂಗಳೂರು:</strong> `ಶಿಷ್ಟಾಚಾರ, ಸಂಪ್ರದಾಯದ ಹೆಸರಿನಲ್ಲಿ ಅಧೀನ ಕೋರ್ಟ್ ನ್ಯಾಯಾಧೀಶರು ವಿನಾಕಾರಣ ಸಮಯವನ್ನು ವ್ಯರ್ಥ ಮಾಡುವುದು ಸಲ್ಲದು~ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಇಲ್ಲಿ ಸೋಮವಾರ ತಿಳಿಸಿದರು. <br /> <br /> `ನಾನು ಈಚೆಗೆ ಕೆಲವು ನ್ಯಾಯಾಲಯಗಳಿಗೆ ಭೇಟಿ ನೀಡಿದ್ದೆ. ನಾನು ಅಲ್ಲಿಗೆ ಹೋಗುತ್ತಿರುವುದು ತಿಳಿಯುತ್ತಿದ್ದಂತೆ ಹಲವು ಹಿರಿಯ (ಅಧೀನ ಕೋರ್ಟ್) ನ್ಯಾಯಾಧೀಶರು ನನಗೆ ಗೌರವ ತೋರುವುದಕ್ಕಾಗಿ ಕಾಯುತ್ತಿದ್ದರು. ಗೌರವ ಕೊಡುವ ಹೆಸರಿನಲ್ಲಿ ನ್ಯಾಯಾಂಗ ಅಧಿಕಾರಿಗಳು ಈ ರೀತಿ ಕಾಯುತ್ತಿರುವುದು ನನಗೆ ಸರಿ ಕಂಡುಬರುತ್ತಿಲ್ಲ. ಇದು ನ್ಯಾಯಾಧೀಶರ ಸ್ವಂತ ದೃಷ್ಟಿಯಿಂದ ಮಾತ್ರವಲ್ಲದೇ ಜನರ ದೃಷ್ಟಿಯಿಂದಲೂ ಗೌರವಕ್ಕೆ ತಕ್ಕುದಲ್ಲ~ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.<br /> <br /> ಮುಖ್ಯ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ ಅವರನ್ನು ಅಭಿನಂದಿಸಲು ರಾಜ್ಯ ವಕೀಲರ ಪರಿಷತ್ತು ಹೈಕೋರ್ಟ್ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> `ಜನರಿಗೆ ಶೀಘ್ರ ನ್ಯಾಯದಾನ ಮಾಡುವುದು ನಮ್ಮ ಸಂಸ್ಥೆಗೆ ಇರುವ ಸವಾಲು. ಅದನ್ನು ಎದುರಿಸಲು ನಾವೆಲ್ಲ ಸನ್ನದ್ಧರಾಗಬೇಕೆ ವಿನಾ ಈ ರೀತಿಯಾಗಿ ಸಮಯ ಹಾಗೂ ಶ್ರಮ ವ್ಯರ್ಥ ಮಾಡುವುದು ಸಲ್ಲದು~ ಎಂದು ಅವರು ತಿಳಿಸಿದರು.<br /> <br /> `ಇತ್ಯರ್ಥಕ್ಕೆ ಇರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂಬುದಾಗಿಯೇ ಎಲ್ಲರೂ ಈಗ ಮಾತನಾಡಿಕೊಳ್ಳುತ್ತಿದ್ದಾರೆ. ಪ್ರಕರಣ ಶೀಘ್ರ ಇತ್ಯರ್ಥಗೊಳ್ಳಬೇಕು ಎನ್ನುವುದೇ ನನ್ನ ಗುರಿ. ಆದುದರಿಂದ ಹೆಚ್ಚಿನ ಕಾರ್ಯಕ್ರಮಗಳಿಗೆ ನಾನು ಭೇಟಿ ನೀಡುವುದಿಲ್ಲ~ ಎಂದು ಅವರು ಸ್ಪಷ್ಟಪಡಿಸಿದರು.