<p>ವಿಜಾಪುರ: ವಿಶ್ವವಿದ್ಯಾಲಯದ ಕಾರ್ಯಕ್ರಮ ಮತ್ತು ಯೋಜನೆಗಳು ದೇಶದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿರಬೇಕು ಎಂದು ಪಾಂಡಿಚೇರಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ವಿ.ಟಿ. ಪಾಟೀಲ ಸಲಹೆ ನೀಡಿದರು.<br /> <br /> ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಈಚೆಗೆ ನಡೆದ ಕಾಲೇಜುಗಳ ಪ್ರಾಚಾರ್ಯರು ಮತ್ತು ನ್ಯಾಕ್ ಸಂಯೋಜಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ಯು.ಜಿ.ಸಿ ಮಾರ್ಗದರ್ಶಿ ಹಾಗೂ ನ್ಯಾಕ್ ರಿಅಕ್ರೆಡಿಯೇಸನ್ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಕಾಲೇಜುಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಅದರಲ್ಲಿಯೂ ವಿಶೇಷವಾಗಿ ಆರ್ಥಿಕ ಸ್ವಾಯತ್ತತೆಯಂತಹ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಆಯಾ ಕಾಲೇಜುಗಳ ಪ್ರಾಚಾರ್ಯರು ಗಂಭೀರ ಚಿಂತನೆಗಳನ್ನು ಮಾಡಬೇಕು ಎಂದು ಹೇಳಿದರು.<br /> <br /> ಕಾಲೇಜುಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಮತ್ತು ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು ಅದರ ಪ್ರಕಾರ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದರು. ಪ್ರತಿಯೊಬ್ಬರು ಸಮರ್ಪಣಾಭಾವದಿಂದ ಮತ್ತು ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.<br /> <br /> ಕುಲಪತಿ ಪ್ರೊ.ಗೀತಾ ಬಾಲಿಮ, ಪದವಿ ಕೋರ್ಸ್ಗಳಲ್ಲಿ ಕ್ರೆಡಿಟ್ ವ್ಯವಸ್ಥೆ ಜಾರಿಗೊಳಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.<br /> <br /> ಸಂಸ್ಥೆಗಳನ್ನು ಬೆಳೆಸುವ ನಿಟ್ಟಿನಲ್ಲಿ ನಿಮ್ಮ ಜ್ಞಾನ ಮತ್ತು ಸಾಮರ್ಥ್ಯ ಬಳಕೆಯಾಗಬೇಕು. ವಿಶ್ವವಿದ್ಯಾಲಯದೊಂದಿಗೆ, ವಿದ್ಯಾರ್ಥಿಗಳು ಮತ್ತು ಸಹದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹಾಗೂ ಸಂವಹನ ಏರ್ಪಡಿಸಿಕೊಳ್ಳಬೇಕು. ಇದರಿಂದ ಸಂಸ್ಥೆಯ ಕಾರ್ಯನಿರ್ವಹಣೆ ಸುಲಭವಾಗುತ್ತದೆ ಎಂದು ವಿವರಿಸಿದರು.<br /> <br /> ಕುಲಸಚಿವ ಪ್ರೊ.ಜಿ.ಆರ್.ನಾಯಕ್, ಪ್ರತಿಯೊಂದು ಕಾಲೇಜಿನಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಕೊಳ್ಳಬೇಕು. ಗುಣಮಟ್ಟ ಕಾಪಾಡುವುದು ಒಂದು ನಿರಂತರ ಪ್ರಕ್ರಿಯೆಯಾಗಿದೆ ಎಂದರು.<br /> <br /> ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಪಿ.ಜಿ. ತಡಸದ ಮತ್ತು ಜೈವಿಕ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಎಸ್.ಬಿ. ಮಾಡಗಿ ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವೆ (ಮೌಲ್ಯಮಾಪನ) ಡಾ. ಡಿ.ಎಚ್. ತೇಜಾವತಿ ಉಪಸ್ಥಿತರಿದ್ದರು.<br /> <br /> ಡಾ. ವಿಜಯಾ ಕೋರಿಶೆಟ್ಟಿ ಸ್ವಾಗತಿಸಿದರು. ಡಾ. ಎಂ.