<p>ಚಾಮರಾಜನಗರ: `ಶಿಷ್ಟಾಚಾರದ ಪ್ರಕಾರವೇ ನಿಗಮದಿಂದ ಫಲಾನುಭವಿ ಗಳಿಗೆ ಸವಲತ್ತು ವಿತರಿಸಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ಶಾಸಕರಿಗೂ ಮಾಹಿತಿ ತಿಳಿಸಲಾಗಿದೆ. ಆದರೆ, ಅವರು ಗೈರು ಹಾಜರಾಗಿರುವುದು ಅಸಮಾಧಾನ ತಂದಿದೆ~ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಹೇಳಿದರು. <br /> <br /> ತಾಲ್ಲೂಕಿನ ಕೋಳಿಪಾಳ್ಯ ಗ್ರಾಮದಲ್ಲಿ ಶುಕ್ರವಾರ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಶಿಲ್ಪಿ ಸಮೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ಸವಲತ್ತು ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> `ನನ್ನ ವಿವೇಚನಾ ಕೋಟಾದಡಿ 100 ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಬಡ ಕರಕುಶಲಕರ್ಮಿಗಳ ಆರ್ಥಿಕ ಸ್ವಾವಲಂಬನೆಗೆ ನೆರವಾಗಲು ನಿಗಮ ಮುಂದಾಗಿದೆ. 10 ಸಾವಿರ ರೂ ಸಹಾಯಧನ ಸೇರಿದಂತೆ 10 ಸಾವಿರ ರೂ ಸಾಲ ಸೌಲಭ್ಯ ನೀಡಲಾಗಿದೆ~ ಎಂದು ವಿವರಿಸಿದರು. <br /> <br /> 2011-12ನೇ ಸಾಲಿಗೆ ಪರಿಶಿಷ್ಟರಿಗೆ ಸೌಲಭ್ಯ ಕಲ್ಪಿಸಲು 4,600 ಕೋಟಿ ರೂ ಮಂಜೂರು ಮಾಡಿದೆ. ನಿಗಮದ ಮೂಲಕ ಗಂಗಾಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯಿಸಲು ಘಟಕ ವೆಚ್ಚವನ್ನು 1.50 ಲಕ್ಷ ರೂ ನಿಗದಿಪಡಿಸ ಲಾಗಿದೆ. ಇದರಲ್ಲಿ 1 ಲಕ್ಷ ಹಣವನ್ನು ಸರ್ಕಾರ ನೀಡಲಿದೆ. ಉಳಿದ ಹಣವನ್ನು ಸಾಲದ ರೂಪದಲ್ಲಿ ನೀಡಲಾಗುವುದು ಎಂದರು. <br /> <br /> ಗಂಗಾಕಲ್ಯಾಣ ಯೋಜನೆಯಡಿ ಜಿಲ್ಲೆಯಲ್ಲಿ 635 ಕೊಳವೆಬಾವಿಗಳಿಗೆ ಮಂಜೂರಾತಿ ನೀಡಲಾಗಿದೆ. ನಿಗಮದಿಂದ ಹೈನುಗಾರಿಕೆಗೂ ಸೌಲಭ್ಯ ಕಲ್ಪಿಸ ಲಾಗುತ್ತಿದೆ. ಮಹಿಳೆಯರ ಹೆಸರಿನಲ್ಲಿ ಸಾಲ ನೀಡಲಾಗುತ್ತಿದೆ. ಮರುಪಾವತಿಯಲ್ಲಿ ಮಹಿಳೆಯರು ಮುಂದಿರುವ ಹಿನ್ನೆಲೆಯಲ್ಲಿ ಅವರಿಗೆ ಸವಲತ್ತು ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.