<br /> <br /> `ಯಾವುದಾದರೂ ಕಾಮಗಾರಿಗೆ ಶಂಕುಸ್ಥಾಪನೆ ಮಾಡುವಂತೆ ಹಲವು ತಾಲ್ಲೂಕು ಹಾಗೂ ಜಿಲ್ಲಾ ಕೋರ್ಟ್ಗಳಿಂದ ನನಗೆ ಆಮಂತ್ರಣ ಬರುತ್ತಲೇ ಇರುತ್ತದೆ. ಆದರೆ ಅಲ್ಲಿಗೆ ಸಾಗಿ ಶ್ರಮ ವ್ಯರ್ಥ ಮಾಡಿಕೊಳ್ಳುವ ಬದಲು ಅದೇ ಶ್ರಮ ಹಾಗೂ ಸಮಯವನ್ನು ಪ್ರಕರಣ ಇತ್ಯರ್ಥಕ್ಕೆ ಬಳಸಿಕೊಳ್ಳಿ ಎನ್ನುವವ ನಾನು~ ಎಂದರು.<br /> <br /> <strong>ಸೌಲಭ್ಯದ ಕೊರತೆ:</strong> `ಕಳೆದ 50 ವರ್ಷಗಳಿಗಿಂತ ಹೆಚ್ಚಿನ ಹಣವನ್ನು ಸರ್ಕಾರವು ಈ ಬಾರಿ ನ್ಯಾಯಾಂಗದ ಸೌಕರ್ಯಗಳಿಗೆ ನೀಡಿದೆ. ಆದರೆ ನ್ಯಾಯಾಂಗಕ್ಕೆ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಒದಗಿಸಲು ಇಷ್ಟು ಹಣ ಸಾಕಾಗುತ್ತಿಲ್ಲ. ಇನ್ನೂ ಹೆಚ್ಚಿನ ಹಣ ಮೀಸಲು ಇಡುವ ಅಗತ್ಯ ಇದೆ ಎಂದು ನ್ಯಾ.ಸೇನ್ ಅಭಿಪ್ರಾಯಪಟ್ಟರು. <br /> <br /> ರಾಜ್ಯದಲ್ಲಿನ ನ್ಯಾಯಾಲಯಗಳಿಗೆ ಭದ್ರತೆ ಒದಗಿಸಲು, ಬೆಂಗಳೂರಿನ ಕೋರ್ಟ್ಗಳಲ್ಲಿ ಪಾರ್ಕಿಂಗ್ ಸಮಸ್ಯೆ ನೀಗಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಅವರು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಶಿಷ್ಟಾಚಾರ, ಸಂಪ್ರದಾಯದ ಹೆಸರಿನಲ್ಲಿ ಅಧೀನ ಕೋರ್ಟ್ ನ್ಯಾಯಾಧೀಶರು ವಿನಾಕಾರಣ ಸಮಯವನ್ನು ವ್ಯರ್ಥ ಮಾಡುವುದು ಸಲ್ಲದು~ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಇಲ್ಲಿ ಸೋಮವಾರ ತಿಳಿಸಿದರು. <br /> <br /> `ನಾನು ಈಚೆಗೆ ಕೆಲವು ನ್ಯಾಯಾಲಯಗಳಿಗೆ ಭೇಟಿ ನೀಡಿದ್ದೆ. ನಾನು ಅಲ್ಲಿಗೆ ಹೋಗುತ್ತಿರುವುದು ತಿಳಿಯುತ್ತಿದ್ದಂತೆ ಹಲವು ಹಿರಿಯ (ಅಧೀನ ಕೋರ್ಟ್) ನ್ಯಾಯಾಧೀಶರು ನನಗೆ ಗೌರವ ತೋರುವುದಕ್ಕಾಗಿ ಕಾಯುತ್ತಿದ್ದರು. ಗೌರವ ಕೊಡುವ ಹೆಸರಿನಲ್ಲಿ ನ್ಯಾಯಾಂಗ ಅಧಿಕಾರಿಗಳು ಈ ರೀತಿ ಕಾಯುತ್ತಿರುವುದು ನನಗೆ ಸರಿ ಕಂಡುಬರುತ್ತಿಲ್ಲ. ಇದು ನ್ಯಾಯಾಧೀಶರ ಸ್ವಂತ ದೃಷ್ಟಿಯಿಂದ ಮಾತ್ರವಲ್ಲದೇ ಜನರ ದೃಷ್ಟಿಯಿಂದಲೂ ಗೌರವಕ್ಕೆ ತಕ್ಕುದಲ್ಲ~ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.