ಬಿ. ದಿಲ್ಷಾದ್ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಾಪುರ: ವಿಶ್ವವಿದ್ಯಾಲಯದ ಕಾರ್ಯಕ್ರಮ ಮತ್ತು ಯೋಜನೆಗಳು ದೇಶದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿರಬೇಕು ಎಂದು ಪಾಂಡಿಚೇರಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ವಿ.ಟಿ. ಪಾಟೀಲ ಸಲಹೆ ನೀಡಿದರು.<br /> <br /> ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಈಚೆಗೆ ನಡೆದ ಕಾಲೇಜುಗಳ ಪ್ರಾಚಾರ್ಯರು ಮತ್ತು ನ್ಯಾಕ್ ಸಂಯೋಜಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ಯು.ಜಿ.ಸಿ ಮಾರ್ಗದರ್ಶಿ ಹಾಗೂ ನ್ಯಾಕ್ ರಿಅಕ್ರೆಡಿಯೇಸನ್ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಕಾಲೇಜುಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಅದರಲ್ಲಿಯೂ ವಿಶೇಷವಾಗಿ ಆರ್ಥಿಕ ಸ್ವಾಯತ್ತತೆಯಂತಹ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಆಯಾ ಕಾಲೇಜುಗಳ ಪ್ರಾಚಾರ್ಯರು ಗಂಭೀರ ಚಿಂತನೆಗಳನ್ನು ಮಾಡಬೇಕು ಎಂದು ಹೇಳಿದರು.<br /> <br /> ಕಾಲೇಜುಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಮತ್ತು ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು ಅದರ ಪ್ರಕಾರ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದರು. ಪ್ರತಿಯೊಬ್ಬರು ಸಮರ್ಪಣಾಭಾವದಿಂದ ಮತ್ತು ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.<br /> <br /> ಕುಲಪತಿ ಪ್ರೊ.ಗೀತಾ ಬಾಲಿಮ, ಪದವಿ ಕೋರ್ಸ್ಗಳಲ್ಲಿ ಕ್ರೆಡಿಟ್ ವ್ಯವಸ್ಥೆ ಜಾರಿಗೊಳಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.<br /> <br /> ಸಂಸ್ಥೆಗಳನ್ನು ಬೆಳೆಸುವ ನಿಟ್ಟಿನಲ್ಲಿ ನಿಮ್ಮ ಜ್ಞಾನ ಮತ್ತು ಸಾಮರ್ಥ್ಯ ಬಳಕೆಯಾಗಬೇಕು. ವಿಶ್ವವಿದ್ಯಾಲಯದೊಂದಿಗೆ, ವಿದ್ಯಾರ್ಥಿಗಳು ಮತ್ತು ಸಹದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹಾಗೂ ಸಂವಹನ ಏರ್ಪಡಿಸಿಕೊಳ್ಳಬೇಕು. ಇದರಿಂದ ಸಂಸ್ಥೆಯ ಕಾರ್ಯನಿರ್ವಹಣೆ ಸುಲಭವಾಗುತ್ತದೆ ಎಂದು ವಿವರಿಸಿದರು.<br /> <br /> ಕುಲಸಚಿವ ಪ್ರೊ.ಜಿ.ಆರ್.ನಾಯಕ್, ಪ್ರತಿಯೊಂದು ಕಾಲೇಜಿನಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಕೊಳ್ಳಬೇಕು. ಗುಣಮಟ್ಟ ಕಾಪಾಡುವುದು ಒಂದು ನಿರಂತರ ಪ್ರಕ್ರಿಯೆಯಾಗಿದೆ ಎಂದರು.<br /> <br /> ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಪಿ.ಜಿ. ತಡಸದ ಮತ್ತು ಜೈವಿಕ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಎಸ್.ಬಿ. ಮಾಡಗಿ ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವೆ (ಮೌಲ್ಯಮಾಪನ) ಡಾ. ಡಿ.ಎಚ್. ತೇಜಾವತಿ ಉಪಸ್ಥಿತರಿದ್ದರು.<br /> <br /> ಡಾ. ವಿಜಯಾ ಕೋರಿಶೆಟ್ಟಿ ಸ್ವಾಗತಿಸಿದರು. ಡಾ. ಎಂ.ಬಿ. ದಿಲ್ಷಾದ್ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>