<br /> <br /> ವಿದೇಶಕ್ಕೆ ವಿದ್ಯಾಭ್ಯಾಸ ಮಾಡಲು ತೆರಳುವ ವಿದ್ಯಾರ್ಥಿಗಳಿಗೂ ನಿಗಮದಿಂದ ಕೇಂದ್ರ ಸರ್ಕಾರದ ಸಹಯೋಗದಡಿ ಆರ್ಥಿಕ ನೆರವು ನೀಡಲಾಗುವುದು. ನಿಗಮದಿಂದ ಹಲವು ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: `ಶಿಷ್ಟಾಚಾರದ ಪ್ರಕಾರವೇ ನಿಗಮದಿಂದ ಫಲಾನುಭವಿ ಗಳಿಗೆ ಸವಲತ್ತು ವಿತರಿಸಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ಶಾಸಕರಿಗೂ ಮಾಹಿತಿ ತಿಳಿಸಲಾಗಿದೆ. ಆದರೆ, ಅವರು ಗೈರು ಹಾಜರಾಗಿರುವುದು ಅಸಮಾಧಾನ ತಂದಿದೆ~ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಹೇಳಿದರು. <br /> <br /> ತಾಲ್ಲೂಕಿನ ಕೋಳಿಪಾಳ್ಯ ಗ್ರಾಮದಲ್ಲಿ ಶುಕ್ರವಾರ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಶಿಲ್ಪಿ ಸಮೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ಸವಲತ್ತು ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> `ನನ್ನ ವಿವೇಚನಾ ಕೋಟಾದಡಿ 100 ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಬಡ ಕರಕುಶಲಕರ್ಮಿಗಳ ಆರ್ಥಿಕ ಸ್ವಾವಲಂಬನೆಗೆ ನೆರವಾಗಲು ನಿಗಮ ಮುಂದಾಗಿದೆ. 10 ಸಾವಿರ ರೂ ಸಹಾಯಧನ ಸೇರಿದಂತೆ 10 ಸಾವಿರ ರೂ ಸಾಲ ಸೌಲಭ್ಯ ನೀಡಲಾಗಿದೆ~ ಎಂದು ವಿವರಿಸಿದರು. <br /> <br /> 2011-12ನೇ ಸಾಲಿಗೆ ಪರಿಶಿಷ್ಟರಿಗೆ ಸೌಲಭ್ಯ ಕಲ್ಪಿಸಲು 4,600 ಕೋಟಿ ರೂ ಮಂಜೂರು ಮಾಡಿದೆ. ನಿಗಮದ ಮೂಲಕ ಗಂಗಾಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯಿಸಲು ಘಟಕ ವೆಚ್ಚವನ್ನು 1.50 ಲಕ್ಷ ರೂ ನಿಗದಿಪಡಿಸ ಲಾಗಿದೆ. ಇದರಲ್ಲಿ 1 ಲಕ್ಷ ಹಣವನ್ನು ಸರ್ಕಾರ ನೀಡಲಿದೆ. ಉಳಿದ ಹಣವನ್ನು ಸಾಲದ ರೂಪದಲ್ಲಿ ನೀಡಲಾಗುವುದು ಎಂದರು. <br /> <br /> ಗಂಗಾಕಲ್ಯಾಣ ಯೋಜನೆಯಡಿ ಜಿಲ್ಲೆಯಲ್ಲಿ 635 ಕೊಳವೆಬಾವಿಗಳಿಗೆ ಮಂಜೂರಾತಿ ನೀಡಲಾಗಿದೆ. ನಿಗಮದಿಂದ ಹೈನುಗಾರಿಕೆಗೂ ಸೌಲಭ್ಯ ಕಲ್ಪಿಸ ಲಾಗುತ್ತಿದೆ. ಮಹಿಳೆಯರ ಹೆಸರಿನಲ್ಲಿ ಸಾಲ ನೀಡಲಾಗುತ್ತಿದೆ. ಮರುಪಾವತಿಯಲ್ಲಿ ಮಹಿಳೆಯರು ಮುಂದಿರುವ ಹಿನ್ನೆಲೆಯಲ್ಲಿ ಅವರಿಗೆ ಸವಲತ್ತು ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.<br /> <br /> ವಿದೇಶಕ್ಕೆ ವಿದ್ಯಾಭ್ಯಾಸ ಮಾಡಲು ತೆರಳುವ ವಿದ್ಯಾರ್ಥಿಗಳಿಗೂ ನಿಗಮದಿಂದ ಕೇಂದ್ರ ಸರ್ಕಾರದ ಸಹಯೋಗದಡಿ ಆರ್ಥಿಕ ನೆರವು ನೀಡಲಾಗುವುದು. ನಿಗಮದಿಂದ ಹಲವು ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>