<br /> <br /> ಮುಖ್ಯ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ ಅವರನ್ನು ಅಭಿನಂದಿಸಲು ರಾಜ್ಯ ವಕೀಲರ ಪರಿಷತ್ತು ಹೈಕೋರ್ಟ್ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> `ಜನರಿಗೆ ಶೀಘ್ರ ನ್ಯಾಯದಾನ ಮಾಡುವುದು ನಮ್ಮ ಸಂಸ್ಥೆಗೆ ಇರುವ ಸವಾಲು. ಅದನ್ನು ಎದುರಿಸಲು ನಾವೆಲ್ಲ ಸನ್ನದ್ಧರಾಗಬೇಕೆ ವಿನಾ ಈ ರೀತಿಯಾಗಿ ಸಮಯ ಹಾಗೂ ಶ್ರಮ ವ್ಯರ್ಥ ಮಾಡುವುದು ಸಲ್ಲದು~ ಎಂದು ಅವರು ತಿಳಿಸಿದರು.<br /> <br /> `ಇತ್ಯರ್ಥಕ್ಕೆ ಇರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂಬುದಾಗಿಯೇ ಎಲ್ಲರೂ ಈಗ ಮಾತನಾಡಿಕೊಳ್ಳುತ್ತಿದ್ದಾರೆ. ಪ್ರಕರಣ ಶೀಘ್ರ ಇತ್ಯರ್ಥಗೊಳ್ಳಬೇಕು ಎನ್ನುವುದೇ ನನ್ನ ಗುರಿ. ಆದುದರಿಂದ ಹೆಚ್ಚಿನ ಕಾರ್ಯಕ್ರಮಗಳಿಗೆ ನಾನು ಭೇಟಿ ನೀಡುವುದಿಲ್ಲ~ ಎಂದು ಅವರು ಸ್ಪಷ್ಟಪಡಿಸಿದರು.<br /> <br /> `ಯಾವುದಾದರೂ ಕಾಮಗಾರಿಗೆ ಶಂಕುಸ್ಥಾಪನೆ ಮಾಡುವಂತೆ ಹಲವು ತಾಲ್ಲೂಕು ಹಾಗೂ ಜಿಲ್ಲಾ ಕೋರ್ಟ್ಗಳಿಂದ ನನಗೆ ಆಮಂತ್ರಣ ಬರುತ್ತಲೇ ಇರುತ್ತದೆ. ಆದರೆ ಅಲ್ಲಿಗೆ ಸಾಗಿ ಶ್ರಮ ವ್ಯರ್ಥ ಮಾಡಿಕೊಳ್ಳುವ ಬದಲು ಅದೇ ಶ್ರಮ ಹಾಗೂ ಸಮಯವನ್ನು ಪ್ರಕರಣ ಇತ್ಯರ್ಥಕ್ಕೆ ಬಳಸಿಕೊಳ್ಳಿ ಎನ್ನುವವ ನಾನು~ ಎಂದರು.<br /> <br /> <strong>ಸೌಲಭ್ಯದ ಕೊರತೆ:</strong> `ಕಳೆದ 50 ವರ್ಷಗಳಿಗಿಂತ ಹೆಚ್ಚಿನ ಹಣವನ್ನು ಸರ್ಕಾರವು ಈ ಬಾರಿ ನ್ಯಾಯಾಂಗದ ಸೌಕರ್ಯಗಳಿಗೆ ನೀಡಿದೆ. ಆದರೆ ನ್ಯಾಯಾಂಗಕ್ಕೆ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಒದಗಿಸಲು ಇಷ್ಟು ಹಣ ಸಾಕಾಗುತ್ತಿಲ್ಲ. ಇನ್ನೂ ಹೆಚ್ಚಿನ ಹಣ ಮೀಸಲು ಇಡುವ ಅಗತ್ಯ ಇದೆ ಎಂದು ನ್ಯಾ.ಸೇನ್ ಅಭಿಪ್ರಾಯಪಟ್ಟರು. <br /> <br /> ರಾಜ್ಯದಲ್ಲಿನ ನ್ಯಾಯಾಲಯಗಳಿಗೆ ಭದ್ರತೆ ಒದಗಿಸಲು, ಬೆಂಗಳೂರಿನ ಕೋರ್ಟ್ಗಳಲ್ಲಿ ಪಾರ್ಕಿಂಗ್ ಸಮಸ್ಯೆ ನೀಗಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಅವರು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>